AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹೊಸ ಸರ್ಕಾರದಿಂದ ಶಿವರಾಜ್ ಕುಮಾರ್ ಅವರಿಗಿರುವ ನಿರೀಕ್ಷೆ ಇಷ್ಟೆ

Shiva Rajkumar: ಸಿದ್ದರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್, ಹೊಸ ಸರ್ಕಾರದಿಂದ ತಾವು ಬಯಸುತ್ತಿರುವುದು ಏನನ್ನು ಎಂದು ಮಾಧ್ಯಮಗಳ ಮುಂದೆ ಹೇಳಿದರು.

ಕರ್ನಾಟಕದ ಹೊಸ ಸರ್ಕಾರದಿಂದ ಶಿವರಾಜ್ ಕುಮಾರ್ ಅವರಿಗಿರುವ ನಿರೀಕ್ಷೆ ಇಷ್ಟೆ
ಶಿವಣ್ಣ
ಮಂಜುನಾಥ ಸಿ.
|

Updated on: May 20, 2023 | 3:47 PM

Share

ಸಿಎಂ ಸಿದ್ದರಾಮಯ್ಯ (Siddaramaiah) ಕರ್ನಾಟಕ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಇಂದು (ಮೇ 20) ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ, ತಮಿಳುನಾಡು ಸಿಎಂ ಸ್ಟಾಲಿನ್, ಇನ್ನೂ ಹಲವು ರಾಜಕೀಯ ಮುಖಂಡರು, ಧುರಿಣರು ಹಾಜರಿದ್ದ ಅದ್ಧೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ಹಾಗೂ ಅವರೊಟ್ಟಿಗೆ ಡಿಕೆ ಶಿವಕುಮಾರ್ ಇನ್ನಿತರೆ ಕೆಲವು ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಸಮಾರಂಭದಲ್ಲಿ ಕೆಲವು ಸಿನಿಮಾ ತಾರೆಯರು ಸಹ ಭಾಗಿಯಾಗಿದ್ದರು. ನಟ ಶಿವರಾಜ್ ಕುಮಾರ್ (Shiva Rajkumar), ಗೀತಾ ಶಿವರಾಜ್​ಕುಮಾರ್ (Geetha Shivarajkumar) ಸಹ ಭಾಗಿಯಾಗಿ ನೂತನ ಸಿಎಂ ಹಾಗೂ ಸಚಿವರಿಗೆ ಶುಭ ಹಾರೈಸಿದರು.

ಹೊಸ ಸರ್ಕಾರ ರಚನೆ ಆಗಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವರಾಜ್​ಕುಮಾರ್, ”ಜನರು ಬದಲಾವಣೆ ಬೇಕೆಂಬ ಆಸೆಯಿಂದ ಮತ ಹಾಕಿದ್ದಾರೆ ಅಂತೆಯೇ ಬದಲಾವಣೆ ಆಗಿದೆ. ಜನರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡಲು ದೇವರು ಅವರಿಗೆ (ಸರ್ಕಾರಕ್ಕೆ) ಶಕ್ತಿ ಕೊಡಲಿ, ಎಲ್ಲರೂ ನೂತನ ಸರ್ಕಾರಕ್ಕೆ ಬೆಂಬಲ, ಸಹಕಾರ ನೀಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ” ಎಂದಿದ್ದಾರೆ.

ಮುಂದುವರೆದು, ”ಜನರು ದೊಡ್ಡದಾಗಿ ಬೆಂಬಲ ನೀಡಿದ್ದಾರೆ. ಈಗ ಆಯ್ಕೆ ಆಗಿರುವವರು ಸಹ ಜನರು ನೀಡಿರುವ ಬೆಂಬಲಕ್ಕೆ ತಕ್ಕಂತೆ ಸರ್ಕಾರ ನಡೆಸಬೇಕು. ಜನಗಳಿಗೆ ಒಳ್ಳೆಯದಾಗಬೇಕು ಅಷ್ಟೆ” ಎಂದ ಶಿವಣ್ಣ, ತಾವು ಈ ಬಾರಿ ಪ್ರಚಾರ ಮಾಡಿರುವ ಬಗ್ಗೆ ಮಾತನಾಡಿ, ”ನನ್ನದೇನು ದೊಡ್ಡ ಕಾಣಿಕೆ ಇಲ್ಲ. ಸಣ್ಣ ಸೇವೆಯಷ್ಟೆ. ಜನರು ಕೆಲವು ನಿರೀಕ್ಷೆಗಳಿಟ್ಟುಕೊಂಡು ಸರ್ಕಾರ ತಂದಿದ್ದಾರೆ. ಆ ನಿರೀಕ್ಷೆಗಳನ್ನು ಈಡೇರಿಸಿದರೆ ಸಾಕು” ಎಂದಿದ್ದಾರೆ.

ಐದು ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ ಶಿವಣ್ಣ, ”ನನಗೆ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚು ಗೊತ್ತಾಗಲ್ಲ. ಆದರೆ ಜನರಿಗೆ ಒಳ್ಳೆಯದಾಗಬೇಕು ಆ ರೀತಿಯ ಕೆಲಸಗಳನ್ನು ಸರ್ಕಾರ ಖಂಡಿತ ಮಾಡುತ್ತದೆ ಎಂಬ ವಿಶ್ವಾಸವಿದೆ. ಜನರ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ದೇವರು ನೀಡಲಿ” ಎಂಬುದು ನನ್ನ ಹಾರೈಕೆ ಎಂದಿದ್ದಾರೆ.

ಶಿವರಾಜ್ ಕುಮಾರ್ ಅವರು ಈ ಬಾರಿ ಸಕ್ರಿಯವಾಗಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಅವರ ಪರವಾಗಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದರು. ಆ ಬಳಿಕ ಇನ್ನೂ ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಶಿವಣ್ಣ-ಗೀತಕ್ಕ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರ ಪರವಾಗಿಯೂ ವರುಣಾನಲ್ಲಿ ಶಿವಣ್ಣ ಪ್ರಚಾರ ಮಾಡಿದ್ದರು.

ಶಿವಣ್ಣ ಪ್ರಚಾರ ಮಾಡಿದ ಹಲವು ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಮಧು ಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯಕ್, ಸಿದ್ದರಾಮಯ್ಯ ಅವರುಗಳು ಗೆದ್ದಿದ್ದಾರೆ. ಜಗದೀಶ್ ಶೆಟ್ಟಿ, ಅಶೋಖ್ ಖೇಣಿ, ಕಿಮ್ಮನೆ ರತ್ನಾಕರ್, ಸತೀಶ್ ಕೃಷ್ಣ ಸೈಲ್ ಸೋತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ