AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಂ ಫೇಸ್ಟ್​ ಉದ್ಘಾಟನೆಯಲ್ಲಿ ಶಿವಣ್ಣ ಮಾತು, ಅಭಿಮಾನಿಗಳಿಗೆ ಕೊಟ್ಟರು ಸಿಹಿ ಸುದ್ದಿ

Shiva Rajkumar: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಇಂದು ಅದ್ಧೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಸಹ ಭಾಗಿಯಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರು ಭಾಗವಹಿಸಿದ ಮೊದಲ ಸಾರ್ವಜನಿಕ ಕಾರ್ಯಕ್ರಮವಿದು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದರು. ಶಿವಣ್ಣ ಹೇಳಿದ್ದೇನು? ಇಲ್ಲಿದೆ ಮಾಹಿತಿ...

ಫಿಲಂ ಫೇಸ್ಟ್​ ಉದ್ಘಾಟನೆಯಲ್ಲಿ ಶಿವಣ್ಣ ಮಾತು, ಅಭಿಮಾನಿಗಳಿಗೆ ಕೊಟ್ಟರು ಸಿಹಿ ಸುದ್ದಿ
Biffs Shiva Rajkumar
ಮಂಜುನಾಥ ಸಿ.
|

Updated on:Mar 01, 2025 | 8:10 PM

Share

ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವದ ಉದ್ಘಾಟನೆ ಇಂದು (ಮಾರ್ಚ್ 01) ವಿಧಾನಸೌಧದ ಮುಂಭಾಗ ನಡೆದ ಅದ್ಧೂರಿಯಾ ಕಾರ್ಯಕ್ರಮದಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಹಲವು ಸಚಿವರು ಸೇರಿದಂತೆ ನಟರಾದ ಶಿವರಾಜ್ ಕುಮಾರ್, ಚಿತ್ರೋತ್ಸವದ ರಾಯಭಾರಿ ನಟ ಕಿಶೋರ್, ನಟಿ ಪ್ರಿಯಾಂಕಾ ಮೋಹನ್ ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವಣ್ಣ, ‘ಚಲನಚಿತ್ರೋತ್ಸವಕ್ಕೆ ಪ್ರತಿ ವರ್ಷವೂ ಬರುತ್ತಲೇ ಇರುತ್ತೇನೆ. ಕಳೆದ ವರ್ಷ ಬರಲಾಗಿರಲಿಲ್ಲ, ಇದು ನಮ್ಮ ಮನೆಯ ಹಬ್ಬದಂತೆ. ಇವತ್ತು ನಮ್ಮ ಕನ್ನಡ ಸಿನಿಮಾ ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಾಣವಾಗುತ್ತಿದೆ. ಅದು ಬಹಳ ಹೆಮ್ಮೆ ಎನಿಸುತ್ತದೆ. ಈ ಉತ್ಸವದ ರಾಯಭಾರಿ ಕಿಶೋರ್, ನಮ್ಮ ಹಳೆಯ ಮಿತ್ರ. ನಟಿ ಪ್ರಿಯಾಂಕಾ ಮೋಹನ್, ನಾನು ನಟಿಸಿದ ತಮಿಳು ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ನಲ್ಲಿ ನಟಿಸಿದ್ದರು. ಅವರು ಇಲ್ಲಿನವರೇ’ ಎಂದರು ಶಿವಣ್ಣ.

ಇದನ್ನೂ ಓದಿ:ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ

‘ಕೆಲವು ದಿನಗಳ ಹಿಂದೆಯಷ್ಟೆ ನನ್ನ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಬಂದಿದ್ದೇನೆ. ಈ ಸಮಯದಲ್ಲಿ ನೀವು ತೋರಿದ ಪ್ರೀತಿ, ವಿಶ್ವಾಸ ನಾನು ಮರೆಯುವುದಿಲ್ಲ. ನೀವು ನೀಡಿದ ಶುಭ ಹಾರೈಕೆ, ಪೂಜೆ ಪುನಸ್ಕಾರಗಳು ನಮ್ಮನ್ನು ಇಲ್ಲಿಯವರೆಗೆ ತಂದು ನಿಲ್ಲಿಸಿದೆ. ನಾಡಿದ್ದಿನಿಂದ (ಸೋಮವಾರ) ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತಿದ್ದೀನಿ. ನಿಮ್ಮೆಲ್ಲರ ಸಹಕಾರ, ಹಾರೈಕೆಗಳು ಹಿಂದಿನಂತೆಯೇ ಇರಲಿವೆ ಎಂದು ಭಾವಿಸಿದ್ದೇನೆ. ಅದೇ ಹಳೆ ಎನರ್ಜಿ, ಪವರ್​ ಮೂಲಕ ಮುಂದೆ ಹೋಗಲಿದ್ದೇನೆ. ನಿಮ್ಮ ಆಶೀರ್ವಾದ ಇರುವವರೆಗೆ ನನ್ನ ಎನರ್ಜಿ ಕಡಿಮೆ ಆಗುವುದಿಲ್ಲ, ಖಂಡಿತ ಶಿಸ್ತಿನಿಂದ ಕೆಲಸ ಮಾಡುತ್ತೀನಿ’ ಎಂದರು ಶಿವಣ್ಣ.

‘ಈ ಬಾರಿಯ ಚಿತ್ರೋತ್ಸವಕ್ಕೆ ಸರ್ವಜನಾಂಗದ ಶಾಂತಿಯ ತೋಟ ಎಂಬ ಥೀಮ್ ಇಟ್ಟಿರುವುದು ಅರ್ಥಪೂರ್ಣವಾದುದು ಎಂದು ಭಾವಿಸುತ್ತೇನೆ. ಕರ್ನಾಟಕದಲ್ಲಿ ಯಾವುದೇ ಭಾಷೆ, ಯಾವುದೇ ಜನಾಂಗವಾದರೂ ನಾವು ಎಲ್ಲರನ್ನು ಸ್ವಾಗತಿಸುತ್ತೇವೆ, ಪ್ರೀತಿಸುತ್ತೇವೆ. ಈ ಸಿನಿಮಾ ಉತ್ಸವಕ್ಕೆ ‘ಸರ್ವಜನಾಂಗ ಶಾಂತಿಯ ತೋಟ’ ಎಂಬ ಥೀಮ್ ಇಟ್ಟಿರುವುದು ನನಗೆ ಬಹಳ ಹಿಡಿಸಿತು’ ಎಂದಿದ್ದಾರೆ ಶಿವಣ್ಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Sat, 1 March 25

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು