AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಂ ಫೇಸ್ಟ್​ ಉದ್ಘಾಟನೆಯಲ್ಲಿ ಶಿವಣ್ಣ ಮಾತು, ಅಭಿಮಾನಿಗಳಿಗೆ ಕೊಟ್ಟರು ಸಿಹಿ ಸುದ್ದಿ

Shiva Rajkumar: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಇಂದು ಅದ್ಧೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಸಹ ಭಾಗಿಯಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರು ಭಾಗವಹಿಸಿದ ಮೊದಲ ಸಾರ್ವಜನಿಕ ಕಾರ್ಯಕ್ರಮವಿದು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದರು. ಶಿವಣ್ಣ ಹೇಳಿದ್ದೇನು? ಇಲ್ಲಿದೆ ಮಾಹಿತಿ...

ಫಿಲಂ ಫೇಸ್ಟ್​ ಉದ್ಘಾಟನೆಯಲ್ಲಿ ಶಿವಣ್ಣ ಮಾತು, ಅಭಿಮಾನಿಗಳಿಗೆ ಕೊಟ್ಟರು ಸಿಹಿ ಸುದ್ದಿ
Biffs Shiva Rajkumar
Follow us
ಮಂಜುನಾಥ ಸಿ.
|

Updated on:Mar 01, 2025 | 8:10 PM

ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವದ ಉದ್ಘಾಟನೆ ಇಂದು (ಮಾರ್ಚ್ 01) ವಿಧಾನಸೌಧದ ಮುಂಭಾಗ ನಡೆದ ಅದ್ಧೂರಿಯಾ ಕಾರ್ಯಕ್ರಮದಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಹಲವು ಸಚಿವರು ಸೇರಿದಂತೆ ನಟರಾದ ಶಿವರಾಜ್ ಕುಮಾರ್, ಚಿತ್ರೋತ್ಸವದ ರಾಯಭಾರಿ ನಟ ಕಿಶೋರ್, ನಟಿ ಪ್ರಿಯಾಂಕಾ ಮೋಹನ್ ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವಣ್ಣ, ‘ಚಲನಚಿತ್ರೋತ್ಸವಕ್ಕೆ ಪ್ರತಿ ವರ್ಷವೂ ಬರುತ್ತಲೇ ಇರುತ್ತೇನೆ. ಕಳೆದ ವರ್ಷ ಬರಲಾಗಿರಲಿಲ್ಲ, ಇದು ನಮ್ಮ ಮನೆಯ ಹಬ್ಬದಂತೆ. ಇವತ್ತು ನಮ್ಮ ಕನ್ನಡ ಸಿನಿಮಾ ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಾಣವಾಗುತ್ತಿದೆ. ಅದು ಬಹಳ ಹೆಮ್ಮೆ ಎನಿಸುತ್ತದೆ. ಈ ಉತ್ಸವದ ರಾಯಭಾರಿ ಕಿಶೋರ್, ನಮ್ಮ ಹಳೆಯ ಮಿತ್ರ. ನಟಿ ಪ್ರಿಯಾಂಕಾ ಮೋಹನ್, ನಾನು ನಟಿಸಿದ ತಮಿಳು ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ನಲ್ಲಿ ನಟಿಸಿದ್ದರು. ಅವರು ಇಲ್ಲಿನವರೇ’ ಎಂದರು ಶಿವಣ್ಣ.

ಇದನ್ನೂ ಓದಿ:ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ

‘ಕೆಲವು ದಿನಗಳ ಹಿಂದೆಯಷ್ಟೆ ನನ್ನ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಬಂದಿದ್ದೇನೆ. ಈ ಸಮಯದಲ್ಲಿ ನೀವು ತೋರಿದ ಪ್ರೀತಿ, ವಿಶ್ವಾಸ ನಾನು ಮರೆಯುವುದಿಲ್ಲ. ನೀವು ನೀಡಿದ ಶುಭ ಹಾರೈಕೆ, ಪೂಜೆ ಪುನಸ್ಕಾರಗಳು ನಮ್ಮನ್ನು ಇಲ್ಲಿಯವರೆಗೆ ತಂದು ನಿಲ್ಲಿಸಿದೆ. ನಾಡಿದ್ದಿನಿಂದ (ಸೋಮವಾರ) ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತಿದ್ದೀನಿ. ನಿಮ್ಮೆಲ್ಲರ ಸಹಕಾರ, ಹಾರೈಕೆಗಳು ಹಿಂದಿನಂತೆಯೇ ಇರಲಿವೆ ಎಂದು ಭಾವಿಸಿದ್ದೇನೆ. ಅದೇ ಹಳೆ ಎನರ್ಜಿ, ಪವರ್​ ಮೂಲಕ ಮುಂದೆ ಹೋಗಲಿದ್ದೇನೆ. ನಿಮ್ಮ ಆಶೀರ್ವಾದ ಇರುವವರೆಗೆ ನನ್ನ ಎನರ್ಜಿ ಕಡಿಮೆ ಆಗುವುದಿಲ್ಲ, ಖಂಡಿತ ಶಿಸ್ತಿನಿಂದ ಕೆಲಸ ಮಾಡುತ್ತೀನಿ’ ಎಂದರು ಶಿವಣ್ಣ.

‘ಈ ಬಾರಿಯ ಚಿತ್ರೋತ್ಸವಕ್ಕೆ ಸರ್ವಜನಾಂಗದ ಶಾಂತಿಯ ತೋಟ ಎಂಬ ಥೀಮ್ ಇಟ್ಟಿರುವುದು ಅರ್ಥಪೂರ್ಣವಾದುದು ಎಂದು ಭಾವಿಸುತ್ತೇನೆ. ಕರ್ನಾಟಕದಲ್ಲಿ ಯಾವುದೇ ಭಾಷೆ, ಯಾವುದೇ ಜನಾಂಗವಾದರೂ ನಾವು ಎಲ್ಲರನ್ನು ಸ್ವಾಗತಿಸುತ್ತೇವೆ, ಪ್ರೀತಿಸುತ್ತೇವೆ. ಈ ಸಿನಿಮಾ ಉತ್ಸವಕ್ಕೆ ‘ಸರ್ವಜನಾಂಗ ಶಾಂತಿಯ ತೋಟ’ ಎಂಬ ಥೀಮ್ ಇಟ್ಟಿರುವುದು ನನಗೆ ಬಹಳ ಹಿಡಿಸಿತು’ ಎಂದಿದ್ದಾರೆ ಶಿವಣ್ಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Sat, 1 March 25

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್