AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಫ್ಯಾನ್ಸ್ ವಿರುದ್ಧ ಸಮರ: ರಮ್ಯಾ ಬೆಂಬಲಕ್ಕೆ ನಿಂತ ಶಿವರಾಜ್ ಕುಮಾರ್

Shiva Rajkumar stand with Ramya: ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟಿ ರಮ್ಯಾ ಸಿಡಿದೆದ್ದಿದ್ದು ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ರಮ್ಯಾ ಬಗ್ಗೆ ದರ್ಶನ್ ಅಭಿಮಾನಿಗಳು ಮಾಡಿರುವ ಅಶ್ಲೀಲ ಕಮೆಂಟ್​ಗಳನ್ನು ಖಂಡಿಸಿ ಇದೀಗ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಸಹ ನಟಿ ರಮ್ಯಾ ಅವರ ಬೆಂಬಲಕ್ಕೆ ನಿಂತಿದ್ದಾರೆ.

ದರ್ಶನ್ ಫ್ಯಾನ್ಸ್ ವಿರುದ್ಧ ಸಮರ: ರಮ್ಯಾ ಬೆಂಬಲಕ್ಕೆ ನಿಂತ ಶಿವರಾಜ್ ಕುಮಾರ್
Darshan Thoogudeepa
ಮಂಜುನಾಥ ಸಿ.
|

Updated on: Jul 29, 2025 | 2:50 PM

Share

ತಮ್ಮ ವಿರುದ್ಧ ಅಶ್ಲೀಲ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿರುವ, ಅಶ್ಲೀಲವಾಗಿ ಕಮೆಂಟ್ ಮಾಡುತ್ತಾ ನಿಂದಿಸುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಸಮರ ಸಾರಿದ್ದಾರೆ. ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಖಂಡಿಸುತ್ತಿದ್ದ ರಮ್ಯಾ ಇದೀಗ ಕಾನೂನು ಮೊರೆ ಹೋಗಿದ್ದು, ಪೊಲೀಸರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಆನ್​ಲೈನ್ ಟ್ರೋಲಿಂಗ್ ವಿರುದ್ಧ ರಮ್ಯಾ ಮಾಡುತ್ತಿರುವ ಈ ಸಮರದಲ್ಲಿ ರಮ್ಯಾಗೆ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇಂದು (ಜುಲೈ 29) ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಶಿವರಾಜ್ ಕುಮಾರ್, ‘ರಮ್ಯಾ, ನಿಮ್ಮ ನಿಲವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ’ ಎಂದಿದ್ದಾರೆ. ಮುಂದುವರೆದು, ‘ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಹೀಗೆ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು’ ಎಂದಿದ್ದಾರೆ.

‘ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಷಿಯಲ್ ಮೀಡಿಯಾ ತುಂಬಾ ಬಲಷ್ಠವಾದ ಅಸ್ತ್ರ ಅದನ್ನು ತಮ್ಮ ಏಳಿಗಾಗಿ ಬಳಸಬೇಕೇ ಹೊರತು ಅವಾಚ್ಯ ಶಬ್ದಗಳಿಂದ ನಿಂದಿಸಿ ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲವು ಸರಿಯದೆ, ನಿಮ್ಮ ಜೊತೆ ನಾವು ನಿಲ್ಲುತ್ತೇವೆ’ ಎಂದಿದ್ದಾರೆ. ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರೂ ಸಹ ಈ ಸಂದೇಶವನ್ನು ಹಂಚಿಕೊಂಡಿದ್ದು, ಇಬ್ಬರೂ ಸಹ ರಮ್ಯಾ ಪರವಾಗಿ ನಿಂತಿದ್ದಾರೆ.

ಇದನ್ನೂ ಓದಿ:ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಕಮೀಷನರ್ ಹೇಳಿದ್ದೇನು?

ಶಿವರಾಜ್ ಕುಮಾರ್ ಅವರು ರಮ್ಯಾಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್​ ಅನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟ ಯುವ ರಾಜ್​ಕುಮಾರ್ ತಾವೂ ಸಹ ರಮ್ಯಾ ಪರವಾಗಿ ನಿಂತಿರುವುದಾಗಿ ಘೋಷಿಸಿದ್ದಾರೆ. ಆ ಮೂಲಕ ದೊಡ್ಮನೆ ಕುಟುಂಬದವರು ಸಂತ್ರಸ್ತ ನಟಿಯ ಪರವಾಗಿ ನಿಂತಿದ್ದಾರೆ.

ದರ್ಶನ್ ಜಾಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನ ಹೇಳಿಕೆಯನ್ನು ಆಧರಿಸಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕುವ ವಿಶ್ವಾಸವಿದೆ ಎಂದು ರಮ್ಯಾ ಹೇಳಿದ್ದರು. ಅದರ ಬೆನ್ನಲ್ಲೆ ದರ್ಶನ್ ಅಭಿಮಾನಿಗಳು ರಮ್ಯಾರ ವಿರುದ್ಧ ಅಶ್ಲೀಲ ಪೋಸ್ಟ್​ಗಳನ್ನು ಹಂಚಿಕೊಳ್ಳಲು ಆರಂಭಿಸಿದರು. ಇದನ್ನು ಕಟುವಾಗಿ ವಿರೋಧಿಸಿದ್ದ ರಮ್ಯಾ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್