AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮುಗಿಯಿತು ‘ಭೈರತಿ ರಣಗಲ್’ ಚಿತ್ರೀಕರಣ, ಬಿಡುಗಡೆ ದಿನಾಂಕ ಬದಲು?

ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದ್ದ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

ಕೊನೆಗೂ ಮುಗಿಯಿತು ‘ಭೈರತಿ ರಣಗಲ್’ ಚಿತ್ರೀಕರಣ, ಬಿಡುಗಡೆ ದಿನಾಂಕ ಬದಲು?
ಮಂಜುನಾಥ ಸಿ.
|

Updated on: Jul 05, 2024 | 1:22 PM

Share

ಶಿವರಾಜ್ ಕುಮಾರ್ ನಟನೆಯ ಹಲವು ಸಿನಿಮಾಗಳು ಪ್ರೊಡಕ್ಷನ್, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. ಈ ಸಿನಿಮಾಗಳು ಪ್ರೇಕ್ಷಕರಲ್ಲಿ ದೊಡ್ಡ ಮಟ್ಟಿಗಿನ ನಿರೀಕ್ಷೆ ಮೂಡಿಸಿವೆ. ನಿರೀಕ್ಷೆ ಮೂಡಿಸಿದ ಸಿನಿಮಾಗಳಲ್ಲಿ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಸಹ ಒಂದು. ಈ ಸಿನಿಮಾದ ಘೋಷಣೆಯಾಗಿ ತಿಂಗಳುಗಲೇ ಕಳೆದಿವೆ. ಆದರೆ ಯಾಕೋ ಏನೋ ಚಿತ್ರೀಕರಣ ತಡವಾಗಿತ್ತು. ಇದೀಗ ಭೈರತಿ ರಣಗಲ್ ಚಿತ್ರೀಕರಣ ಪೂರ್ಣಗೊಂಡಿದೆ.

2017ರಲ್ಲಿ ಬಿಡುಗಡೆ ಆಗಿದ್ದ ‘ಮಫ್ತಿ’ ಸಿನಿಮಾ ಭಾರಿ ಹಿಟ್ ಆಗಿತ್ತು. ಸಿನಿಮಾದಲ್ಲಿ ‘ಭೈರತಿ ರಣಗಲ್’ ಪಾತ್ರದಲ್ಲಿ ಶಿವರಾಜ್ ಕುಮಾರ್ ಮಿಂಚಿದ್ದರು. ಈ ಪಾತ್ರ ಸಖತ್ ಜನಪ್ರಿಯತೆ ಗಳಿಸಿತ್ತು. ಇದೀಗ ಅದೇ ಪಾತ್ರವನ್ನು ಪ್ರಧಾನವಾಗಿ ಇರಿಸಿಕೊಂಡು ‘ಭೈರತಿ ರಣಗಲ್’ ಸಿನಿಮಾ ಮಾಡಲಾಗುತ್ತಿದೆ. ‘ಮಫ್ತಿ’ ಸಿನಿಮಾದಲ್ಲಿ ನಡೆದ ಕತೆಗಿಂತಲೂ ಹಿಂದಿನ ಕತೆಯನ್ನು ‘ಭೈರತಿ ರಣಗಲ್’ ಸಿನಿಮಾನಲ್ಲಿ ಹೇಳಲಾಗುತ್ತದೆ.

ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಗಿದಿದ್ದು, ಚಿತ್ರತಂಡ ಕುಂಬಳಕಾಯಿ ಒಡೆದಿದೆ. ಸಿನಿಮಾದ ಚಿತ್ರೀಕರಣಕ್ಕೆ ತುಸು ಹೆಚ್ಚೇ ಸಮಯವನ್ನು ನಿರ್ದೇಶಕ ನರ್ತನ್ ತೆಗೆದುಕೊಂಡಿದ್ದಾರೆ. ಕೊನೆಗೂ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಶೀಘ್ರವೇ ಆರಂಭವಾಗಲಿವೆ. ಎಡಿಟಿಂಗ್, ಸೌಂಡ್ ಮಿಕ್ಸಿಂಗ್, ಕಲರ್ ಗ್ರೇಡಿಂಗ್, ಡಿಟಿಎಸ್ ಮಿಕ್ಸಿಂಗ್, ಕಲರ್ ಕರೆಕ್ಷನ್ ಹಾಗೂ ಡಬ್ಬಿಂಗ್ ಎಲ್ಲವನ್ನೂ ಪೂರ್ಣಗೊಳಿಸಿದ ಬಳಿಕ ಸಿನಿಮಾದ ಬಿಡುಗಡೆ ಆಗಲಿದೆ.

ಇದನ್ನೂ ಓದಿ:ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಆಗಸ್ 15ಕ್ಕೆ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಕೆಲವು ಪೋಸ್ಟರ್​ಗಳು ಸಹ ಈ ಕುರಿತು ಹರಿದಾಡಿದ್ದವು. ಆದರೆ ಸಿನಿಮಾದ ಚಿತ್ರೀಕರಣ ಮುಗಿಯಲು ಹೆಚ್ಚು ಸಮಯ ಹಿಡಿದಿರುವ ಕಾರಣ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

‘ಮಫ್ತಿ’ ಸಿನಿಮಾದಲ್ಲಿದ್ದ ಕೆಲವು ಪಾತ್ರಗಳು ‘ಭೈರತಿ ರಣಗಲ್’ ಸಿನಿಮಾನಲ್ಲಿಯೂ ಇರಲಿವೆ. ಗುರುದೇಶಪಾಂಡೆ, ಬಾಬು ಹಿರಣ್ಣಯ್ಯ, ಛಾಯಾ ಸಿಂಗ್ ಇನ್ನೂ ಕೆಲವರು ಈ ಸಿನಿಮಾದಲ್ಲಿಯೂ ಇರಲಿದ್ದಾರೆ. ಇವರ ಜೊತೆಗೆ ರುಕ್ಮಿಣಿ ವಸಂತ್, ರಾಹುಲ್ ಬೋಸ್ ಇನ್ನಿತರೆ ಕೆಲವು ಪಾತ್ರಗಳು ಸೇರಿಕೊಂಡಿವೆ. ಸಿನಿಮಾವನ್ನು ನರ್ತನ್ ನಿರ್ದೇಶನ ಮಾಡಿದ್ದು, ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ