Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಅವರಿಗೆ ದೊಡ್ಮನೆಯೊಟ್ಟಿಗೆ ಇದ್ದ ಬಾಂಧವ್ಯ ವಿವರಿಸಿದ ಶಿವಣ್ಣ

Shiva Rajkumar: ಮಾಜಿ ಸಿಎಂ ಎಸ್​ಎಂ ಕೃಷ್ಣ ಅವರು ಇಂದು ನಿಧನ ಹೊಂದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ನಡುವೆಯೂ ಸಹ ಕೃಷ್ಣ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೊಡ್ಮನೆಯೊಟ್ಟಿಗೆ ಕೃಷ್ಣ ಅವರಿಗೆ ಇದ್ದ ಸಂಬಂಧದ ಬಗ್ಗೆ ಮಾತನಾಡಿದರು.

ಕೃಷ್ಣ ಅವರಿಗೆ ದೊಡ್ಮನೆಯೊಟ್ಟಿಗೆ ಇದ್ದ ಬಾಂಧವ್ಯ ವಿವರಿಸಿದ ಶಿವಣ್ಣ
ಶಿವರಾಜ್ ಕುಮಾರ್-ಕೃಷ್ಣ
Follow us
ಮಂಜುನಾಥ ಸಿ.
|

Updated on: Dec 10, 2024 | 3:14 PM

ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಕೆಲವೇ ದಿನಗಳಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅನಾರೋಗ್ಯದ ನಡುವೆಯೂ ಶಿವಣ್ಣ, ಇಂದು (ಡಿಸೆಂಬರ್ 10) ನಿಧನರಾದ ಎಸ್​ಎಂ ಕೃಷ್ಣ ಅವರಿಗೆ ಅಂತಿಮ ದರ್ಶನಕ್ಕೆಂದು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕೃಷ್ಣ ಅವರ ಬಗ್ಗೆ ಮಾತನಾಡಿದ ಶಿವಣ್ಣ, ದೊಡ್ಮನೆ ಕುಟುಂಬಕ್ಕೆ ಕೃಷ್ಣ ಅವರೊಟ್ಟಿಗೆ ಇರುವ ಬಾಂಧವ್ಯದ ಬಗ್ಗೆ ಮಾತನಾಡಿದರು. ರಾಜ್​ಕುಮಾರ್ ಅಪಹರಣದ ಸಮಯದಲ್ಲಿ ಕೃಷ್ಣ ಅವರು ನೀಡಿದ ನೆರವಿನ ಬಗ್ಗೆಯೂ ಮಾತನಾಡಿದರು.

‘ಕೃಷ್ಣ ಅವರೆಂದರೆ ತಂದೆಯವರಿಗೆ (ರಾಜ್​ಕುಮಾರ್) ಹಾಗೂ ನಮ್ಮ ಕುಟುಂಬಕ್ಕೆ ವಿಶೇಷ ಗೌರವ. ನಮ್ಮ ತಂದೆಯವರು ಯಾವಾಗಲೂ ಹೇಳುತ್ತಿದ್ದರು ಒಬ್ಬ ಸೊಫೆಸ್ಟಿಕೇಟೆಡ್ ವ್ಯಕ್ತಿಯೆಂದರೆ ಅದು ಎಸ್​ಎಂ ಕೃಷ್ಣ ರೀತಿಯಾಗಿರಬೇಕು ಎಂದು. ಶಿಸ್ತಿನ ಜೀವನ ನಡೆಸಿದರು, ಶಿಸ್ತಿನ ವ್ಯಕ್ತಿತ್ವ ಅವರದ್ದು. ಅಂತಹಾ ವ್ಯಕ್ತಿಗಳು ಬಹಳ ಅಪರೂಪ. ವೈಯಕ್ತಿಕವಾಗಿಯೂ ನಮಗೆ ಸಹ ಅವರೊಟ್ಟಿಗೆ ಬಹಳ ಆತ್ಮೀಯತೆ ಇತ್ತು. ಅವರ ಅಳಿಯ ಅವರೊಟ್ಟಿಗೂ ಆತ್ಮೀಯತೆ ಇತ್ತು, ಅವರ ಪತ್ನಿಯವರೊಟ್ಟಿಗೂ ಆತ್ಮೀಯತೆ ಇದೆ’ ಎಂದಿದ್ದಾರೆ ಶಿವರಾಜ್ ಕುಮಾರ್.

‘ಅಪ್ಪಾಜಿ ಅವರನ್ನು ವೀರಪ್ಪನ್ ಅಪಹರಣ ಮಾಡಿದ ಸಂದರ್ಭದಲ್ಲಿ ಕೃಷ್ಣ ಅವರು ನೀಡಿದ ಸಹಾಯವನ್ನು ನಮ್ಮ ಕುಟುಂಬ ಎಂದಿಗೂ ಮರೆಯುವಂತಿಲ್ಲ. ನಮ್ಮ ಕುಟುಂಬಕ್ಕೆ ಅತ್ಯಂತ ಆಪ್ತವಾಗಿದ್ದಾರೆ. ವಯಸ್ಸಾಗಿತ್ತು ಎಂದೆಲ್ಲ ಹೇಳುತ್ತಾರೆ ಆದರೆ ಅಗಲಿದ ನೋವು ಅದನ್ನು ಇಲ್ಲ ಎಂದು ಹೇಳಲಾಗುವುದಿಲ್ಲ. ನೋವು ಆಗಿಯೇ ಆಗುತ್ತದೆ’ ಎಂದಿದ್ದಾರೆ ಶಿವರಾಜ್ ಕುಮಾರ್.

ಇದನ್ನೂ ಓದಿ:http://ವೀರಪ್ಪನ್​ ಕಪಿಮುಷ್ಠಿಯಿಂದ ಅಣ್ಣಾವ್ರನ್ನು ಬಿಡಿಸಿ ತಂದರು ಕೃಷ್ಣ, ಆದರೆ…

ಡಾ ರಾಜ್​ಕುಮಾರ್ ಅವರ ಅಪಹರಣ ಆದ ಸಂದರ್ಭದಲ್ಲಿ ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದರು. ಆ ಸಮಯದಲ್ಲಿ ದೊಡ್ಮನೆ ಕುಟುಂಬದವರು ಬಹುತೇಕ ಪ್ರತಿದಿನವೂ ಸಿಎಂ ಅವರೊಟ್ಟಿಗೆ ಸಂಪರ್ಕದಲ್ಲಿದ್ದರು. ಡಾ ರಾಜ್​ಕುಮಾರ್ ಅವರನ್ನು ವೀರಪ್ಪನ್ ಸೆರೆಯಿಂದ ಬಿಡಿಸಿಕೊಂಡು ಬರಲು ಹಲವು ರೀತಿಯ ಪ್ರಯತ್ನಗಳನ್ನು ಕೃಷ್ಣ ಮಾಡಿದರು. 108 ದಿನಗಳ ಬಳಿಕ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ