AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar: ಶಿವರಾಜ್ ಕುಮಾರ್​ಗಾಗಿ ಕರ್ನಾಟಕಕ್ಕೆ ಬಂದ ತಮಿಳು ನಿರ್ದೇಶಕ

Shiva Rajkumar: ಶಿವರಾಜ್ ಕುಮಾರ್ ಈಗಾಗಲೇ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಮಿಳು ನಿರ್ದೇಶಕರೊಬ್ಬರು ಶಿವಣ್ಣನಿಗಾಗಿ ಹೊಸ ಕತೆಯೊಂದನ್ನು ತಂದಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ.

Shiva Rajkumar: ಶಿವರಾಜ್ ಕುಮಾರ್​ಗಾಗಿ ಕರ್ನಾಟಕಕ್ಕೆ ಬಂದ ತಮಿಳು ನಿರ್ದೇಶಕ
ಶಿವರಾಜ್ ಕುಮಾರ್
ಮಂಜುನಾಥ ಸಿ.
|

Updated on:Jul 25, 2024 | 12:08 PM

Share

ವೈನ್​ ಹಳೆಯದಾದಷ್ಟು ರುಚಿ ಹೆಚ್ಚು ಮೌಲ್ಯವೂ ಹೆಚ್ಚು ಎಂಬ ಗಾದೆಯಿದೆ, ಶಿವರಾಜ್ ಕುಮಾರ್ ವಿಷಯದಲ್ಲಿಯೂ ಹೀಗೆಯೇ ಆಗಿದೆ. ವರ್ಷಗಳು ಕಳೆದಂತೆ ಶಿವರಾಜ್ ಕುಮಾರ್ ಅವರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅವರಿಗಾಗಿ ಭಿನ್ನ-ಭಿನ್ನ ಕತೆಗಳನ್ನು ಮಾಡಿಕೊಂಡು ಹೊಸ ನಿರ್ದೇಶಕರು ಕಾಲ್​ಶೀಟ್​ಗಾಗಿ ಕಾಯುತ್ತಿದ್ದಾರೆ. ಹಲವು ಹೊಸ ತಲೆಮಾರಿನ ನಿರ್ದೇಶಕರು ಸಹ ಶಿವಣ್ಣನೊಂದಿಗೆ ಕೆಲಸ ಮಾಡಲು ಕಾಯುತ್ತಿರುವುದು ಶಿವಣ್ಣನಿಗಿರುವ ಒಗ್ಗಿಕೊಳ್ಳುವ ಗುಣ, ಅವರ ನಟನೆಯಲ್ಲಿನ ಭಿನ್ನತೆಗೆ ಸಾಕ್ಷಿ. ಇದೀಗ ಶಿವಣ್ಣನಿಗಾಗಿ ತಮಿಳಿನ ನಿರ್ದೇಶಕರೊಬ್ಬರು ಹೊಸ ಕತೆ ಮಾಡಿಕೊಂಡು ಬಂದಿದ್ದಾರೆ. ಸಿನಿಮಾದ ಶೂಟಿಂಗ್ ಶೀಘ್ರವೇ ಪ್ರಾರಂಭ ಆಗಲಿದೆ.

‘ಪಾಯುಂ ಒಲಿ ನೀ ಎನಕ್ಕು’ ಸಿನಿಮಾ ನಿರ್ದೇಶನ ಮಾಡಿರುವ ಕಾರ್ತಿಕ್ ಅದ್ವೈತ್ ಶಿವಣ್ಣನಿಗಾಗಿ ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದು, ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಶೀಘ್ರವೇ ಪ್ರಾರಂಭವಾಗಲಿದೆಯಂತೆ. ಅಂದಹಾಗೆ ಈ ಸಿನಿಮಾಕ್ಕಾಗಿ ಈ ಹಿಂದೆಯೇ ಡೇಟ್ಸ್ ನೀಡಿದ್ದರಂತೆ ಶಿವಣ್ಣ. ಆದರೆ ಸಿನಿಮಾ ಪ್ರಾರಂಭವಾಗಿರಲಿಲ್ಲ. ಹಾಗಾಗಿ ಈಗ ಚಿತ್ರೀಕರಣ ಪ್ರಾರಂಭಿಸಿ ಮೊದಲ ಹಂತ ಮುಗಿಸಿ ಬಳಿಕ ಬ್ರೇಕ್ ತೆಗೆದುಕೊಳ್ಳುವ ಆಲೋಚನೆಯಲ್ಲಿದೆ ಚಿತ್ರತಂಡ.

ಇದನ್ನೂ ಓದಿ:ಶಿವರಾಜ್ ಕುಮಾರ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ

ಕಾರ್ತಿಕ್ ಅದ್ವೈತ್ ನಿರ್ದೇಶನ ಮಾಡಿರುವ ‘ಪಾಯುಂ ಒಲಿ ನೀ ಎನಕ್ಕು’ ಸಿನಿಮಾನಲ್ಲಿ ವಿಕ್ರಂ ಪ್ರಭು ನಾಯಕರಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಕನ್ನಡದ ಡಾಲಿ ಧನಂಜಯ್ ಸಹ ನಟಿಸಿದ್ದರು. ಕಾರ್ತಿಕ್ ಅದ್ವೈತ್, ಶಿವಣ್ಣನಿಗೆ ನಿರ್ದೇಶನ ಮಾಡುತ್ತಿರುವ ಸಿನಿಮಾಕ್ಕೆ ಎಸ್​ಎನ್ ರೆಡ್ಡಿ, ಸುಧೀರ್ ಪಿ ನಿರ್ಮಾಣ ಮಾಡಿದ್ದಾರೆ. ಭುವನೇಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ‘ವಿಕ್ರಂ ವೇದ’ ಸಿನಿಮಾಕ್ಕೆ ಸಂಗೀತ ನೀಡಿದ್ದ ಸ್ಯಾಮ್ ಸಿಎಸ್ ಸಂಗೀತ ನೀಡಲಿದ್ದಾರೆ. ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಭಿನ್ನ ಗೆಟಪ್​ನಲ್ಲಿ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ.

ಶಿವರಾಜ್ ಕುಮಾರ್ ಪ್ರಸ್ತುತ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾದಲ್ಲಿ ಶಿವಣ್ಣ, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಜೊತೆ ನಟಿಸುತ್ತಿದ್ದಾರೆ. ಅದರ ಜೊತೆಗೆ ಡಾಲಿ ಧನಂಜಯ್ ಜೊತೆಗೆ ‘ಉತ್ತರಕಾಂಡ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ನಿರ್ದೇಶಕ ಹೇಮಂತ್ ರಾವ್ ನಿರ್ದೇಶನದಲ್ಲಿ ‘ಭೈರವನ ಕೊನೆ ಪಾಠ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಘೋಸ್ಟ್ 2’ ನಲ್ಲಿ ನಟಿಸಲಿದ್ದಾರೆ. ಇನ್ನು ದಿನಕರ್ ತೂಗುದೀಪ, ಶಿವಣ್ಣನಿಗೆ ಒಂದು ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ನಿರ್ದೇಶಕ ಲೋಹಿತ್ ಸಹ ಶಿವಣ್ಣನಿಗೆ ಒಂದು ಕತೆ ಹೇಳಿದ್ದರು. ಆ ಸಿನಿಮಾಗಳು ಇನ್ನೂ ಪ್ರಾರಂಭವಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Thu, 25 July 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್