AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಹಾಗೆ ಮಾಡಬಾರದಿತ್ತು’: ‘ಕಬ್ಜ’ ಸಿನಿಮಾ ಬಗ್ಗೆ ಶಿವರಾಜ್ ಕುಮಾರ್ ಅಸಮಾಧಾನ

Kabza: ಆರ್ ಚಂದ್ರು ನಿರ್ದೇಶಿಸಿ, ಉಪೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿ, ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದ 'ಕಬ್ಜ' ಸಿನಿಮಾದ ಬಗ್ಗೆ ಶಿವರಾಜ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಅವರು ಹಾಗೆ ಮಾಡಬಾರದಿತ್ತು': 'ಕಬ್ಜ' ಸಿನಿಮಾ ಬಗ್ಗೆ ಶಿವರಾಜ್ ಕುಮಾರ್ ಅಸಮಾಧಾನ
ಕಬ್ಜ
Follow us
ಮಂಜುನಾಥ ಸಿ.
|

Updated on: Oct 12, 2023 | 9:37 PM

ಶಿವರಾಜ್ ಕುಮಾರ್ (Shiva Rajkumar) ಚಿತ್ರರಂಗದಲ್ಲಿ ಯಾರ ಬಗ್ಗೆಯೂ ನೇರವಾಗಿ ಅಸಮಾಧಾನ, ಸಿಟ್ಟು ವ್ಯಕ್ತಪಡಿಸಿದ್ದು ಬಹಳ ಅಪರೂಪ. ಎಲ್ಲರ ಬಗ್ಗೆಯೂ ಪ್ರೀತಿ, ಕರುಣೆಯಿಂದಲೇ ಮಾತನಾಡುತ್ತಾರೆ. ಇದೀಗ ‘ಘೋಸ್ಟ್’ ಸಿನಿಮಾದ ಬಿಡುಗಡೆಯ ಹೊಸ್ತಿಲಲ್ಲಿರುವ ಶಿವರಾಜ್ ಕುಮಾರ್, ಆರ್ ಚಂದ್ರು ನಿರ್ದೇಶಿಸಿ, ನಿರ್ಮಾಣ ಮಾಡಿದ್ದ ‘ಕಬ್ಜ’ ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ‘ಘೋಸ್ಟ್’ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ ಎಂಬ ಬಗ್ಗೆ ಮಾತನಾಡುತ್ತಾ, ”ನಿಜ ಹೇಳಬೇಕೆಂದರೆ ‘ಕಬ್ಜ’ ಸಿನಿಮಾದ ಬಳಿಕ ನಮ್ಮ ಸಿನಿಮಾವನ್ನು ಹಿಂದಿಗೆ ತೆಗೆದುಕೊಂಡು ಹೋಗುವುದು ತುಸು ಕಷ್ಟವಾಗುತ್ತಿದೆ. ಚಂದ್ರು ಮೇಲೆ ದೂರು ಎಂದಲ್ಲ, ನನಗೆ ಅವರ ಬಗ್ಗೆ ಗೌರವ ಇದೆ. ಆದರೆ ‘ಜೈಲರ್’ ನಲ್ಲಿ ಅತಿಥಿ ಪಾತ್ರಗಳನ್ನು ಎಷ್ಟು ಬೇಕೋ ಹೇಗೆ ಬೇಕೋ ಹಾಗೆ ಬಳಸಿಕೊಂಡರು. ಬಹಳ ಜಾಣತನದಿಂದ ಅತಿಥಿ ಪಾತ್ರಗಳನ್ನು ಬಳಸಿಕೊಂಡರು. ಆದರೆ ‘ಕಬ್ಜ’ನಲ್ಲಿ ಹಾಗಾಗಲಿಲ್ಲ. ಅತಿಥಿ ಪಾತ್ರಗಳನ್ನೇ ಹೈಲೆಟ್ ಮಾಡಿಬಿಟ್ಟರು. ಅದು ಸರಿಯಾದ ಕ್ರಮವಲ್ಲ” ಎಂದಿದ್ದಾರೆ ಶಿವರಾಜ್ ಕುಮಾರ್.

”ಜನಗಳನ್ನು ಬಹಳ ಮಿಸ್ ಲೀಡ್ ಮಾಡಿದರು. ಸಿನಿಮಾವನ್ನು ಕೊಂಡು ಕೊಳ್ಳುವವರು ಸಹ ಮಿಸ್ ಲೀಡ್ ಆದರು. ಹಣ ತೆಗೆದುಕೊಳ್ಳುವಾಗಲು ಸಹ ಗೌರವಯುತವಾಗಿ ತೆಗೆದುಕೊಳ್ಳಬೇಕು. ಸ್ವಲ್ಪ ಕಡಿಮೆ ತೆಗೆದುಕೊಂಡರು ಪರವಾಗಿಲ್ಲ. ಪ್ರಾಮಾಣಿಕವಾಗಿ ತೆಗೆದುಕೊಳ್ಳಬೇಕು. ಚಂದ್ರು ಹೇಳಿದರು, ಕತೆ ಹೀಗಿದೆ, ಮುಂದಿನ ಭಾಗಕ್ಕೆ ಲೀಡ್ ಆಗುತ್ತದೆ ಎಂದು. ಉಪೇಂದ್ರ, ಸುದೀಪ್ ಸಹ ಇದ್ದಾರೆ ಚೆನ್ನಾಗಿರುತ್ತೆ ಎಂದು ನಾನು ನಟಿಸಿದೆ” ಎಂದಿದ್ದಾರೆ ಶಿವರಾಜ್ ಕುಮಾರ್.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

”ಸಿನಿಮಾ ಬಿಡುಗಡೆ ಆದಾಗ ತಮಿಳುನಾಡಿನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ವಾಪಸ್ ಬರಬೇಕಾದರೆ ತಿಂಡಿ ತಿನ್ನುತ್ತಿದ್ದಾಗ ಕೆಲವರು ಬಂದು, ಸರ್, ಬಹಳ ನಿರೀಕ್ಷೆ ಇಟ್ಟುಕೊಂಡು ಹೋಗಿದ್ದೆವು ಸರ್, ಬರೀ ಒಂದೇ ಸೀನ್​ನಲ್ಲಿ ಇದ್ದೀರ ನೀವು ಎಂದರು. ಇಲ್ಲೂ ಸಹ ಕಟೌಟ್ ಎಲ್ಲ ಹಾಕಿಬಿಟ್ಟಿದ್ದರು ಆದರೆ ಇರುವುದು ಅತ್ಯಂತ ಕಡಿಮೆ ಸೀನ್. ಅದು ನನಗೂ ಸಹ ಯಾಕೋ ಸರಿ ಬರಲಿಲ್ಲ” ಎಂದು ಬೇಸರದಿಂದಲೇ ಹೇಳಿದರು ಶಿವರಾಜ್ ಕುಮಾರ್.

”ಜೈಲರ್’ ಸಿನಿಮಾದವರು ಜಾಣತನದಿಂದ ಅತಿಥಿ ಪಾತ್ರಗಳನ್ನು ಬಳಸಿಕೊಂಡರು. ಮೊದಲಿನಿಂದಲೂ ಅವರು ಅತಿಥಿ ಪಾತ್ರಗಳಷ್ಟೆ ಎಂಬುದನ್ನೇ ಹೇಳಿಕೊಂಡು ಬಂದರು. ಅದನ್ನು ಬಹಳ ಚೆನ್ನಾಗಿ ತೋರಿಸಿದರು, ಹಾಗೆಯೇ ಒಳ್ಳೆ ರಿಲೀಸ್ ಮಾಡಿದರು. ಇನ್ಯಾವ ಪರಭಾಷೆ ಸಿನಿಮಾ ಸಹ ಓಡದಷ್ಟು ಚೆನ್ನಾಗಿ ‘ಜೈಲರ್’ ಸಿನಿಮಾ ಇಲ್ಲಿ ಓಡಿತು” ಎಂದರು ಶಿವರಾಜ್ ಕುಮಾರ್.

‘ಕಬ್ಜ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಕೇವಲ ಕೊನೆಯ ಸೀನ್​ ಒಂದರಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಾರೆ. ಆದರೆ ಆ ಬಗ್ಗೆ ಶಿವಣ್ಣನಿಗೆ ಬೇಸರವಿಲ್ಲ, ಬದಲಿಗೆ ಪ್ರಚಾರದ ಸಮಯದಲ್ಲಿ ಅತಿಥಿ ಪಾತ್ರಗಳನ್ನು ಹೈಲೆಟ್ ಮಾಡಿ ಅದನ್ನು ನೋಡಿ ಪ್ರೇಕ್ಷಕರು ಥಿಯೇಟರ್​ಗಳಿಗೆ ಬರುವಂತೆ ಮಾಡಿ, ಬಂದ ಪ್ರೇಕ್ಷಕರಿಗೆ ನಿರಾಸೆ ಮಾಡಿದ ಬಗ್ಗೆ ಅವರಿಗೆ ಬೇಸರವಿದೆ. ಅಂದಹಾಗೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಇದೇ ಅಕ್ಟೋಬರ್ 19ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?