AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ಹಾಗೆ ಮಾಡಬಾರದಿತ್ತು’: ‘ಕಬ್ಜ’ ಸಿನಿಮಾ ಬಗ್ಗೆ ಶಿವರಾಜ್ ಕುಮಾರ್ ಅಸಮಾಧಾನ

Kabza: ಆರ್ ಚಂದ್ರು ನಿರ್ದೇಶಿಸಿ, ಉಪೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿ, ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದ 'ಕಬ್ಜ' ಸಿನಿಮಾದ ಬಗ್ಗೆ ಶಿವರಾಜ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಅವರು ಹಾಗೆ ಮಾಡಬಾರದಿತ್ತು': 'ಕಬ್ಜ' ಸಿನಿಮಾ ಬಗ್ಗೆ ಶಿವರಾಜ್ ಕುಮಾರ್ ಅಸಮಾಧಾನ
ಕಬ್ಜ
ಮಂಜುನಾಥ ಸಿ.
|

Updated on: Oct 12, 2023 | 9:37 PM

Share

ಶಿವರಾಜ್ ಕುಮಾರ್ (Shiva Rajkumar) ಚಿತ್ರರಂಗದಲ್ಲಿ ಯಾರ ಬಗ್ಗೆಯೂ ನೇರವಾಗಿ ಅಸಮಾಧಾನ, ಸಿಟ್ಟು ವ್ಯಕ್ತಪಡಿಸಿದ್ದು ಬಹಳ ಅಪರೂಪ. ಎಲ್ಲರ ಬಗ್ಗೆಯೂ ಪ್ರೀತಿ, ಕರುಣೆಯಿಂದಲೇ ಮಾತನಾಡುತ್ತಾರೆ. ಇದೀಗ ‘ಘೋಸ್ಟ್’ ಸಿನಿಮಾದ ಬಿಡುಗಡೆಯ ಹೊಸ್ತಿಲಲ್ಲಿರುವ ಶಿವರಾಜ್ ಕುಮಾರ್, ಆರ್ ಚಂದ್ರು ನಿರ್ದೇಶಿಸಿ, ನಿರ್ಮಾಣ ಮಾಡಿದ್ದ ‘ಕಬ್ಜ’ ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ‘ಘೋಸ್ಟ್’ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ ಎಂಬ ಬಗ್ಗೆ ಮಾತನಾಡುತ್ತಾ, ”ನಿಜ ಹೇಳಬೇಕೆಂದರೆ ‘ಕಬ್ಜ’ ಸಿನಿಮಾದ ಬಳಿಕ ನಮ್ಮ ಸಿನಿಮಾವನ್ನು ಹಿಂದಿಗೆ ತೆಗೆದುಕೊಂಡು ಹೋಗುವುದು ತುಸು ಕಷ್ಟವಾಗುತ್ತಿದೆ. ಚಂದ್ರು ಮೇಲೆ ದೂರು ಎಂದಲ್ಲ, ನನಗೆ ಅವರ ಬಗ್ಗೆ ಗೌರವ ಇದೆ. ಆದರೆ ‘ಜೈಲರ್’ ನಲ್ಲಿ ಅತಿಥಿ ಪಾತ್ರಗಳನ್ನು ಎಷ್ಟು ಬೇಕೋ ಹೇಗೆ ಬೇಕೋ ಹಾಗೆ ಬಳಸಿಕೊಂಡರು. ಬಹಳ ಜಾಣತನದಿಂದ ಅತಿಥಿ ಪಾತ್ರಗಳನ್ನು ಬಳಸಿಕೊಂಡರು. ಆದರೆ ‘ಕಬ್ಜ’ನಲ್ಲಿ ಹಾಗಾಗಲಿಲ್ಲ. ಅತಿಥಿ ಪಾತ್ರಗಳನ್ನೇ ಹೈಲೆಟ್ ಮಾಡಿಬಿಟ್ಟರು. ಅದು ಸರಿಯಾದ ಕ್ರಮವಲ್ಲ” ಎಂದಿದ್ದಾರೆ ಶಿವರಾಜ್ ಕುಮಾರ್.

”ಜನಗಳನ್ನು ಬಹಳ ಮಿಸ್ ಲೀಡ್ ಮಾಡಿದರು. ಸಿನಿಮಾವನ್ನು ಕೊಂಡು ಕೊಳ್ಳುವವರು ಸಹ ಮಿಸ್ ಲೀಡ್ ಆದರು. ಹಣ ತೆಗೆದುಕೊಳ್ಳುವಾಗಲು ಸಹ ಗೌರವಯುತವಾಗಿ ತೆಗೆದುಕೊಳ್ಳಬೇಕು. ಸ್ವಲ್ಪ ಕಡಿಮೆ ತೆಗೆದುಕೊಂಡರು ಪರವಾಗಿಲ್ಲ. ಪ್ರಾಮಾಣಿಕವಾಗಿ ತೆಗೆದುಕೊಳ್ಳಬೇಕು. ಚಂದ್ರು ಹೇಳಿದರು, ಕತೆ ಹೀಗಿದೆ, ಮುಂದಿನ ಭಾಗಕ್ಕೆ ಲೀಡ್ ಆಗುತ್ತದೆ ಎಂದು. ಉಪೇಂದ್ರ, ಸುದೀಪ್ ಸಹ ಇದ್ದಾರೆ ಚೆನ್ನಾಗಿರುತ್ತೆ ಎಂದು ನಾನು ನಟಿಸಿದೆ” ಎಂದಿದ್ದಾರೆ ಶಿವರಾಜ್ ಕುಮಾರ್.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಹವಾ ಎಬ್ಬಿಸಲು ಶಿವರಾಜ್ ಕುಮಾರ್ ರೆಡಿ: ಏನಿದು ಹೊಸ ಸುದ್ದಿ?

”ಸಿನಿಮಾ ಬಿಡುಗಡೆ ಆದಾಗ ತಮಿಳುನಾಡಿನಲ್ಲಿ ಶೂಟಿಂಗ್ ಮಾಡುತ್ತಿದ್ದೆ. ವಾಪಸ್ ಬರಬೇಕಾದರೆ ತಿಂಡಿ ತಿನ್ನುತ್ತಿದ್ದಾಗ ಕೆಲವರು ಬಂದು, ಸರ್, ಬಹಳ ನಿರೀಕ್ಷೆ ಇಟ್ಟುಕೊಂಡು ಹೋಗಿದ್ದೆವು ಸರ್, ಬರೀ ಒಂದೇ ಸೀನ್​ನಲ್ಲಿ ಇದ್ದೀರ ನೀವು ಎಂದರು. ಇಲ್ಲೂ ಸಹ ಕಟೌಟ್ ಎಲ್ಲ ಹಾಕಿಬಿಟ್ಟಿದ್ದರು ಆದರೆ ಇರುವುದು ಅತ್ಯಂತ ಕಡಿಮೆ ಸೀನ್. ಅದು ನನಗೂ ಸಹ ಯಾಕೋ ಸರಿ ಬರಲಿಲ್ಲ” ಎಂದು ಬೇಸರದಿಂದಲೇ ಹೇಳಿದರು ಶಿವರಾಜ್ ಕುಮಾರ್.

”ಜೈಲರ್’ ಸಿನಿಮಾದವರು ಜಾಣತನದಿಂದ ಅತಿಥಿ ಪಾತ್ರಗಳನ್ನು ಬಳಸಿಕೊಂಡರು. ಮೊದಲಿನಿಂದಲೂ ಅವರು ಅತಿಥಿ ಪಾತ್ರಗಳಷ್ಟೆ ಎಂಬುದನ್ನೇ ಹೇಳಿಕೊಂಡು ಬಂದರು. ಅದನ್ನು ಬಹಳ ಚೆನ್ನಾಗಿ ತೋರಿಸಿದರು, ಹಾಗೆಯೇ ಒಳ್ಳೆ ರಿಲೀಸ್ ಮಾಡಿದರು. ಇನ್ಯಾವ ಪರಭಾಷೆ ಸಿನಿಮಾ ಸಹ ಓಡದಷ್ಟು ಚೆನ್ನಾಗಿ ‘ಜೈಲರ್’ ಸಿನಿಮಾ ಇಲ್ಲಿ ಓಡಿತು” ಎಂದರು ಶಿವರಾಜ್ ಕುಮಾರ್.

‘ಕಬ್ಜ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಕೇವಲ ಕೊನೆಯ ಸೀನ್​ ಒಂದರಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಾರೆ. ಆದರೆ ಆ ಬಗ್ಗೆ ಶಿವಣ್ಣನಿಗೆ ಬೇಸರವಿಲ್ಲ, ಬದಲಿಗೆ ಪ್ರಚಾರದ ಸಮಯದಲ್ಲಿ ಅತಿಥಿ ಪಾತ್ರಗಳನ್ನು ಹೈಲೆಟ್ ಮಾಡಿ ಅದನ್ನು ನೋಡಿ ಪ್ರೇಕ್ಷಕರು ಥಿಯೇಟರ್​ಗಳಿಗೆ ಬರುವಂತೆ ಮಾಡಿ, ಬಂದ ಪ್ರೇಕ್ಷಕರಿಗೆ ನಿರಾಸೆ ಮಾಡಿದ ಬಗ್ಗೆ ಅವರಿಗೆ ಬೇಸರವಿದೆ. ಅಂದಹಾಗೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಇದೇ ಅಕ್ಟೋಬರ್ 19ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ