AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ’45’ ಸಿನಿಮಾದ ಹಾಡಿನ ಚಿತ್ರೀಕರಣ ಹೇಗಿತ್ತು ಗೊತ್ತೆ?

Shiva Rajkumar: ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸುತ್ತಿರುವ ‘45’ ಸಿನಿಮಾದ ಚಿತ್ರೀಕರಣ ಹೇಗೆ ಸಾಗುತ್ತಿದೆ? ಇಲ್ಲಿ ತಿಳಿಯಿರಿ.

ಶಿವಣ್ಣನ '45' ಸಿನಿಮಾದ ಹಾಡಿನ ಚಿತ್ರೀಕರಣ ಹೇಗಿತ್ತು ಗೊತ್ತೆ?
ಮಂಜುನಾಥ ಸಿ.
|

Updated on: Jan 13, 2024 | 9:14 PM

Share

ಶಿವರಾಜ್ ಕುಮಾರ್ (Shiva Rajkumar) ನಟನೆಯ ಬಹು ತಾರಾಗಣದ ಸಿನಿಮಾ ‘45’ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ಶಿವರಾಜ್ ಕುಮಾರ್ ಮಾತ್ರವೇ ಅಲ್ಲದೆ ನಟ ಉಪೇಂದ್ರ, ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಸಹ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಅದ್ಧೂರಿಯಾಗಿ ಅರ್ಜುನ್ ಜನ್ಯ (Arjun Janya) ಚಿತ್ರೀಕರಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದನ್ನು ಅದ್ಧೂರಿಯಾಗಿ ಅರ್ಜುನ್ ಜನ್ಯ ಸೆರೆಹಿಡಿದಿದ್ದಾರೆ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾ ತಮ್ಮ ಹೆಸರಿನ ಮೂಲಕವೇ ಸಾಕಷ್ಟು ಗಮನ ಸೆಳೆದಿದ್ದು, ಬಹುತಾರಾಗಣದ ಸಿನಿಮಾ ಆಗಿರುವ ಕಾರಣ ಪ್ರೇಕ್ಷಕರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಸಿನಿಮಾದ ಚಿತ್ರೀಕರಣ ಬೆಂಗಳೂರು ಸೇರಿದಂತೆ ಇನ್ನೂ ಕೆಲವು ಜಾಗಗಳಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ.

ಇತ್ತೀಚಿಗಷ್ಟೆ ಬನ್ನೇರುಘಟ್ಟದ ಶ್ರೀಚಂಪಕಧಾಮ ಸ್ವಾಮಿ ದೇವಸ್ಥಾನದ ಸಿನಿಮಾದ ದೃಶ್ಯವೊಂದರ ಚಿತ್ರೀಕರಣ ನಡೆದಿದೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಈ ದೃಶ್ಯದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ವಿಶೇಷ. ಮೋಕೋಬೋಲ್ಟ್, ರೋಪ್ ಕ್ಯಾಮೆರಾ ಸೇರಿದಂತೆ ಇನ್ನೂ ಹಲವು ದುಬಾರಿ ಸಲಕರಣೆಗಳ ಬಳಸಿ ಈ ದೃಶ್ಯವನ್ನು ಚಿತ್ರಿಸಲಾಗಿದೆ. ಈ ಒಂದು ಸನ್ನಿವೇಶದ ಚಿತ್ರೀಕರಣಕ್ಕಾಗಿ 418 ಕ್ಕೂ ಹೆಚ್ಚು ಕಲರ್ ಬಾಂಬ್ ಗಳನ್ನು ಬಳಸಿರುವುದು ಕನ್ನಡದಲ್ಲಿ ಇದೇ ಮೊದಲು ಎಂದಿದೆ ಚಿತ್ರತಂಡ. ಈ ಅದ್ದೂರಿ ಸನ್ನಿವೇಶಕ್ಕೆ ಭಾರತ ಚಿತ್ರರಂಗದ ಜನಪ್ರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಅವರು ಕೊರಿಯೋಗ್ರಫಿ ಮಾಡಿರುವುದು ವಿಶೇಷ. ಸತ್ಯ ಹೆಗಡೆ ಅವರ ಛಾಯಾಗ್ರಹಣ ಈ ಅದ್ದೂರಿ ಸನ್ನಿವೇಶದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ:ಕ್ಯಾಪ್ಟನ್ ವಿಜಯ್​ಕಾಂತ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

“ಗಾಳಿಪಟ 2” ಸೇರಿದಂತೆ ಅನೇಕ ಅದ್ದೂರಿ ಹಾಗೂ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬರುತ್ತಿದ್ದು, ಸಿನಿಮಾ ಅದ್ಧೂರಿಯಾಗಿ ಮೂಡಿಬರಲು ಬೇಕಾದ ಅಗತ್ಯ ಸೌಕರ್ಯಗಳನ್ನು ನಿರ್ಮಾಪಕರು ಒದಗಿಸಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇನ್ನು ತಮ್ಮ ಸಂಗೀತದಿಂದ ಜನರ ಮನ ಗೆದ್ದಿರುವ ಅರ್ಜುನ್ ಜನ್ಯ ವಹಿಸಿಕೊಂಡಿರುವ ಹೊಸ ಜವಾಬ್ದಾರಿಯನ್ನು ಉತ್ಸಾಹದಿಂದ, ಜಾಗರೂಕತೆಯಿಂದ ನಿಭಾಯಿಸುತ್ತಿದ್ದಾರೆ ಎನ್ನಲಾಗಿದೆ. ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರಂತಹ ಅದ್ಭುತ ಕಲಾವಿದರನ್ನು ಒಂದೇ ಚಿತ್ರದಲ್ಲಿ ನೋಡಲು ಚಿತ್ರಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್