AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ರಾಂತಿಯ ಬಳಿಕ ಶಿವರಾಜ್ ನಟಿಸಲಿರುವ ಮೊದಲ ಸಿನಿಮಾ ಯಾವುದು?

Shiva Rajkumar: ಆರೋಗ್ಯ ಸಮಸ್ಯಯಿಂದ ಬಳಲಿ ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದಿರುವ ನಟ ಶಿವರಾಜ್ ಕುಮಾರ್, ವೈದ್ಯರ ಸೂಚನೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಶಿವಣ್ಣ, ಮತ್ತೆ ಸಿನಿಮಾ ಸೆಟ್​ಗೆ ಮರಳಲು ಉತ್ಸುಕರಾಗಿದ್ದು, ವಿಶ್ರಾಂತಿ ಬಳಿಕ ಯಾವ ಸಿನಿಮಾ ಮೂಲಕ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

ವಿಶ್ರಾಂತಿಯ ಬಳಿಕ ಶಿವರಾಜ್ ನಟಿಸಲಿರುವ ಮೊದಲ ಸಿನಿಮಾ ಯಾವುದು?
Shiva Rajkumar
ಮಂಜುನಾಥ ಸಿ.
|

Updated on: Feb 26, 2025 | 7:41 PM

Share

ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿರುವ ಶಿವರಾಜ್ ಕುಮಾರ್ (Shiva Rajkumar) ಈಗ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುತ್ತಿದ್ದರೂ ಸಹ ಪ್ರತಿದಿನ ಅಭಿಮಾನಿಗಳನ್ನು, ಮಾಧ್ಯಮದವರನ್ನು, ಭೇಟಿ ಮಾಡಲು ಮನೆಗೆ ಬರುತ್ತಿರುವ ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು, ಗೆಳೆಯರುಗಳನ್ನು ಭೇಟಿ ಮಾಡುತ್ತಲೇ ಇದ್ದಾರೆ. ಇತ್ತೀಚೆಗೆ ಟಿವಿ ರಿಯಾಲಿಟಿ ಶೋಗೂ ಸಹ ಶಿವಣ್ಣ ಹೋಗಿ ಬಂದಿದ್ದರು. ವಿಶ್ರಾಂತಿಯ ಬಳಿಕ ಶಿವಣ್ಣ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂಬುದು ಸಹ ಪ್ರಶ್ನೆಯಾಗಿದೆ.

ಕೆಲ ವರದಿಗಳ ಪ್ರಕಾರ ಶಿವರಾಜ್ ಕುಮಾರ್ ಅವರು ಮೊದಲು ರಾಮ್ ಚರಣ್ ತೇಜ ಜೊತೆಗೆ ನಟಿಸಲಿರುವ ತೆಲುಗು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರಂತೆ. ಬುಚ್ಚಿಬಾಬು ಸನಾ ನಿರ್ದೇಶನ ಮಾಡಿ ರಾಮ್ ಚರಣ್ ಮತ್ತು ಬಾಲಿವುಡ್ ಬೆಡಗಿ ಜಾನ್ಹವಿ ಕಪೂರ್ ನಟಿಸುತ್ತಿರುವ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಸಿನಿಮಾದ ಚಿತ್ರೀಕರಣ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಪ್ರಾರಂಭವಾಗಿದೆ. ಈಗಾಗಲೇ ಸಿನಿಮಾದ ಹಲವು ಭಾಗ ಚಿತ್ರೀಕರಣ ಮುಗಿದಿದ್ದು, ಶಿವಣ್ಣನಿಗಾಗಿಯೇ ಚಿತ್ರತಂಡ ಕಾಯುತ್ತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ

ಶಿವಣ್ಣ ಅಮೆರಿಕಕ್ಕೆ ಹೋಗುವ ಮುಂಚೆಯೇ ರಾಮ್ ಚರಣ್ ಸಿನಿಮಾದ ಚಿತ್ರೀಕರಣ ಪ್ರಾರಂಭ ಆಗಿತ್ತು. ಸಿನಿಮಾದ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದ್ದು, ಇದೀಗ ಶಿವಣ್ಣನಿಗಾಗಿ ಚಿತ್ರತಂಡ ಕಾಯುತ್ತಿದೆ. ಅಲ್ಲದೆ, ಶಿವಣ್ಣ ಹೆಚ್ಚು ದಿನ ಚಿತ್ರೀಕರಣದಲ್ಲಿ ತೊಡಗುವ ಅಗತ್ಯವೂ ಇಲ್ಲದ ಕಾರಣ, ಈ ಸಿನಿಮಾವನ್ನು ಮೊದಲಿಗೆ ಮುಗಿಸುವ ಉಮೇದಿನಲ್ಲಿದ್ದಾರೆ ಶಿವಣ್ಣ ಎನ್ನಲಾಗುತ್ತಿದೆ.

ಶಿವರಾಜ್ ಕುಮಾರ್ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ. ಶಿವಣ್ಣ ಚಿಕಿತ್ಸೆಗೆ ಹೋಗುವ ಮುಂಚೆಯೇ ಅರ್ಜುನ್ ಜನ್ಯ ನಿರ್ದೇಶಿಸಿ, ಉಪೇಂದ್ರ, ರಾಜ್ ಬಿ ಶೆಟ್ಟಿ ಜೊತೆಯಾಗಿ ನಟಿಸಿರುವ ಸಿನಿಮಾದ ಚಿತ್ರೀಕರಣವನ್ನು ಶಿವಣ್ಣ ಮುಗಿಸಿಕೊಟ್ಟಿದ್ದರು. ಅದರ ಕೆಲ ಪ್ಯಾಚಪ್ ಕೆಲಸ ಬಾಕಿ ಇದೆ ಎನ್ನಲಾಗುತ್ತಿದೆ. ಅದರ ಬಳಿಕ ಹೇಮಂತ್ ರಾವ್ ನಿರ್ದೇಶನದ ‘ಭೈರವನ ಕೊನೆ ಪಾಠ’ ಸಿನಿಮಾದಲ್ಲಿ ಶಿವಣ್ಣ ಪಾಲ್ಗೊಳ್ಳಲಿದ್ದಾರೆ.

ಈ ಸಿನಿಮಾಗಳ ಬಳಿಕ ಶಿವಣ್ಣನ ಎದುರು ಹಲವು ಆಫರ್​ಗಳಿವೆ. ‘ಆನಂದ್’, ‘ಘೋಸ್ಟ್ 2’, ‘ಉತ್ತರಕಾಂಡ’ ಇನ್ನೂ ಕೆಲವು ಸಿನಿಮಾಗಳು ಶಿವಣ್ಣನ ಕೈಯಲ್ಲಿದ್ದು ‘ಭೈರವನ ಕೊನೆ ಪಾಠ’ ಸಿನಿಮಾದ ಬಳಿಕ ಹೊಸದೊಂದು ಸಿನಿಮಾ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್