AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಬಿಟ್ಟ ಶಿವಣ್ಣ ಈಗ ಬೋಧಕ: ಹೊಸ ಸಿನಿಮಾ ಘೋಷಣೆ

Shiva Rajkumar: ಶಿವಣ್ಣ ಸಾಮಾನ್ಯವಾಗಿ ಆಕ್ಷನ್, ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಈಗ ಶಿವಣ್ಣ ಆಯುಧ ಕೈಬಿಟ್ಟು ಬೋಧಕ ಆಗಿದ್ದಾರೆ. ಮುಂದಿನ ಸಿನಿಮಾದಲ್ಲಿ ಶಿಕ್ಷಕನಾಗಿ ನಟಿಸುತ್ತಿದ್ದಾರೆ.

ಆಯುಧ ಬಿಟ್ಟ ಶಿವಣ್ಣ ಈಗ ಬೋಧಕ: ಹೊಸ ಸಿನಿಮಾ ಘೋಷಣೆ
ಮಂಜುನಾಥ ಸಿ.
|

Updated on: Nov 14, 2024 | 1:02 PM

Share

ಶಿವರಾಜ್ ಕುಮಾರ್ ಎಂದರೆ ಮಚ್ಚು ಹಿಡಿದು ಸ್ಟೈಲ್ ಆಗಿ ನಡೆದು ಬರುವ ದೃಶ್ಯವೇ ಕಣ್ಮುಂದೆ ಬರುತ್ತದೆ. ಆಕ್ಷನ್ ಸಿನಿಮಾಗಳಿಗೂ ಶಿವಣ್ಣನಿಗೆ ಬಲು ಆತ್ಮೀಯ ಹೊಂದಾಣಿಕೆ. ಆದರೆ ಶಿವಣ್ಣನ ನಟನಾ ಪಯಣ ಗಮನಿಸಿದರೆ ಅವರು ಎಲ್ಲ ರೀತಿಯ ಪಾತ್ರಗಳನ್ನೂ ಮಾಡಿದ್ದಾರೆ. ಆದರೆ ಇತ್ತೀಚೆಗೆ ನಿರ್ದೇಶಕರು, ಶಿವಣ್ಣನನ್ನು ಆಕ್ಷನ್ ಹೀರೋ ಆಗಿಯೇ ಹೆಚ್ಚು ತೋರಿಸುತ್ತಿದ್ದಾರೆ. ಆದರೆ ಈಗ ಬಹು ಸಮಯದ ಬಳಿಕ ಶಿವಣ್ಣ ಲಾಂಗು-ಮಚ್ಚು ಆಕ್ಷನ್ ಬಿಟ್ಟು ಭಾವುಕ ಕತೆಯೊಂದನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾದ ಹೆಸರು, ಪೋಸ್ಟರ್ ಇಂದು ಲಾಂಚ್ ಆಗಿದೆ.

ಈ ಹಿಂದೆ ಶಿವರಾಜ್ ಕುಮಾರ್ ಅವರಿಗಾಗಿ ‘ಘೋಸ್ಟ್’ ಹೆಸರಿನ ಭರ್ಜರಿ ಆಕ್ಷನ್ ಥ್ರಿಲ್ಲರ್ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿ, ಈಗ ಶಿವಣ್ಣನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಎ ಫಾರ್ ಆನಂದ್’ ಹೆಸರು ಇಡಲಾಗಿದ್ದು, ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಬ್ಬ ಶಿಕ್ಷಕನ ಪಾತ್ರ ನಿರ್ವಹಿಸಲಿದ್ದಾರೆ. ಸಿನಿಮಾದ ಪೋಸ್ಟರ್ ಬಿಡುಗಡೆ ಆಗಿದ್ದು, ವಿಂಟೇಜ್ ಶಿವಣ್ಣನ ನೆನಪಾಗುವಂತಿದೆ ಪೋಸ್ಟರ್.

ಈ ಹಿಂದೆ ‘ಸುಂದರ ಕಾಂಡ’ ಸಿನಿಮಾನಲ್ಲಿ ಶಿವಣ್ಣ ಶಿಕ್ಷಕರಾಗಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಶಿವಣ್ಣ ಶಿಕ್ಷಕನಾಗಿ ನಟಿಸಿದ್ದಿಲ್ಲ. ‘ಆರ್ಯನ್’ ಸಿನಿಮಾದಲ್ಲಿ ಶಿವಣ್ಣ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಶಿವಣ್ಣ ಶಿಕ್ಷಕನಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಇದು ಒಂದು ಮಕ್ಕಳ ಸಿನಿಮಾ, ಅದರಲ್ಲಿ ಶಿವಣ್ಣ ಶಿಕ್ಷಕನಾಗಿದ್ದಾರೆ. ನಿರ್ದೇಶಕ ಶ್ರೀನಿ ಹೇಳಿರುವಂತೆ ಇದು ನೈಜ ಘಟನೆ ಆಧರಿಸಿದ ಸಿನಿಮಾ ಅಂತೆ.

ಇದನ್ನೂ ಓದಿ:ಶಕ್ತಿಧಾಮದ ಮಕ್ಕಳಿಗಾಗಿ ಶಿಕ್ಷಕಿಯಾದ ಗೀತಾ ಶಿವರಾಜ್ ಕುಮಾರ್

‘ಎ ಫಾರ್ ಆನಂದ್’ ಸಿನಿಮಾವನ್ನು ಶಿವಣ್ಣನವರ ಹೋಮ್ ಬ್ಯಾನರ್ ಆಗಿರುವ ಗೀತಾ ಪಿಕ್ಚರ್ಸ್ ವತಿಯಿಂದಲೇ ನಿರ್ಮಾಣ ಮಾಡಲಾಗುತ್ತಿದೆ. ‘ವೇದ’, ನಾಳೆ ಬಿಡುಗಡೆ ಆಗಲಿರುವ ‘ಭೈರತಿ ರಣಗಲ್’ ಅನ್ನು ಇದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಮಾಡಲಾಗಿತ್ತು, ಗೀತಾ ಪಿಕ್ಚರ್ಸ್​ಗೆ ಇದು ಮೂರನೇ ಸಿನಿಮಾ. ಅಂತೆಯೇ ನಿರ್ದೇಶಕ ಶ್ರೀನಿಗೆ ಶಿವಣ್ಣನ ಜೊತೆ ಇದು ಎರಡನೇ ಸಿನಿಮಾ. ಅಸಲಿಗೆ ಶ್ರೀನಿ, ‘ಘೋಸ್ಟ್ 2’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಡಿತ್ತು, ಶಿವಣ್ಣ ಹಾಗೂ ಶ್ರೀನಿ ಇಬ್ಬರೂ ಸಹ ‘ಘೋಸ್ಟ್ 2’ ಮಾಡುವುದನ್ನು ಖಾತ್ರಿ ಪಡಿಸಿದ್ದರು. ಆದರೆ ಶ್ರೀನಿ ಹೊಸ ಕತೆಯೊಂದಿಗೆ ಬಂದಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ಶ್ರೀನಿ ಕಾಂಬಿನೇಷನ್​ನ ‘ಘೋಸ್ಟ್’ ಸಿನಿಮಾಕ್ಕೆ ಕೆಲಸ ಮಾಡಿದ್ದ ಚಿತ್ರ ಹಾಗೂ ತಾಂತ್ರಿಕ ತಂಡವೇ ‘ಎ ಫಾರ್ ಆನಂದ್’ ಸಿನಿಮಾಕ್ಕೂ ಕೆಲಸ ಮಾಡಲಿದೆ. ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಬರೆದಿದ್ದಾರೆ. ಮಾರ್ಚ್ ಅಥವಾ ಎಪ್ರಿಲ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ