AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​

ಮೇಘನಾ ಗಾಂವ್ಕರ್​​ ಮಾತ್ರವಲ್ಲದೆ ಇನ್ನಷ್ಟು ಕಲಾವಿದರು ‘ಶಿವಾಜಿ ಸುರತ್ಕಲ್​ 2’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​
ಮೇಘನಾ ಗಾಂವ್ಕರ್​, ರಮೇಶ್​ ಅರವಿಂದ್​
TV9 Web
| Edited By: |

Updated on: Oct 25, 2021 | 9:38 AM

Share

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್​’ ಸಿನಿಮಾಗೆ 2020ರ ಆರಂಭದಲ್ಲಿ ಭರ್ಜರಿ ಗೆಲುವು ಸಿಕ್ಕಿತ್ತು. ಈಗ ಅದರ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದೇ ತಂಡ ಸೇರಿಕೊಂಡು ‘ಶಿವಾಜಿ ಸುರತ್ಕಲ್​ 2’ ಮಾಡುತ್ತಿರುವುದು ಗೊತ್ತೇ ಇದೆ. ಆ ಚಿತ್ರತಂಡಕ್ಕೀಗ ನಟಿ ಮೇಘನಾ ಗಾಂವ್ಕರ್​ ಎಂಟ್ರಿ ನೀಡಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದೆ. ಇಷ್ಟು ದಿನ ಸಿನಿಮಾಗಳಲ್ಲಿ ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುತ್ತಿದ್ದ ಮೇಘನಾ ಅವರು ಈಗ ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಪೊಲೀಸ್​ ಅಧಿಕಾರಿಯಾಗಿ ನಟಿಸಲಿದ್ದಾರೆ.

ಮೊದಲ ಪಾರ್ಟ್​ನಲ್ಲಿ ಇದ್ದ ಹಲವು ಪಾತ್ರಗಳು ಈ ಸೀಕ್ವೆಲ್​ನಲ್ಲಿ ಮುಂದುವರಿಯುತ್ತಿವೆ. ರಮೇಶ್ ಅರವಿಂದ್ ಜೊತೆ ರಾಧಿಕಾ ನಾರಾಯಣ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ನಟಿಸಲಿದ್ದಾರೆ. ಅವರ ಜೊತೆ ಮೇಘನಾ ಗಾಂವ್ಕರ್​ ಹೊಸ ಸೇರ್ಪಡೆ ಆಗಿದ್ದಾರೆ.

ಡಿಸಿಪಿ ದೀಪಾ ಕಾಮತ್ ಎಂಬ ಪಾತ್ರವನ್ನು ಮೇಘನಾ ಗಾಂವ್ಕರ್​ ನಿಭಾಯಿಸಲಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ ಡಿಸಿಪಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಟಫ್ ಕಾಪ್ ಆಗಿ ತೆರೆಮೇಲೆ ಕಾಣಿಸಿಕೊಳ್ಳಲಿರುವುದು ಅಭಿಮಾನಿಗಳಿಗೆ ಖುಷಿ ನೀಡಲಿದೆ. ಈ ಪಾತ್ರವು ಕಥಾನಾಯಕ ಶಿವಾಜಿ ಸುರತ್ಕಲ್​ಗೆ ಬೆನ್ನೆಲುಬಾಗಿ ನಿಲ್ಲಲಿದೆ.

ಇನ್ನಷ್ಟು ಕಲಾವಿದರು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಇದಾಗಿದ್ದು, ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕಾಶ್ ಶ್ರಿವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆ.ಎನ್. ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ದಿನದಲ್ಲಿ ಮುಹೂರ್ತ ಮಾಡಿ ಚಿತ್ರೀಕರಣ ಆರಂಭಿಸಬೇಕು ಎಂದು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಸೆ.10ರಂದು ರಮೇಶ್​ ಅರವಿಂದ್​ ಜನ್ಮದಿನದ ಪ್ರಯುಕ್ತ ಈ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್ ಲಾಂಚ್​ ಆಗಿತ್ತು. ಮೊದಲ ಪಾರ್ಟ್​ಗೆ ‘ದಿ ಕೇಸ್​ ಆಫ್​ ರಣಗಿರಿ ರಹಸ್ಯ’ ಎಂಬ ಟ್ಯಾಗ್​ಲೈನ್​ ಇತ್ತು. ಈಗ ಎರಡನೇ ಪಾರ್ಟ್​ಗೆ ‘ದಿ ಮಿಸ್ಟೀರಿಯಸ್​ ಕೇಸ್​ ಆಫ್​ ಮಾಯಾವಿ’ ಎಂಬ ಟ್ಯಾಗ್​ಲೈನ್​ ಇದೆ. ಹಲವು ಗೆಟಪ್​ಗಳಲ್ಲಿ ರಮೇಶ್​ ಅರವಿಂದ್​ ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ:

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ

Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ ಬಂದಿಲ್ಲ; ಕಾರಣ ತಿಳಿಸಿದ ಮೇಘನಾ ರಾಜ್​

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್