Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​

ಮೇಘನಾ ಗಾಂವ್ಕರ್​​ ಮಾತ್ರವಲ್ಲದೆ ಇನ್ನಷ್ಟು ಕಲಾವಿದರು ‘ಶಿವಾಜಿ ಸುರತ್ಕಲ್​ 2’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಮೇಘನಾ ಗಾಂವ್ಕರ್​ಗೆ ವಿಶೇಷ ಪಾತ್ರ; ರಮೇಶ್​ ಅರವಿಂದ್ ಜತೆ ​ನಟಿಸುವ ಚಾನ್ಸ್​
ಮೇಘನಾ ಗಾಂವ್ಕರ್​, ರಮೇಶ್​ ಅರವಿಂದ್​
Follow us
TV9 Web
| Updated By: ಮದನ್​ ಕುಮಾರ್​

Updated on: Oct 25, 2021 | 9:38 AM

ರಮೇಶ್​ ಅರವಿಂದ್​ ನಟನೆಯ ‘ಶಿವಾಜಿ ಸುರತ್ಕಲ್​’ ಸಿನಿಮಾಗೆ 2020ರ ಆರಂಭದಲ್ಲಿ ಭರ್ಜರಿ ಗೆಲುವು ಸಿಕ್ಕಿತ್ತು. ಈಗ ಅದರ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅದೇ ತಂಡ ಸೇರಿಕೊಂಡು ‘ಶಿವಾಜಿ ಸುರತ್ಕಲ್​ 2’ ಮಾಡುತ್ತಿರುವುದು ಗೊತ್ತೇ ಇದೆ. ಆ ಚಿತ್ರತಂಡಕ್ಕೀಗ ನಟಿ ಮೇಘನಾ ಗಾಂವ್ಕರ್​ ಎಂಟ್ರಿ ನೀಡಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದೆ. ಇಷ್ಟು ದಿನ ಸಿನಿಮಾಗಳಲ್ಲಿ ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುತ್ತಿದ್ದ ಮೇಘನಾ ಅವರು ಈಗ ‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ಪೊಲೀಸ್​ ಅಧಿಕಾರಿಯಾಗಿ ನಟಿಸಲಿದ್ದಾರೆ.

ಮೊದಲ ಪಾರ್ಟ್​ನಲ್ಲಿ ಇದ್ದ ಹಲವು ಪಾತ್ರಗಳು ಈ ಸೀಕ್ವೆಲ್​ನಲ್ಲಿ ಮುಂದುವರಿಯುತ್ತಿವೆ. ರಮೇಶ್ ಅರವಿಂದ್ ಜೊತೆ ರಾಧಿಕಾ ನಾರಾಯಣ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ನಟಿಸಲಿದ್ದಾರೆ. ಅವರ ಜೊತೆ ಮೇಘನಾ ಗಾಂವ್ಕರ್​ ಹೊಸ ಸೇರ್ಪಡೆ ಆಗಿದ್ದಾರೆ.

ಡಿಸಿಪಿ ದೀಪಾ ಕಾಮತ್ ಎಂಬ ಪಾತ್ರವನ್ನು ಮೇಘನಾ ಗಾಂವ್ಕರ್​ ನಿಭಾಯಿಸಲಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ ಡಿಸಿಪಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಟಫ್ ಕಾಪ್ ಆಗಿ ತೆರೆಮೇಲೆ ಕಾಣಿಸಿಕೊಳ್ಳಲಿರುವುದು ಅಭಿಮಾನಿಗಳಿಗೆ ಖುಷಿ ನೀಡಲಿದೆ. ಈ ಪಾತ್ರವು ಕಥಾನಾಯಕ ಶಿವಾಜಿ ಸುರತ್ಕಲ್​ಗೆ ಬೆನ್ನೆಲುಬಾಗಿ ನಿಲ್ಲಲಿದೆ.

ಇನ್ನಷ್ಟು ಕಲಾವಿದರು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಇದಾಗಿದ್ದು, ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ಆಕಾಶ್ ಶ್ರಿವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ರೇಖಾ ಕೆ.ಎನ್. ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ. ಕೆಲವೇ ದಿನದಲ್ಲಿ ಮುಹೂರ್ತ ಮಾಡಿ ಚಿತ್ರೀಕರಣ ಆರಂಭಿಸಬೇಕು ಎಂದು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಸೆ.10ರಂದು ರಮೇಶ್​ ಅರವಿಂದ್​ ಜನ್ಮದಿನದ ಪ್ರಯುಕ್ತ ಈ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್ ಲಾಂಚ್​ ಆಗಿತ್ತು. ಮೊದಲ ಪಾರ್ಟ್​ಗೆ ‘ದಿ ಕೇಸ್​ ಆಫ್​ ರಣಗಿರಿ ರಹಸ್ಯ’ ಎಂಬ ಟ್ಯಾಗ್​ಲೈನ್​ ಇತ್ತು. ಈಗ ಎರಡನೇ ಪಾರ್ಟ್​ಗೆ ‘ದಿ ಮಿಸ್ಟೀರಿಯಸ್​ ಕೇಸ್​ ಆಫ್​ ಮಾಯಾವಿ’ ಎಂಬ ಟ್ಯಾಗ್​ಲೈನ್​ ಇದೆ. ಹಲವು ಗೆಟಪ್​ಗಳಲ್ಲಿ ರಮೇಶ್​ ಅರವಿಂದ್​ ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಇದನ್ನೂ ಓದಿ:

Ramesh Aravind Birthday: ಕೈಕೋಳ ತೊಟ್ಟು ಬಂದ ಶಿವಾಜಿ ಸುರತ್ಕಲ್​; ಸೂಪರ್​ ಹಿಟ್​ ಚಿತ್ರದ ಸೀಕ್ವೆಲ್​ಗೆ ಸಿದ್ಧತೆ

Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ ಬಂದಿಲ್ಲ; ಕಾರಣ ತಿಳಿಸಿದ ಮೇಘನಾ ರಾಜ್​

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ