AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡು ದೋಚಿಕೊಳ್ಳಬಾರದು’; ಸಿನಿಮಾ ಟಿಕೆಟ್ ದರದ ಬಗ್ಗೆ ಶಿವಣ್ಣ ಮಾತು

ಒಟಿಟಿ ಹೆಚ್ಚಳದಿಂದ ಸಿನಿಮಾ ಟಿಕೆಟ್ ದರ ದುಬಾರಿಯಾಗುತ್ತಿದ್ದು, ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ದಿನಗಳು ಕಡಿಮೆಯಾಗುತ್ತಿದೆ ಎಂದು ಶಿವರಾಜ್‌ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ಟಿಕೆಟ್‌ಗಳು ಎಲ್ಲರಿಗೂ ಕೈಗೆಟುಕುವಂತಿರಬೇಕು, ಹಾಗೆಯೇ ನೂರು ದಿನಗಳ ಕಾಲ ಪ್ರದರ್ಶನ ಕಾಣಬೇಕು. ಹಣ ದೋಚುವ ಬದಲು, ಸಿನಿಮಾ ಜನರಿಗೆ ತಲುಪಬೇಕು ಎಂಬ ಅವರ ಮಾತುಗಳಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

‘ದುಡ್ಡು ದೋಚಿಕೊಳ್ಳಬಾರದು’; ಸಿನಿಮಾ ಟಿಕೆಟ್ ದರದ ಬಗ್ಗೆ ಶಿವಣ್ಣ ಮಾತು
ಶಿವಣ್ಣ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 23, 2025 | 7:47 AM

Share

ಇತ್ತೀಚೆಗೆ ಒಟಿಟಿ ವ್ಯಾಪ್ತಿ ಹೆಚ್ಚಾಗಿದೆ. ಹೀಗಾಗಿ, ಸಿನಿಮಾ ಬಹುಬೇಗನೆ ಚಿತ್ರಮಂದಿರದಿಂದ ಕಾಲ್ಕೀಳುತ್ತದೆ ಮತ್ತು ಕಡಿಮೆ ಅವಧಿಯಲ್ಲಿ ಹೆಚ್ಚಿನ ಹಣ ಬಾಚಿಕೊಳ್ಳಲು ತಂಡದವರು ಪ್ಲ್ಯಾನ್ ರೂಪಿಸುತ್ತಾರೆ. ಈ ಕಾರಣದಿಂದಲೇ ದುಬಾರಿ ಟಿಕೆಟ್ ಬೆಲೆ ನಿಗದಿ ಮಾಡುತ್ತಾರೆ. ಈ ಬಗ್ಗೆ ಶಿವರಾಜ್​ಕುಮಾರ್ ಮಾತನಾಡಿದ್ದಾರೆ. ಸಿನಿಮಾ ಟಿಕೆಟ್ ದರವನ್ನು ದುಬಾರಿಯಾಗಿ ನಿಗದಿ ಮಾಡಬಾರದು ಎಂದು ಹೇಳಿದ್ದಾರೆ. ಅವರು ಹೇಳಿದ ಮಾತುಗಳ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಎರಡು ವಾರ ಸಿನಿಮಾ ಹೋದರೆ ಸಾಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಅದು ತಪ್ಪು ಎಂದು ಶಿವಣ್ಣ ಅವರು ಹೇಳಿದ್ದಾರೆ. ‘ದುಡ್ಡು ದೋಚಿಕೊಳ್ಳುವ ರೀತಿ ಇರಬಾರದು. ಎಲ್ಲರೂ ನೋಡುವ ರೀತಿ ಇರಬೇಕು’ ಎಂದು ಶಿವರಾಜ್​​ಕುಮಾರ್ ಹೇಳಿದ್ದಾರೆ. ಪ್ರೀಮಿಯರ್ ಶೋ ಹೊರತುಪಡಿಸಿದರೆ ‘45’ ಸಿನಿಮಾದ ಏಕಪರದೆ ಟಿಕೆಟ್ ದರ ಮೊದಲ ದಿನ 200 ರೂಪಾಯಿ ಹಾಗೂ 150 ರೂಪಾಯಿ ನಿಗದಿ ಮಾಡಲಾಗಿದೆ.

ಸಿನಿಮಾ 100 ದಿನ ಓಡಬಾರದು ಎಂದು ಎಲ್ಲಾದರೂ ಇದೆಯೇ? ಎಂದು ಶಿವಣ್ಣ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ‘ಸಿನಿಮಾ ನೂರು ದಿನ ಹೋಗುತ್ತದೆ ಎಂದು ಬೇಡ ಎಂದು ಹೇಳುವವರು ಯಾರು? ಸಿನಿಮಾ 100 ದಿನ ಹೋಗುತ್ತದೆ ಎಂದರೆ ಹೋಗಲಿ ತಪ್ಪೇನಿದೆ? ಸಿನಿಮಾ ಓಡಬೇಕಿ, ಓಡಿಸಬಾರದು’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಗಿಲ್ಲಿ ಜೊತೆ ಒಂದು ಸಿನಿಮಾ ಮಾಡ್ತೀನಿ; ಶಿವರಾಜ್​ಕುಮಾರ್ ಹೀಗೆ ಹೇಳಿದ್ರು

‘ಈಗಿನ ಕಾಲದಲ್ಲಿ ಸಿನಿಮಾದ ಮೇಕಿಂಗ್​​ನಲ್ಲಿ ಬದಲಾವಣೆ ಆಗಿದೆ. ಹಾಗಂದ ಮಾತ್ರಕ್ಕೆ ಸಿನಿಮಾ ಅದೇ ಇದೆ. ನಾವು ಟೆಕ್ನಿಕಲಿ ಅಪ್​​ಗ್ರೇಡ್ ಆಗಿದ್ದೇವೆ. ಸಿನಿಮಾನ ಓಡಿಸಬಾರದು ಎಂದು ಹೇಳಿದ್ದಾರೆ’ ಅವರ ಮಾತಿಗೆ ಮೆಚ್ಚುಗೆ ಸಿಕ್ಕಿದೆ. ಶಿವರಾಜ್​ಕುಮಾರ್ ಅವರ ‘45’ ಸಿನಿಮಾ ಎಲ್ಲ ಕಡೆಗಳಲ್ಲಿ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ 24ರಂದು ಸಾಕಷ್ಟು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗಿದೆ. ಈ ಚಿತ್ರದ ಜೊತೆ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರವೂ ತೆರೆಗೆ ಬರುತ್ತಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Tue, 23 December 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?