AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದುಡ್ಡು ದೋಚಿಕೊಳ್ಳಬಾರದು’; ಸಿನಿಮಾ ಟಿಕೆಟ್ ದರದ ಬಗ್ಗೆ ಶಿವಣ್ಣ ಮಾತು

ಒಟಿಟಿ ಹೆಚ್ಚಳದಿಂದ ಸಿನಿಮಾ ಟಿಕೆಟ್ ದರ ದುಬಾರಿಯಾಗುತ್ತಿದ್ದು, ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ದಿನಗಳು ಕಡಿಮೆಯಾಗುತ್ತಿದೆ ಎಂದು ಶಿವರಾಜ್‌ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ಟಿಕೆಟ್‌ಗಳು ಎಲ್ಲರಿಗೂ ಕೈಗೆಟುಕುವಂತಿರಬೇಕು, ಹಾಗೆಯೇ ನೂರು ದಿನಗಳ ಕಾಲ ಪ್ರದರ್ಶನ ಕಾಣಬೇಕು. ಹಣ ದೋಚುವ ಬದಲು, ಸಿನಿಮಾ ಜನರಿಗೆ ತಲುಪಬೇಕು ಎಂಬ ಅವರ ಮಾತುಗಳಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

‘ದುಡ್ಡು ದೋಚಿಕೊಳ್ಳಬಾರದು’; ಸಿನಿಮಾ ಟಿಕೆಟ್ ದರದ ಬಗ್ಗೆ ಶಿವಣ್ಣ ಮಾತು
ಶಿವಣ್ಣ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 23, 2025 | 7:47 AM

Share

ಇತ್ತೀಚೆಗೆ ಒಟಿಟಿ ವ್ಯಾಪ್ತಿ ಹೆಚ್ಚಾಗಿದೆ. ಹೀಗಾಗಿ, ಸಿನಿಮಾ ಬಹುಬೇಗನೆ ಚಿತ್ರಮಂದಿರದಿಂದ ಕಾಲ್ಕೀಳುತ್ತದೆ ಮತ್ತು ಕಡಿಮೆ ಅವಧಿಯಲ್ಲಿ ಹೆಚ್ಚಿನ ಹಣ ಬಾಚಿಕೊಳ್ಳಲು ತಂಡದವರು ಪ್ಲ್ಯಾನ್ ರೂಪಿಸುತ್ತಾರೆ. ಈ ಕಾರಣದಿಂದಲೇ ದುಬಾರಿ ಟಿಕೆಟ್ ಬೆಲೆ ನಿಗದಿ ಮಾಡುತ್ತಾರೆ. ಈ ಬಗ್ಗೆ ಶಿವರಾಜ್​ಕುಮಾರ್ ಮಾತನಾಡಿದ್ದಾರೆ. ಸಿನಿಮಾ ಟಿಕೆಟ್ ದರವನ್ನು ದುಬಾರಿಯಾಗಿ ನಿಗದಿ ಮಾಡಬಾರದು ಎಂದು ಹೇಳಿದ್ದಾರೆ. ಅವರು ಹೇಳಿದ ಮಾತುಗಳ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಎರಡು ವಾರ ಸಿನಿಮಾ ಹೋದರೆ ಸಾಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಅದು ತಪ್ಪು ಎಂದು ಶಿವಣ್ಣ ಅವರು ಹೇಳಿದ್ದಾರೆ. ‘ದುಡ್ಡು ದೋಚಿಕೊಳ್ಳುವ ರೀತಿ ಇರಬಾರದು. ಎಲ್ಲರೂ ನೋಡುವ ರೀತಿ ಇರಬೇಕು’ ಎಂದು ಶಿವರಾಜ್​​ಕುಮಾರ್ ಹೇಳಿದ್ದಾರೆ. ಪ್ರೀಮಿಯರ್ ಶೋ ಹೊರತುಪಡಿಸಿದರೆ ‘45’ ಸಿನಿಮಾದ ಏಕಪರದೆ ಟಿಕೆಟ್ ದರ ಮೊದಲ ದಿನ 200 ರೂಪಾಯಿ ಹಾಗೂ 150 ರೂಪಾಯಿ ನಿಗದಿ ಮಾಡಲಾಗಿದೆ.

ಸಿನಿಮಾ 100 ದಿನ ಓಡಬಾರದು ಎಂದು ಎಲ್ಲಾದರೂ ಇದೆಯೇ? ಎಂದು ಶಿವಣ್ಣ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ‘ಸಿನಿಮಾ ನೂರು ದಿನ ಹೋಗುತ್ತದೆ ಎಂದು ಬೇಡ ಎಂದು ಹೇಳುವವರು ಯಾರು? ಸಿನಿಮಾ 100 ದಿನ ಹೋಗುತ್ತದೆ ಎಂದರೆ ಹೋಗಲಿ ತಪ್ಪೇನಿದೆ? ಸಿನಿಮಾ ಓಡಬೇಕಿ, ಓಡಿಸಬಾರದು’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಗಿಲ್ಲಿ ಜೊತೆ ಒಂದು ಸಿನಿಮಾ ಮಾಡ್ತೀನಿ; ಶಿವರಾಜ್​ಕುಮಾರ್ ಹೀಗೆ ಹೇಳಿದ್ರು

‘ಈಗಿನ ಕಾಲದಲ್ಲಿ ಸಿನಿಮಾದ ಮೇಕಿಂಗ್​​ನಲ್ಲಿ ಬದಲಾವಣೆ ಆಗಿದೆ. ಹಾಗಂದ ಮಾತ್ರಕ್ಕೆ ಸಿನಿಮಾ ಅದೇ ಇದೆ. ನಾವು ಟೆಕ್ನಿಕಲಿ ಅಪ್​​ಗ್ರೇಡ್ ಆಗಿದ್ದೇವೆ. ಸಿನಿಮಾನ ಓಡಿಸಬಾರದು ಎಂದು ಹೇಳಿದ್ದಾರೆ’ ಅವರ ಮಾತಿಗೆ ಮೆಚ್ಚುಗೆ ಸಿಕ್ಕಿದೆ. ಶಿವರಾಜ್​ಕುಮಾರ್ ಅವರ ‘45’ ಸಿನಿಮಾ ಎಲ್ಲ ಕಡೆಗಳಲ್ಲಿ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ 24ರಂದು ಸಾಕಷ್ಟು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗಿದೆ. ಈ ಚಿತ್ರದ ಜೊತೆ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರವೂ ತೆರೆಗೆ ಬರುತ್ತಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Tue, 23 December 25

ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ