AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ‘45’ ಸಿನಿಮಾ ಮೂಲಕ ಡೈರೆಕ್ಟರ್ ಆಗಿದ್ದಾರೆ. ಈ ಸಿನಿಮಾವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಂಕ್ರಾಂತಿ ಶುಭ ಸಂದರ್ಭದಲ್ಲಿ ‘45’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ
Upendra, Ramesh Reddy, Raj B Shetty
ಮದನ್​ ಕುಮಾರ್​
|

Updated on: Jan 15, 2025 | 10:59 PM

Share

ಹಲವು ಕಾರಣಗಳಿಂದಾಗಿ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾದಲ್ಲಿ ಈ ಚಿತ್ರ ಕೂಡ ಇದೆ. ಆಗಸ್ಟ್​ 15ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಇತ್ತೀಚೆಗೆ ಚಿತ್ರತಂಡದವರು ಬಿಡುಗಡೆ ದಿನಾಂಕ ಘೋಷಿಸಿದರು. ಅದ್ದೂರಿ ಸಮಾರಂಭ ನಡೆಸಿ ರಿಲೀಸ್ ಡೇಟ್ ಘೋಷಣೆ ಮಾಡಲಾಯಿತು. ಸಚಿವ ರಾಮಲಿಂಗ ರೆಡ್ಡಿ, ಕೆ.ವಿ.ಎನ್. ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್ ನಾರಾಯಣ್, ಮಾಜಿ ಶಾಸಕ ರಾಮಚಂದ್ರೇಗೌಡ, ಇಂದ್ರಜಿತ್ ಲಂಕೇಶ್, ಸಂಜಯ್ ಗೌಡ, ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್, ಆನಂದ್, ಕೆ.ಮಂಜು, ಶ್ರೇಯಸ್ ಮಂಜು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ನಿರ್ಮಾಪಕ ರಮೇಶ್ ರೆಡ್ಡಿ ಅವರ ಪುತ್ರ ಸೂರಜ್ ಅವರು ರಿಲೀಸ್ ಡೇಟ್​ ಕುರಿತು ಮಾಹಿತಿ ಇರುವ ವಿಡಿಯೋ ಅನಾವರಣ ಮಾಡಿದರು. ಸೂರಜ್ ಅವರ ಜನ್ಮದಿನದಂದೇ ‘45’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ವಿಶೇಷ. ನಿರ್ಮಾಪಕ ಎಂ. ರಮೇಶ್ ರೆಡ್ಡಿ ಅವರು ಮಾತನಾಡಿ, ‘ಸಿನಿಮಾದಲ್ಲಿ ಕಂಟೆಂಟ್ ಹೇಗಿದೆ ಎಂಬುದೇ ಮುಖ್ಯ. ಸಿನಿಮಾ ಸಾವಿರ ಕೋಟಿ ರೂಪಾಯಿ ಮಾಡುತ್ತೋ, ನೂರು ಕೋಟಿ ರೂ. ಗಳಿಸುತ್ತೋ ಅಥವಾ 50 ಕೋಟಿ ರೂಪಾಯಿ ಮಾಡುತ್ತೋ ದೇವರಿಗೆ ಗೊತ್ತು. ಆದರೆ ಸಿನಿಮಾ ಎಲ್ಲರಿಗೂ ಇಷ್ಟ ಆಗಲಿದೆ’ ಎಂದರು.

‘45’ ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಅಲ್ಲದೇ, ಡಬ್ಬಿಂಗ್ ಕೂಡ ಮುಗಿದಿದೆ. ಈಗ ವಿಎಫ್​ಎಕ್ಸ್​ ಕೆಲಸಗಳು ನಡೆಯುತ್ತಿವೆ. ‘ಕೆನಡಾದ MARZ ಸಂಸ್ಥೆ ವಿಎಫ್​ಎಕ್ಸ್ ಮಾಡಲಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಗ್ರಾಫಿಕ್ ಕೆಲಸ ಮುಗಿಯಲಿದೆ. ಹಾಗಾಗಿ ಆಗಸ್ಟ್ 15ಕ್ಕೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದೇವೆ. ನನ್ನ ಮೊದಲ ನಿರ್ದೇಶನದ ಸಿನಿಮಾದಲ್ಲೇ ಶಿವರಾಜ್​ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ ಎಂಬುದನ್ನು ಈಗಲೂ ನಂಬಲಾಗುತ್ತಿಲ್ಲ‌’ ಎಂದು ಅರ್ಜುನ್ ಜನ್ಯ ಹೇಳಿದರು.

ಇದನ್ನೂ ಓದಿ: 6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ

ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರ ಕಾಂಬಿನೇಷನ್​ ಬಗ್ಗೆ ಉಪೇಂದ್ರ ಮೆಚ್ಚುಗೆ ಸೂಚಿಸಿದರು. ‘ಈ ಕಾರ್ಯಕ್ರಮ ನೋಡಿದರೆ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟಣೆ ಮಾಡುವ ಸಮಾರಂಭದ ಹಾಗಿಲ್ಲ. ಬದಲಾಗಿ ಸಿನಿಮಾ ಸಕ್ಸಸ್ ಮೀಟ್ ರೀತಿ ಇದೆ’ ಎಂದು ಉಪೇಂದ್ರ ಹೇಳಿದರು. ನಟ ರಾಜ್ ಬಿ. ಶೆಟ್ಟಿ, ಸಾಹಸ ನಿರ್ದೇಶಕರಾದ ಡಿಫರೆಂಟ್ ಡ್ಯಾನಿ, ರವಿವರ್ಮ, ಛಾಯಾಗ್ರಾಹಕ ಸತ್ಯ ಹಗಡೆ ಮುಂತಾದವರು ಕೂಡ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?