Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ‘45’ ಸಿನಿಮಾ ಮೂಲಕ ಡೈರೆಕ್ಟರ್ ಆಗಿದ್ದಾರೆ. ಈ ಸಿನಿಮಾವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಂಕ್ರಾಂತಿ ಶುಭ ಸಂದರ್ಭದಲ್ಲಿ ‘45’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ
Upendra, Ramesh Reddy, Raj B Shetty
Follow us
ಮದನ್​ ಕುಮಾರ್​
|

Updated on: Jan 15, 2025 | 10:59 PM

ಹಲವು ಕಾರಣಗಳಿಂದಾಗಿ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾದಲ್ಲಿ ಈ ಚಿತ್ರ ಕೂಡ ಇದೆ. ಆಗಸ್ಟ್​ 15ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಇತ್ತೀಚೆಗೆ ಚಿತ್ರತಂಡದವರು ಬಿಡುಗಡೆ ದಿನಾಂಕ ಘೋಷಿಸಿದರು. ಅದ್ದೂರಿ ಸಮಾರಂಭ ನಡೆಸಿ ರಿಲೀಸ್ ಡೇಟ್ ಘೋಷಣೆ ಮಾಡಲಾಯಿತು. ಸಚಿವ ರಾಮಲಿಂಗ ರೆಡ್ಡಿ, ಕೆ.ವಿ.ಎನ್. ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್ ನಾರಾಯಣ್, ಮಾಜಿ ಶಾಸಕ ರಾಮಚಂದ್ರೇಗೌಡ, ಇಂದ್ರಜಿತ್ ಲಂಕೇಶ್, ಸಂಜಯ್ ಗೌಡ, ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್, ಆನಂದ್, ಕೆ.ಮಂಜು, ಶ್ರೇಯಸ್ ಮಂಜು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ನಿರ್ಮಾಪಕ ರಮೇಶ್ ರೆಡ್ಡಿ ಅವರ ಪುತ್ರ ಸೂರಜ್ ಅವರು ರಿಲೀಸ್ ಡೇಟ್​ ಕುರಿತು ಮಾಹಿತಿ ಇರುವ ವಿಡಿಯೋ ಅನಾವರಣ ಮಾಡಿದರು. ಸೂರಜ್ ಅವರ ಜನ್ಮದಿನದಂದೇ ‘45’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ವಿಶೇಷ. ನಿರ್ಮಾಪಕ ಎಂ. ರಮೇಶ್ ರೆಡ್ಡಿ ಅವರು ಮಾತನಾಡಿ, ‘ಸಿನಿಮಾದಲ್ಲಿ ಕಂಟೆಂಟ್ ಹೇಗಿದೆ ಎಂಬುದೇ ಮುಖ್ಯ. ಸಿನಿಮಾ ಸಾವಿರ ಕೋಟಿ ರೂಪಾಯಿ ಮಾಡುತ್ತೋ, ನೂರು ಕೋಟಿ ರೂ. ಗಳಿಸುತ್ತೋ ಅಥವಾ 50 ಕೋಟಿ ರೂಪಾಯಿ ಮಾಡುತ್ತೋ ದೇವರಿಗೆ ಗೊತ್ತು. ಆದರೆ ಸಿನಿಮಾ ಎಲ್ಲರಿಗೂ ಇಷ್ಟ ಆಗಲಿದೆ’ ಎಂದರು.

‘45’ ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಅಲ್ಲದೇ, ಡಬ್ಬಿಂಗ್ ಕೂಡ ಮುಗಿದಿದೆ. ಈಗ ವಿಎಫ್​ಎಕ್ಸ್​ ಕೆಲಸಗಳು ನಡೆಯುತ್ತಿವೆ. ‘ಕೆನಡಾದ MARZ ಸಂಸ್ಥೆ ವಿಎಫ್​ಎಕ್ಸ್ ಮಾಡಲಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಗ್ರಾಫಿಕ್ ಕೆಲಸ ಮುಗಿಯಲಿದೆ. ಹಾಗಾಗಿ ಆಗಸ್ಟ್ 15ಕ್ಕೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದೇವೆ. ನನ್ನ ಮೊದಲ ನಿರ್ದೇಶನದ ಸಿನಿಮಾದಲ್ಲೇ ಶಿವರಾಜ್​ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ ಎಂಬುದನ್ನು ಈಗಲೂ ನಂಬಲಾಗುತ್ತಿಲ್ಲ‌’ ಎಂದು ಅರ್ಜುನ್ ಜನ್ಯ ಹೇಳಿದರು.

ಇದನ್ನೂ ಓದಿ: 6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ

ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರ ಕಾಂಬಿನೇಷನ್​ ಬಗ್ಗೆ ಉಪೇಂದ್ರ ಮೆಚ್ಚುಗೆ ಸೂಚಿಸಿದರು. ‘ಈ ಕಾರ್ಯಕ್ರಮ ನೋಡಿದರೆ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟಣೆ ಮಾಡುವ ಸಮಾರಂಭದ ಹಾಗಿಲ್ಲ. ಬದಲಾಗಿ ಸಿನಿಮಾ ಸಕ್ಸಸ್ ಮೀಟ್ ರೀತಿ ಇದೆ’ ಎಂದು ಉಪೇಂದ್ರ ಹೇಳಿದರು. ನಟ ರಾಜ್ ಬಿ. ಶೆಟ್ಟಿ, ಸಾಹಸ ನಿರ್ದೇಶಕರಾದ ಡಿಫರೆಂಟ್ ಡ್ಯಾನಿ, ರವಿವರ್ಮ, ಛಾಯಾಗ್ರಾಹಕ ಸತ್ಯ ಹಗಡೆ ಮುಂತಾದವರು ಕೂಡ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ