ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ‘45’ ಸಿನಿಮಾ ಮೂಲಕ ಡೈರೆಕ್ಟರ್ ಆಗಿದ್ದಾರೆ. ಈ ಸಿನಿಮಾವನ್ನು ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಶಿವರಾಜ್​ಕುಮಾರ್​, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಂಕ್ರಾಂತಿ ಶುಭ ಸಂದರ್ಭದಲ್ಲಿ ‘45’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಶಿವಣ್ಣ, ಉಪ್ಪಿ, ರಾಜ್ ಬಿ. ಶೆಟ್ಟಿ ನಟನೆಯ ‘45’ ಸಿನಿಮಾ ಆ.15ಕ್ಕೆ ಬಿಡುಗಡೆ
Upendra, Ramesh Reddy, Raj B Shetty

Updated on: Jan 15, 2025 | 10:59 PM

ಹಲವು ಕಾರಣಗಳಿಂದಾಗಿ ‘45’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾದಲ್ಲಿ ಈ ಚಿತ್ರ ಕೂಡ ಇದೆ. ಆಗಸ್ಟ್​ 15ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಇತ್ತೀಚೆಗೆ ಚಿತ್ರತಂಡದವರು ಬಿಡುಗಡೆ ದಿನಾಂಕ ಘೋಷಿಸಿದರು. ಅದ್ದೂರಿ ಸಮಾರಂಭ ನಡೆಸಿ ರಿಲೀಸ್ ಡೇಟ್ ಘೋಷಣೆ ಮಾಡಲಾಯಿತು. ಸಚಿವ ರಾಮಲಿಂಗ ರೆಡ್ಡಿ, ಕೆ.ವಿ.ಎನ್. ಪ್ರೊಡಕ್ಷನ್ಸ್​ ಸಂಸ್ಥೆಯ ವೆಂಕಟ್ ನಾರಾಯಣ್, ಮಾಜಿ ಶಾಸಕ ರಾಮಚಂದ್ರೇಗೌಡ, ಇಂದ್ರಜಿತ್ ಲಂಕೇಶ್, ಸಂಜಯ್ ಗೌಡ, ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್, ಆನಂದ್, ಕೆ.ಮಂಜು, ಶ್ರೇಯಸ್ ಮಂಜು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ನಿರ್ಮಾಪಕ ರಮೇಶ್ ರೆಡ್ಡಿ ಅವರ ಪುತ್ರ ಸೂರಜ್ ಅವರು ರಿಲೀಸ್ ಡೇಟ್​ ಕುರಿತು ಮಾಹಿತಿ ಇರುವ ವಿಡಿಯೋ ಅನಾವರಣ ಮಾಡಿದರು. ಸೂರಜ್ ಅವರ ಜನ್ಮದಿನದಂದೇ ‘45’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ವಿಶೇಷ. ನಿರ್ಮಾಪಕ ಎಂ. ರಮೇಶ್ ರೆಡ್ಡಿ ಅವರು ಮಾತನಾಡಿ, ‘ಸಿನಿಮಾದಲ್ಲಿ ಕಂಟೆಂಟ್ ಹೇಗಿದೆ ಎಂಬುದೇ ಮುಖ್ಯ. ಸಿನಿಮಾ ಸಾವಿರ ಕೋಟಿ ರೂಪಾಯಿ ಮಾಡುತ್ತೋ, ನೂರು ಕೋಟಿ ರೂ. ಗಳಿಸುತ್ತೋ ಅಥವಾ 50 ಕೋಟಿ ರೂಪಾಯಿ ಮಾಡುತ್ತೋ ದೇವರಿಗೆ ಗೊತ್ತು. ಆದರೆ ಸಿನಿಮಾ ಎಲ್ಲರಿಗೂ ಇಷ್ಟ ಆಗಲಿದೆ’ ಎಂದರು.

‘45’ ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಅಲ್ಲದೇ, ಡಬ್ಬಿಂಗ್ ಕೂಡ ಮುಗಿದಿದೆ. ಈಗ ವಿಎಫ್​ಎಕ್ಸ್​ ಕೆಲಸಗಳು ನಡೆಯುತ್ತಿವೆ. ‘ಕೆನಡಾದ MARZ ಸಂಸ್ಥೆ ವಿಎಫ್​ಎಕ್ಸ್ ಮಾಡಲಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಗ್ರಾಫಿಕ್ ಕೆಲಸ ಮುಗಿಯಲಿದೆ. ಹಾಗಾಗಿ ಆಗಸ್ಟ್ 15ಕ್ಕೆ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದೇವೆ. ನನ್ನ ಮೊದಲ ನಿರ್ದೇಶನದ ಸಿನಿಮಾದಲ್ಲೇ ಶಿವರಾಜ್​ಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ ಎಂಬುದನ್ನು ಈಗಲೂ ನಂಬಲಾಗುತ್ತಿಲ್ಲ‌’ ಎಂದು ಅರ್ಜುನ್ ಜನ್ಯ ಹೇಳಿದರು.

ಇದನ್ನೂ ಓದಿ: 6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ

ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರ ಕಾಂಬಿನೇಷನ್​ ಬಗ್ಗೆ ಉಪೇಂದ್ರ ಮೆಚ್ಚುಗೆ ಸೂಚಿಸಿದರು. ‘ಈ ಕಾರ್ಯಕ್ರಮ ನೋಡಿದರೆ ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟಣೆ ಮಾಡುವ ಸಮಾರಂಭದ ಹಾಗಿಲ್ಲ. ಬದಲಾಗಿ ಸಿನಿಮಾ ಸಕ್ಸಸ್ ಮೀಟ್ ರೀತಿ ಇದೆ’ ಎಂದು ಉಪೇಂದ್ರ ಹೇಳಿದರು. ನಟ ರಾಜ್ ಬಿ. ಶೆಟ್ಟಿ, ಸಾಹಸ ನಿರ್ದೇಶಕರಾದ ಡಿಫರೆಂಟ್ ಡ್ಯಾನಿ, ರವಿವರ್ಮ, ಛಾಯಾಗ್ರಾಹಕ ಸತ್ಯ ಹಗಡೆ ಮುಂತಾದವರು ಕೂಡ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us