AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್ ಕೆ.ಆರ್ ಪೇಟೆ ಮೊದಲ ಸಂಬಳ ಎಷ್ಟು?; ಗೂಗಲ್​ನಲ್ಲಿ ಜನರು ಹುಡುಕಾಡಿದ ಪ್ರಶ್ನೆಗಳಿಗೆ ಸ್ವತಃ ಅವರೇ ಉತ್ತರಿಸಿದ್ದಾರೆ! ವಿಡಿಯೋ ನೋಡಿ

Shivaraj KR Pete: ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಚಿತ್ರಗಳಿಂದ ಶಿವರಾಜ್ ಕೆ.ಆರ್ ಪೇಟೆ ಗುರುತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರ ‘ಧಮಾಕ’ ಟೀಸರ್ ಬಿಡುಗಡೆಯಾಗಿ, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅವರ ವಿಶೇಷ ಸಂದರ್ಶನ ಇಲ್ಲಿದೆ.

TV9 Web
| Edited By: |

Updated on: Dec 15, 2021 | 9:41 AM

Share

ಸ್ಯಾಂಡಲ್​ವುಡ್ ಹಾಸ್ಯನಟ ಶಿವರಾಜ್ ಕೆ.ಆರ್ ಪೇಟೆ (Shivaraj KR Pete) ಅಭಿನಯದ ‘ಧಮಾಕ’ (Dhamaka) ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಇದಕ್ಕೆ ಯೋಗರಾಜ್ ಭಟ್ (Yogaraj Bhat) ಧ್ವನಿ ನೀಡಿದ್ದರು. ಟೀಸರ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಇದೀಗ ಶಿವರಾಜ್ ಕೆ.ಆರ್ ಪೇಟೆ ಟಿವಿ9ನೊಂದಿಗೆ ಮಾತನಾಡಿದ್ದು, ಹಲವು ಅಪರೂಪದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಟಿವಿ9ನೊಂದಿಗೆ ಮಾತನಾಡಿದ ಶಿವರಾಜ್ ಕೆ.ಆರ್ ಪೇಟೆ ವೈಯಕ್ತಿಯ ಜೀವನದ ಹಲವು ಅಚ್ಚರಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಗೂಗಲ್ ನಲ್ಲಿ ಅವರ ಕುರಿತು ಜನರು ಏನನ್ನು ಹುಡುಕಾಟ ಮಾಡಿದ್ದರೋ ಅಂತಹ ಪ್ರಶ್ನೆಗಳಿಗೆ ಸ್ವತಃ ಅವರೇ ಉತ್ತರಿಸಿದ್ದು, ಜನರ ಕುತೂಹಲ ತಣಿಸಿದ್ದಾರೆ. ಎಲ್ಲಾ ಪ್ರಶ್ನೆಗಳಿಗೆ ತಮಾಷೆಯಾಗಿಯೇ ಉತ್ತರಿಸಿದ ಶಿವರಾಜ್, ವಯಸ್ಸಿನ‌ ಕುರಿತು ಕೇಳಿದಾಗ ‘ಯಂಗ್ ಏಜ್’ ಎಂದು ಉತ್ತರಿಸಿದರು. ಶಿವರಾಜ್ ನೆಟ್ ವರ್ತ್ ಎಷ್ಟು? ಎಂಬುದನ್ನು ಜನರು ಹೆಚ್ಚಾಗಿ ಗೂಗಲ್‌ನಲ್ಲಿ ಹುಡುಕಿದ್ದಾರೆ. ಅದಕ್ಕೆ ಉತ್ತರಿಸಿದ ಅವರು, ‘ಜನರು ಪ್ರೀತಿಯಿಂದ ಕೊಟ್ಟಷ್ಟು, ಪ್ರೀತಿಯಿಂದ ತೆಗೆದುಕೊಂಡಷ್ಟು’ ಎಂದು ಉತ್ತರಿಸಿದ್ದಾರೆ. ವಿದ್ಯಾಭ್ಯಾಸದ ಕುರಿತ ಪ್ರಶ್ನೆಗೆ ಸಮಾಜಶಾಸ್ತ್ರದಲ್ಲಿ ಪದವಿ ವ್ಯಾಸಂಗ ಆಗಿದೆ ಎಂದಿದ್ದಾರೆ. ಮೂಲ ಊರು ಕೆ.ಆರ್ ಪೇಟೆ. ಆದರೆ ಹುಟ್ಟಿದ್ದು ಬೆಳೆದಿದ್ದು ಎಲ್ಲಾ ಗೊರೂರಿನಲ್ಲಿ ಎಂದು ಊರಿನ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಹಳಷ್ಟು ಜನರಿಗೆ ಕುತೂಹಲವಿರುವುದು ಶಿವರಾಜ್ ಕೆ.ಆರ್ ಪೇಟೆ ಅವರು ಮೊದಲು ಯಾವ ಕೆಲಸ ಮಾಡುತ್ತಿದ್ದರು ಎಂಬ ಕುರಿತು. ಅದಕ್ಕೆ ಉತ್ತರಿಸಿದ ಅವರು, ಮೊದಲು ಮಾಡಿದ ಕೆಲಸ ನೆನಪಿಲ್ಲ. ಆದರೆ ಗಾರೆ ಕೆಲಸ, ಕಲ್ಲು ಪ್ಯಾಕಿಂಗ್, ಸಪ್ಲೈಯರ್ ಮೊದಲಾದ ಕೆಲಸಗಳನ್ನು ಮಾಡಿದ್ದೇನೆ ಎಂದಿದ್ದಾರೆ. ಅಲ್ಲದೇ ಮೊದಲ ಸಂಬಳದ ಕುರಿತು ಮಾಹಿತಿ ಹಂಚಿಕೊಂಡ ಅವರು, ಗಾರೆ ಕೆಲಸದಲ್ಲಿ‌ ದಿನಕ್ಕೆ 20 ರೂ ಗಳಿಸುತ್ತಿದ್ದೆ. ಅದು ಮೊದಲ ಗಳಿಕೆ ಎಂದಿದ್ದಾರೆ. ಈಗ ಜಾಸ್ತಿ ಕೊಡುತ್ತಾರೆ, ಆದರೆ ಆಗೆಲ್ಲಾ ಅಷ್ಟೇ ಇತ್ತು. ಆ ಸಂಬಳದಲ್ಲೇ ಉಳಿಸಿ ಯಾವಾಗ್ಲೋ ಒಂದು 12- 15 ರೂ ಹವಾಯಿ ಚಪ್ಪಲಿ ತಗೊಂಡಿದ್ದರೆ ವರ್ಷವಿಡೀ ಕಳೆಯುತ್ತಿದ್ದೆವು ಎಂದಿದ್ದಾರೆ. ಮೊದಲ ಸಿನಿಮಾ ಸ್ಯಾಲರಿ ಕುರಿತ ಪ್ರಶ್ನೆಗೆ ಶಿವರಾಜ್, ಚಂದ್ರಶೇಖರ್ ಸರ್ ಕೊಟ್ಟಷ್ಟು ಎಂದು ಉತ್ತರಿಸಿದ್ದಾರೆ.

ನೆಚ್ಚಿನ ನಟ ನರಸಿಂಹರಾಜು ಎಂದು ಉತ್ತರಿಸಿದ್ದಾರೆ. ಇಷ್ಟದ ಆಹಾರ ಉಪ್ಪೆಸರು, ಮುದ್ದೆ ಎಂದಿದ್ದಾರೆ. ಇದೇ ವೇಳೆ ಅವರು ನಾಟಿಕೋಳಿ ಸಾರು ಹಾಗೂ ಉಪ್ಲೆಸರನ್ನು ಮಂಡ್ಯ ಭಾಗದಲ್ಲಿ ಹೇಗೆ ವಿಶೇಷವಾಗಿ ತಯಾರಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಶಿವರಾಜ್ ಕೆ.ಆರ್ ಪೇಟೆ ಸಂದರ್ಶನದ ವಿಡಿಯೋ ಇಲ್ಲಿದೆ:

‘ಧಮಾಕ’ಗೆ ಲಕ್ಷ್ಮಿ ರಮೇಶ್ ಆಕ್ಷನ್ ಕಟ್ ಹೇಳಿದ್ದು, ಎಸ್‌.ಆರ್. ಮೀಡಿಯಾ ಪ್ರೊಡಕ್ಷನ್ಸ್‌ ಮತ್ತು ನಂದಿ ಎಂಟರ್‌ಟೇನ್‌ಮೆಂಟ್ಸ್ ಬ್ಯಾನರ್‌ನಡಿಯಲ್ಲಿ ಸಿನಿಮಾ ನಿರ್ಮಾಣಗೊಂಡಿದೆ. ನಯನಾ ಶರತ್, ಸಿದ್ದು ಮೂಲಿಮನಿ, ಪ್ರಿಯಾ ಆಚಾರ್, ಪ್ರಕಾಶ್‌ ತುಂಬಿನಾಡ್, ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ಮೊದಲಾದವರು ಬಣ್ಣಹಚ್ಚಿದ್ದಾರೆ.

ಇದನ್ನೂ ಓದಿ:

‘ಧಮಾಕ’ ಮಾಡಲು ಬಂದ ಶಿವರಾಜ್​ ಕೆ.ಆರ್​. ಪೇಟೆ; ಈ ಸಿನಿಮಾದ ವಿಶೇಷತೆ ಏನು?

ನಿಮಗೆ ಗೊತ್ತಾ? ಜಾಗತಿಕ ಸುಂದರಿ ಸ್ಪರ್ಧೆಯಲ್ಲಿ ಹರ್ನಾಜ್ ಸಂಧು ತೊಟ್ಟ ಗೌನನ್ನು ವಿನ್ಯಾಸಗೊಳಿಸಿದ್ದು ಒಬ್ಬ ತೃತೀಯ ಲಿಂಗಿ!

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?