Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ

‘ನೀ ಸಿಗೋವರೆಗೂ’ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ
ಶಿವರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 15, 2021 | 9:51 PM

ಶಿವರಾಜ್​ಕುಮಾರ್​ ಅವರು ಸಿನಿಮಾದಿಂದ ಸಿನಿಮಾಗೆ ಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈಗ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕಾಗಿ ಸೇನಾಧಿಕಾರಿಯ ಅವತಾರ ತಾಳಿದ್ದಾರೆ. ದಸರಾ ಹಬ್ಬದ ನಿಮಿತ್ತ ಈ ಲುಕ್​ ರಿಲೀಸ್​ ಆಗಿದೆ. ಇದನ್ನು​ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

‘ನೀ ಸಿಗೋವರೆಗೂ’ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಅಮೆರಿಕ ಮುಂತಾದ ಕಡೆ ಶೂಟಿಂಗ್​ ನಡೆಯಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಈ ಚಿತ್ರದಲ್ಲಿ ಸೇನಾ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ಮೆರ್ಹಿನ್ ಫಿರ್ಜಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಂಗ್ಲಿ ನಟಿಸುತ್ತಿರುವುದು ವಿಶೇಷ. ಇಷ್ಟು ದಿನ ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಕರುನಾಡ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಈಗ ನಟನೆಯ ಮೂಲಕವೂ ಕನ್ನಡಿಗರಿಗೆ ಹತ್ತಿರ ಆಗಲು ಪ್ರಯತ್ನಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ನಟಿಸುವಂತೆ ಅವರಿಗೆ ಬೇಡಿಕೆ ಬರುತ್ತಿದೆ. ಆ ಪೈಕಿ ಅವರು ಈ  ಚಿತ್ರ ಒಪ್ಪಿಕೊಂಡಿದ್ದಾರೆ.

‘ಟಗರು’ ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದರಿಂದ ಸಿನಿಮಾಗೆ ದೊಡ್ಡ ಮಟ್ಟದ ಮೈಲೇಜ್​ ಸಿಗುವ ಸಾಧ್ಯತೆ ಇದೆ. ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ  ನರಾಲ ಶ್ರೀನಿವಾಸ್ ರೆಡ್ಡಿ,  ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ‘ನೀ ಸಿಗೋವರೆಗೂ’ ಸಿನಿಮಾ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ನಾನು ಮತ್ತು ಉಪೇಂದ್ರ ಲವರ್ಸ್​ ರೀತಿ ಆಗಿದ್ದೇವೆ ಎಂದ ಶಿವರಾಜ್​ಕುಮಾರ್​

Mangli: ಕಣ್ಣೇ ಅದಿರಿಂದಿ ಗಾಯಕಿ ಮಂಗ್ಲಿಗೆ ಶಿವರಾಜ್​ಕುಮಾರ್​ ಸಿನಿಮಾದಲ್ಲಿ ನಟಿಸುವ ಅವಕಾಶ 

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ