AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ

‘ನೀ ಸಿಗೋವರೆಗೂ’ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಸೇನಾಧಿಕಾರಿ ಲುಕ್​ನಲ್ಲಿ ಶಿವರಾಜ್​ಕುಮಾರ್​; ಹೊಸ ಲುಕ್​ ನೋಡಿ ಅಭಿಮಾನಿಗಳು ಫಿದಾ
ಶಿವರಾಜ್​ಕುಮಾರ್​
TV9 Web
| Edited By: |

Updated on: Oct 15, 2021 | 9:51 PM

Share

ಶಿವರಾಜ್​ಕುಮಾರ್​ ಅವರು ಸಿನಿಮಾದಿಂದ ಸಿನಿಮಾಗೆ ಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈಗ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕಾಗಿ ಸೇನಾಧಿಕಾರಿಯ ಅವತಾರ ತಾಳಿದ್ದಾರೆ. ದಸರಾ ಹಬ್ಬದ ನಿಮಿತ್ತ ಈ ಲುಕ್​ ರಿಲೀಸ್​ ಆಗಿದೆ. ಇದನ್ನು​ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ.

‘ನೀ ಸಿಗೋವರೆಗೂ’ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಅಮೆರಿಕ ಮುಂತಾದ ಕಡೆ ಶೂಟಿಂಗ್​ ನಡೆಯಲಿದೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಈ ಚಿತ್ರದಲ್ಲಿ ಸೇನಾ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ಮೆರ್ಹಿನ್ ಫಿರ್ಜಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಂಗ್ಲಿ ನಟಿಸುತ್ತಿರುವುದು ವಿಶೇಷ. ಇಷ್ಟು ದಿನ ‘ಕಣ್ಣೇ ಅದಿರಿಂದ’ ಹಾಡಿನ ಮೂಲಕ ಕರುನಾಡ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಈಗ ನಟನೆಯ ಮೂಲಕವೂ ಕನ್ನಡಿಗರಿಗೆ ಹತ್ತಿರ ಆಗಲು ಪ್ರಯತ್ನಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ನಟಿಸುವಂತೆ ಅವರಿಗೆ ಬೇಡಿಕೆ ಬರುತ್ತಿದೆ. ಆ ಪೈಕಿ ಅವರು ಈ  ಚಿತ್ರ ಒಪ್ಪಿಕೊಂಡಿದ್ದಾರೆ.

‘ಟಗರು’ ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದರಿಂದ ಸಿನಿಮಾಗೆ ದೊಡ್ಡ ಮಟ್ಟದ ಮೈಲೇಜ್​ ಸಿಗುವ ಸಾಧ್ಯತೆ ಇದೆ. ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ  ನರಾಲ ಶ್ರೀನಿವಾಸ್ ರೆಡ್ಡಿ,  ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ‘ನೀ ಸಿಗೋವರೆಗೂ’ ಸಿನಿಮಾ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ನಾನು ಮತ್ತು ಉಪೇಂದ್ರ ಲವರ್ಸ್​ ರೀತಿ ಆಗಿದ್ದೇವೆ ಎಂದ ಶಿವರಾಜ್​ಕುಮಾರ್​

Mangli: ಕಣ್ಣೇ ಅದಿರಿಂದಿ ಗಾಯಕಿ ಮಂಗ್ಲಿಗೆ ಶಿವರಾಜ್​ಕುಮಾರ್​ ಸಿನಿಮಾದಲ್ಲಿ ನಟಿಸುವ ಅವಕಾಶ 

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?