AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾಗೆ ರೆಸ್ಪಾನ್ಸ್ ಬರ್ತಿಲ್ಲ, ಭವಿಷ್ಯ ಇಲ್ಲಿಗೆ ಕೊನೆಯಾದ ಹಾಗೆ ಅನಿಸುತ್ತಿದೆ’; ‘ಭಜರಂಗಿ 2’ ಖಳನ ಕಣ್ಣೀರು

‘ಭಜರಂಗಿ’, ‘ವಜ್ರಕಾಯ’ ನಂತರದಲ್ಲಿ ನಟ ಶಿವರಾಜ್​ಕುಮಾರ್​ ಹಾಗೂ ನಿರ್ದೇಶಕ ಎ. ಹರ್ಷ ‘ಭಜರಂಗಿ 2’ಗಾಗಿ ಮತ್ತೆ ಒಂದಾಗಿದ್ದರು. ಈ ಸಿನಿಮಾ ಮೂಲಕ ಹರ್ಷ ಪ್ರೇಕ್ಷಕರ ಎದುರು ಮತ್ತೊಂದು ಫ್ಯಾಂಟಸಿ ಜಗತ್ತನ್ನು ತೆರೆದಿಟ್ಟಿದ್ದರು.

‘ಸಿನಿಮಾಗೆ ರೆಸ್ಪಾನ್ಸ್ ಬರ್ತಿಲ್ಲ, ಭವಿಷ್ಯ ಇಲ್ಲಿಗೆ ಕೊನೆಯಾದ ಹಾಗೆ ಅನಿಸುತ್ತಿದೆ’; ‘ಭಜರಂಗಿ 2’ ಖಳನ ಕಣ್ಣೀರು
ಚೆಲುವರಾಜ್​
TV9 Web
| Edited By: |

Updated on: Nov 03, 2021 | 4:55 PM

Share

‘ಭಜರಂಗಿ 2’ ಸಿನಿಮಾ ಅಕ್ಟೋಬರ್​ 29ರಂದು ತೆರೆಗೆ ಬಂದಿತ್ತು. ಅದೇ ದಿನ ನಟ ಪುನೀತ್​ ರಾಜ್​ಕುಮಾರ್​ ಕೂಡ ನಿಧನರಾದರು. ಹೀಗಾಗಿ, ಆ ದಿನ ಅನೇಕ ಕಡೆಗಳಲ್ಲಿ ಸಿನಿಮಾ ಪ್ರದರ್ಶನ ರದ್ದು ಮಾಡಲಾಯಿತು. ಇನ್ನು, ರಾಜ್​ ಕುಟುಂಬ ಹಾಗೂ ಅವರ ಅಭಿಮಾನಿಗಳು ದುಃಖದಲ್ಲಿದ್ದಾರೆ. ಈ ಕಾರಣಕ್ಕೆ ಯಾರೂ ಸಿನಿಮಾಗೆ ತೆರಳೋಕೆ ಅಷ್ಟಾಗಿ ಮನಸ್ಸು ಮಾಡುತ್ತಿಲ್ಲ. ಚಿತ್ರತಂಡ ಕೂಡ ಪ್ರಚಾರ ಮಾಡುವ ಹುಮ್ಮಸ್ಸಿನಲ್ಲಿ ಇಲ್ಲ. ಈ ಎಲ್ಲಾ ಕಾರಣಕ್ಕೆ ಚಿತ್ರದ ಬಾಕ್ಸ್​ ಆಫೀಸ್​ಗೆ ಹೊಡೆತ ಬಿದ್ದಿದೆ. ಇದು ಚಿತ್ರತಂಡದ ಚಿಂತೆಯನ್ನು ಹೆಚ್ಚಿಸಿದೆ. ಈ ಬಗ್ಗೆ ‘ಭಜರಂಗಿ 2’ ವಿಲನ್ ಚೆಲುವ ರಾಜ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

‘ಅಕ್ಟೋಬರ್​ 29. ಒಂದು ಕಡೆ ಸಿನಿಮಾ ರಿಲೀಸ್ ಆಯ್ತು, ಮತ್ತೊಂದು ಕಡೆ ಪವರ್​ ಸ್ಟಾರ್ ನಿಧನ ಹೊಂದಿದರು. ಒಂದು ಕಡೆ ಖುಷಿ, ಮತ್ತೊಂದು ಕಡೆ ದುಃಖ. ಅಂತಹ ದಿನ ಮರೆಯೋಕೆ ಸಾಧ್ಯವಿಲ್ಲ. ದೇವರ ಮಗನನ್ನು ಕಳೆದುಕೊಂಡೆವು. ಅವರು ನಮ್ಮ ಜತೆ ಇಲ್ಲ.  ಭಜರಂಗಿ 2 ಮೂರು ವರ್ಷದ ಶ್ರಮ. ಆದರೆ, ಚಿತ್ರಕ್ಕೆ ರೆಸ್ಪಾನ್ಸ್ ಸಿಗುತ್ತಿಲ್ಲ. ನಮ್ಮ ಭವಿಷ್ಯ ಇಲ್ಲಿಗೆ ಕೊನೇ ಆಗುತ್ತಿದೆಯೇನೋ ಎನಿಸುತ್ತಿದೆ. ದಯವಿಟ್ಟು ನಮಗೆ ಸಪೋರ್ಟ್ ಕೊಡಿ. ನಮ್ಮನ್ನ ನಡುನೀರಲ್ಲಿ ಕೈಬಿಡಬೇಡಿ’ ಎಂದು ಚೆಲುವ ರಾಜ್ ಕೇಳಿಕೊಂಡಿದ್ದಾರೆ.

‘ಭಜರಂಗಿ’, ‘ವಜ್ರಕಾಯ’ ನಂತರದಲ್ಲಿ ನಟ ಶಿವರಾಜ್​ಕುಮಾರ್​ ಹಾಗೂ ನಿರ್ದೇಶಕ ಎ. ಹರ್ಷ ‘ಭಜರಂಗಿ 2’ಗಾಗಿ ಮತ್ತೆ ಒಂದಾಗಿದ್ದರು. ಈ ಸಿನಿಮಾ ಮೂಲಕ ಹರ್ಷ ಪ್ರೇಕ್ಷಕರ ಎದುರು ಮತ್ತೊಂದು ಫ್ಯಾಂಟಸಿ ಜಗತ್ತನ್ನು ತೆರೆದಿಟ್ಟಿದ್ದರು. ಮಂತ್ರ-ತಂತ್ರ, ಧನ್ವಂತರಿ, ಪುನರ್ಜನ್ಮ ಹೀಗೆ ನಾನಾ ವಿಚಾರಗಳನ್ನು ಹೇಳುವುದರ ಜತೆಗೆ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ರವಾನಿಸುವ ಪ್ರಯತ್ನ ಮಾಡಿದ್ದರು.  ಆದರೆ, ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘ಆ ಸೀನ್​ ನನಗೆ ಟಚ್​ ಆಯ್ತು’; ‘ಭಜರಂಗಿ 2’ ನೋಡಿದ ಶಿವಣ್ಣನ ಮಾತು

Bhajarangi 2 Movie Review: ಫ್ಯಾಂಟಸಿ ಲೋಕದ ‘ಭಜರಂಗಿ 2’ ಕಥೆಯಲ್ಲಿ ಶಿವಣ್ಣನ ಎನರ್ಜಿಯೇ ಹೈಲೈಟ್

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ