AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ನಿಂತವರ ಜತೆ ಮನೆಯವರಂತೆ ಮಾತಾಡಿದ ಶಿವರಾಜ್​ಕುಮಾರ್​; ಸರಳತೆಗೆ ಮತ್ತೊಂದು ಹೆಸರು ಶಿವಣ್ಣ

ಶಿವರಾಜ್​ಕುಮಾರ್​ ಅವರು ತಮ್ಮ ಕಾರಿನಲ್ಲಿ ಹೊರಗೆ ತೆರಳಿದ್ದರು. ರಸ್ತೆ ಮಧ್ಯೆ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಕಾರಿನ ಗ್ಲಾಸ್​ ಇಳಿದಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ನಿಂತ ಮಹಿಳೆಯೊಬ್ಬರು ಶಿವರಾಜ್​ಕುಮಾರ್​ ಅವರನ್ನು ಲೈವ್​ ಆಗಿ ನೋಡಿದ್ದಕ್ಕೆ ಖುಷಿಪಟ್ಟಿದ್ದಾರೆ.

ರಸ್ತೆಬದಿ ನಿಂತವರ ಜತೆ ಮನೆಯವರಂತೆ ಮಾತಾಡಿದ ಶಿವರಾಜ್​ಕುಮಾರ್​; ಸರಳತೆಗೆ ಮತ್ತೊಂದು ಹೆಸರು ಶಿವಣ್ಣ
ಶಿವಣ್ಣ
TV9 Web
| Edited By: |

Updated on:Feb 18, 2022 | 7:53 PM

Share

ರಾಜ್​ಕುಮಾರ್​ ಕುಟುಂಬಕ್ಕೆ (Rajumar Family) ಬೇರೆಯದೇ ಆದ ಘನತೆ ಇದೆ. ಸಿನಿಮಾ ರಂಗಕ್ಕೆ ಈ ಕುಟುಂಬ ನೀಡಿದ ಕೊಡುಗೆ ಅಷ್ಟಿಷ್ಟಲ್ಲ. ರಾಜ್​ ಕುಟುಂಬದವರು ಸರಳತೆ ವಿಚಾರದಿಂದಲೂ ಎಲ್ಲರಿಗೂ ಮಾದರಿ ಆಗಿದ್ದಾರೆ. ರಾಜ್​ಕುಮಾರ್ ಅವರಿಂದ ಹಿಡಿದು ಪುನೀತ್​ ರಾಜ್​ಕುಮಾರ್​ವರೆಗೆ (Puneeth Rajkumar) ಎಲ್ಲರೂ ಸದಾ​ ಸರಳವಾಗಿ ನಡೆದುಕೊಂಡಿದ್ದಾರೆ. ಇವರು ಯಾರ ಜತೆಗೂ ಸೊಕ್ಕಿನ ಮಾತನಾಡಿದವರಲ್ಲ. ಶಿವರಾಜ್​ಕುಮಾರ್ (Shivarajkumar)​ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಜನ ಸಾಮಾನ್ಯರ ಜತೆ ಸಾಮಾನ್ಯರಂತೆ ಇದ್ದುಬಿಡುತ್ತಾರೆ. ಈ ಮೊದಲು ಕೂಡ ಇದು ಸಾಬೀತಾಗಿದೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಶಿವರಾಜ್​ಕುಮಾರ್​ ಸಿಂಪ್ಲಿಸಿಟಿ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್ ನಿಧನ ವಿಚಾರ ಶಿವರಾಜ್​ಕುಮಾರ್​ ಅವರಿಗೆ ತೀವ್ರ ದುಃಖ ತಂದಿದೆ. ಕೆಲವು ತಿಂಗಳ ಕಾಲ ಶಿವರಾಜ್​ಕುಮಾರ್ ಅವರು ಸಿನಿಮಾ ಕೆಲಸದಿಂದ ದೂರವೇ ಉಳಿದುಕೊಂಡಿದ್ದರು. ಈಗ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಪುನೀತ್​ ಇಲ್ಲ ಎನ್ನುವ ನೋವನ್ನು ಒಪ್ಪಿಕೊಂಡು ಮುಂದೆ ಸಾಗುತ್ತಿದ್ದಾರೆ. ಶಿವಣ್ಣ ನೋವು ತೋಡಿಕೊಂಡ ಅನೇಕ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಈಗ ಶಿವರಾಜ್​ಕುಮಾರ್​​ ಅವರ ಹೊಸ ವಿಡಿಯೋ ಗಮನ ಸೆಳೆಯುತ್ತಿದೆ.

ಶಿವರಾಜ್​ಕುಮಾರ್​ ಅವರು ತಮ್ಮ ಕಾರಿನಲ್ಲಿ ಹೊರಗೆ ತೆರಳಿದ್ದರು. ರಸ್ತೆ ಮಧ್ಯೆ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಕಾರಿನ ಗ್ಲಾಸ್​ ಇಳಿದಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ನಿಂತ ಮಹಿಳೆಯೊಬ್ಬರು ಶಿವರಾಜ್​ಕುಮಾರ್​ ಅವರನ್ನು ಲೈವ್​ ಆಗಿ ನೋಡಿದ್ದಕ್ಕೆ ಖುಷಿಪಟ್ಟಿದ್ದಾರೆ. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ಸಂತೋಷವನ್ನು ಆ ಮಹಿಳೆ ಶಿವಣ್ಣನ ಎದುರು ವ್ಯಕ್ತಪಡಿಸಿದ್ದಾರೆ. ಕುಟುಂಬದ ಸದಸ್ಯರಂತೆ ಅವರ ಉಭಯಕುಶಲೋಪರಿ ವಿಚಾರಿಸಿದ್ದಾರೆ ಶಿವರಾಜ್​ಕುಮಾರ್.

ಮಹಿಳೆ: ಸರ್​ ಹೇಗಿದ್ದೀರಾ?

ಶಿವರಾಜ್​ಕುಮಾರ್: ಚೆನ್ನಾಗಿದ್ದೀನಿ.

ಮಹಿಳೆ: ಮೊದಲ ಬಾರಿಗೆ ನಿಮ್ಮನ್ನು ನೋಡ್ತಿರೋದು. ತುಂಬಾ ಖುಷಿ ಆಯ್ತು.

ಶಿವರಾಜ್​ಕುಮಾರ್: ಥ್ಯಾಂಕ್ಸ್​. ಊಟ ಆಯ್ತಾ? ಬಿರಿಯಾನಿನಾ?

ಮಹಿಳೆ: ಇಲ್ಲ ಸರ್​. ನಿನ್ನೆ ಬಿರಿಯಾನಿ ಆಗಿತ್ತು.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಶಿವರಾಜ್​ಕುಮಾರ್​ ಸರಳತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅವರು ಮಹಿಳೆಯ ಉಭಯಕುಶಲೋಪರಿ ವಿಚಾರಿಸಿಕೊಂಡ ಪರಿಗೆ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಟ್ರೋಲ್​ ಪೇಜ್​ಗಳಲ್ಲಿ, ಶಿವಣ್ಣ ಅಭಿಮಾನಿ ಬಳಗದಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

ಇದನ್ನೂ ಓದಿ: ‘ಒಬ್ಬೊಬ್ಬರೇ ಇಂಡಸ್ಟ್ರಿಯನ್ನು ಬಿಟ್ಟು ಹೋಗುತ್ತಿರುವುದನ್ನು ನೋಡಿದ್ರೆ ಬೇಸರವಾಗುತ್ತದೆ’; ಶಿವರಾಜ್​ಕುಮಾರ್​

ಚೆನ್ನೈನಲ್ಲಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಭೇಟಿ ಮಾಡಿದ ಶಿವರಾಜ್‌ಕುಮಾರ್-ಗೀತಾ ದಂಪತಿ

Published On - 7:53 pm, Fri, 18 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ