AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ನಿಂತವರ ಜತೆ ಮನೆಯವರಂತೆ ಮಾತಾಡಿದ ಶಿವರಾಜ್​ಕುಮಾರ್​; ಸರಳತೆಗೆ ಮತ್ತೊಂದು ಹೆಸರು ಶಿವಣ್ಣ

ಶಿವರಾಜ್​ಕುಮಾರ್​ ಅವರು ತಮ್ಮ ಕಾರಿನಲ್ಲಿ ಹೊರಗೆ ತೆರಳಿದ್ದರು. ರಸ್ತೆ ಮಧ್ಯೆ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಕಾರಿನ ಗ್ಲಾಸ್​ ಇಳಿದಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ನಿಂತ ಮಹಿಳೆಯೊಬ್ಬರು ಶಿವರಾಜ್​ಕುಮಾರ್​ ಅವರನ್ನು ಲೈವ್​ ಆಗಿ ನೋಡಿದ್ದಕ್ಕೆ ಖುಷಿಪಟ್ಟಿದ್ದಾರೆ.

ರಸ್ತೆಬದಿ ನಿಂತವರ ಜತೆ ಮನೆಯವರಂತೆ ಮಾತಾಡಿದ ಶಿವರಾಜ್​ಕುಮಾರ್​; ಸರಳತೆಗೆ ಮತ್ತೊಂದು ಹೆಸರು ಶಿವಣ್ಣ
ಶಿವಣ್ಣ
TV9 Web
| Edited By: |

Updated on:Feb 18, 2022 | 7:53 PM

Share

ರಾಜ್​ಕುಮಾರ್​ ಕುಟುಂಬಕ್ಕೆ (Rajumar Family) ಬೇರೆಯದೇ ಆದ ಘನತೆ ಇದೆ. ಸಿನಿಮಾ ರಂಗಕ್ಕೆ ಈ ಕುಟುಂಬ ನೀಡಿದ ಕೊಡುಗೆ ಅಷ್ಟಿಷ್ಟಲ್ಲ. ರಾಜ್​ ಕುಟುಂಬದವರು ಸರಳತೆ ವಿಚಾರದಿಂದಲೂ ಎಲ್ಲರಿಗೂ ಮಾದರಿ ಆಗಿದ್ದಾರೆ. ರಾಜ್​ಕುಮಾರ್ ಅವರಿಂದ ಹಿಡಿದು ಪುನೀತ್​ ರಾಜ್​ಕುಮಾರ್​ವರೆಗೆ (Puneeth Rajkumar) ಎಲ್ಲರೂ ಸದಾ​ ಸರಳವಾಗಿ ನಡೆದುಕೊಂಡಿದ್ದಾರೆ. ಇವರು ಯಾರ ಜತೆಗೂ ಸೊಕ್ಕಿನ ಮಾತನಾಡಿದವರಲ್ಲ. ಶಿವರಾಜ್​ಕುಮಾರ್ (Shivarajkumar)​ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಜನ ಸಾಮಾನ್ಯರ ಜತೆ ಸಾಮಾನ್ಯರಂತೆ ಇದ್ದುಬಿಡುತ್ತಾರೆ. ಈ ಮೊದಲು ಕೂಡ ಇದು ಸಾಬೀತಾಗಿದೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಶಿವರಾಜ್​ಕುಮಾರ್​ ಸಿಂಪ್ಲಿಸಿಟಿ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್ ನಿಧನ ವಿಚಾರ ಶಿವರಾಜ್​ಕುಮಾರ್​ ಅವರಿಗೆ ತೀವ್ರ ದುಃಖ ತಂದಿದೆ. ಕೆಲವು ತಿಂಗಳ ಕಾಲ ಶಿವರಾಜ್​ಕುಮಾರ್ ಅವರು ಸಿನಿಮಾ ಕೆಲಸದಿಂದ ದೂರವೇ ಉಳಿದುಕೊಂಡಿದ್ದರು. ಈಗ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಪುನೀತ್​ ಇಲ್ಲ ಎನ್ನುವ ನೋವನ್ನು ಒಪ್ಪಿಕೊಂಡು ಮುಂದೆ ಸಾಗುತ್ತಿದ್ದಾರೆ. ಶಿವಣ್ಣ ನೋವು ತೋಡಿಕೊಂಡ ಅನೇಕ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಈಗ ಶಿವರಾಜ್​ಕುಮಾರ್​​ ಅವರ ಹೊಸ ವಿಡಿಯೋ ಗಮನ ಸೆಳೆಯುತ್ತಿದೆ.

ಶಿವರಾಜ್​ಕುಮಾರ್​ ಅವರು ತಮ್ಮ ಕಾರಿನಲ್ಲಿ ಹೊರಗೆ ತೆರಳಿದ್ದರು. ರಸ್ತೆ ಮಧ್ಯೆ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಕಾರಿನ ಗ್ಲಾಸ್​ ಇಳಿದಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ನಿಂತ ಮಹಿಳೆಯೊಬ್ಬರು ಶಿವರಾಜ್​ಕುಮಾರ್​ ಅವರನ್ನು ಲೈವ್​ ಆಗಿ ನೋಡಿದ್ದಕ್ಕೆ ಖುಷಿಪಟ್ಟಿದ್ದಾರೆ. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ಸಂತೋಷವನ್ನು ಆ ಮಹಿಳೆ ಶಿವಣ್ಣನ ಎದುರು ವ್ಯಕ್ತಪಡಿಸಿದ್ದಾರೆ. ಕುಟುಂಬದ ಸದಸ್ಯರಂತೆ ಅವರ ಉಭಯಕುಶಲೋಪರಿ ವಿಚಾರಿಸಿದ್ದಾರೆ ಶಿವರಾಜ್​ಕುಮಾರ್.

ಮಹಿಳೆ: ಸರ್​ ಹೇಗಿದ್ದೀರಾ?

ಶಿವರಾಜ್​ಕುಮಾರ್: ಚೆನ್ನಾಗಿದ್ದೀನಿ.

ಮಹಿಳೆ: ಮೊದಲ ಬಾರಿಗೆ ನಿಮ್ಮನ್ನು ನೋಡ್ತಿರೋದು. ತುಂಬಾ ಖುಷಿ ಆಯ್ತು.

ಶಿವರಾಜ್​ಕುಮಾರ್: ಥ್ಯಾಂಕ್ಸ್​. ಊಟ ಆಯ್ತಾ? ಬಿರಿಯಾನಿನಾ?

ಮಹಿಳೆ: ಇಲ್ಲ ಸರ್​. ನಿನ್ನೆ ಬಿರಿಯಾನಿ ಆಗಿತ್ತು.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಶಿವರಾಜ್​ಕುಮಾರ್​ ಸರಳತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅವರು ಮಹಿಳೆಯ ಉಭಯಕುಶಲೋಪರಿ ವಿಚಾರಿಸಿಕೊಂಡ ಪರಿಗೆ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಟ್ರೋಲ್​ ಪೇಜ್​ಗಳಲ್ಲಿ, ಶಿವಣ್ಣ ಅಭಿಮಾನಿ ಬಳಗದಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

ಇದನ್ನೂ ಓದಿ: ‘ಒಬ್ಬೊಬ್ಬರೇ ಇಂಡಸ್ಟ್ರಿಯನ್ನು ಬಿಟ್ಟು ಹೋಗುತ್ತಿರುವುದನ್ನು ನೋಡಿದ್ರೆ ಬೇಸರವಾಗುತ್ತದೆ’; ಶಿವರಾಜ್​ಕುಮಾರ್​

ಚೆನ್ನೈನಲ್ಲಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಭೇಟಿ ಮಾಡಿದ ಶಿವರಾಜ್‌ಕುಮಾರ್-ಗೀತಾ ದಂಪತಿ

Published On - 7:53 pm, Fri, 18 February 22

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ