AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ

Nee Sigovaregu: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ
ಶಿವರಾಜ್​ಕುಮಾರ್​ 124ನೇ ಚಿತ್ರಕ್ಕೆ ಅಪ್ಪಟ ಕನ್ನಡ ಶೀರ್ಷಿಕೆ ‘ನೀ ಸಿಗೋವರೆಗೂ’; ಮುಹೂರ್ತಕ್ಕೆ ಕಿಚ್ಚ ಅತಿಥಿ
TV9 Web
| Edited By: |

Updated on: Aug 17, 2021 | 8:52 AM

Share

ಹಲವು ಸಿನಿಮಾಗಳಲ್ಲಿ ಶಿವರಾಜ್​ಕುಮಾರ್​ (Shivarajkumar) ಬ್ಯುಸಿ ಆಗಿದ್ದಾರೆ. ಬೈರಾಗಿ, ವೇದಾ ಮುಂತಾದ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಶಿವಣ್ಣ ಅಭಿನಯಿಸಿರುವ ‘ಭಜರಂಗಿ 2’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈಗ ಅವರ 124ನೇ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಬಹಿರಂಗ ಈಗ ಆಗಿದೆ. ‘ನೀ ಸಿಗೋವರೆಗೂ’ (Nee Sigovaregu) ಎಂದು ಅಪ್ಪಟ ಕನ್ನಡದ ಶೀರ್ಷಿಕೆಯನ್ನು ಇಡಲಾಗಿದೆ. ಇದು ಶಿವರಾಜ್​ಕುಮಾರ್​ ಅಭಿಮಾನಿಗಳಿಗೆ ಖುಷಿ ನೀಡಿದೆ. ಮಂಗಳವಾರ (ಆ.17) ಮುಂಜಾನೆಯೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಶೀರ್ಷಿಕೆ ಫಲಕ, ಕ್ಲ್ಯಾಪ್ ಬೋರ್ಡ್​, ಕ್ಯಾಮೆರಾಗೆ ಪೂಜೆ ಸಲ್ಲಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು.

ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಶಿವಣ್ಣ ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಕಾರಣದಿಂದಲೂ ‘ನೀ ಸಿಗೋವರೆಗೂ’ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ. ನಾಸರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್ದಾರೆ. ಆ.18ರಿಂದಲೇ ಈ ಸಿನಿಮಾ ಚಿತ್ರೀಕರಣ ಆರಂಭ ಆಗಲಿದೆ. ‘ಟಗರು’ ಚಿತ್ರಕ್ಕೆ ಸಂಗೀತ ನೀಡಿದ್ದ ಚರಣ್​ ರಾಜ್​ ಹಾಗೂ ಛಾಯಾಗ್ರಹಣ ಮಾಡಿದ್ದ ಮಹೇಂದ್ರ ಸಿಂಹ ಅವರು ‘ನೀ ಸಿಗುವವರೆಗೂ’ ಚಿತ್ರದಲ್ಲೂ ಮುಂದುವರಿಯುತ್ತಿದ್ದಾರೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​ ಮನೆ ಮುಂದೆ ನಿಂತು ಮನದ ಮಾತು ಹಂಚಿಕೊಂಡ ಬಿಗ್​ ಬಾಸ್​ ವಿನ್ನರ್​ ಮಂಜು

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ