AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

125ನೇ ಚಿತ್ರದಲ್ಲಿ ಶಿವರಾಜ್​ಕುಮಾರ್​ ಡಿಫರೆಂಟ್​ ಲುಕ್​! ಶಿವರಾತ್ರಿ ದಿನವೇ ಸ್ಪೆಷಲ್​ ನ್ಯೂಸ್​

ಶಿವರಾತ್ರಿ ಹಬ್ಬದ ಪ್ರಯುಕ್ತ ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್​ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಅದರ ಫಸ್ಟ್​ ಲುಕ್​ ಕೂಡ ಬಹಿರಂಗ ಆಗಿದೆ.

125ನೇ ಚಿತ್ರದಲ್ಲಿ ಶಿವರಾಜ್​ಕುಮಾರ್​ ಡಿಫರೆಂಟ್​ ಲುಕ್​! ಶಿವರಾತ್ರಿ ದಿನವೇ ಸ್ಪೆಷಲ್​ ನ್ಯೂಸ್​
ಶಿವರಾಜ್​ಕುಮಾರ್​ ಹೊಸ ಸಿನಿಮಾ ವೇದ
ಮದನ್​ ಕುಮಾರ್​
| Edited By: |

Updated on: Mar 11, 2021 | 3:52 PM

Share

ಕನ್ನಡದಲ್ಲಿ ನಟ ಶಿವರಾಜ್​ಕುಮಾರ್​ ಅವರು ಅತಿ ವೇಗದಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುತ್ತಾರೆ. ಒಂದರ ಹಿಂದೊಂದು ಸಿನಿಮಾಗಳನ್ನು ಪೂರೈಸುತ್ತ ಮುನ್ನುಗ್ಗುತ್ತಿರುವ ಅವರು ಈಗ 125ನೇ ಚಿತ್ರದ ಮೈಲಿಗಲ್ಲು ತಲುಪಿದ್ದಾರೆ. ಶಿವರಾತ್ರಿ ಹಬ್ಬದ ವಿಶೇಷ ದಿನದಂದು ಅವರು ತಮ್ಮ 125ನೇ ಸಿನಿಮಾ ಬಗ್ಗೆ ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ.

125ನೇ ಚಿತ್ರಕ್ಕೆ ‘ವೇದ’ ಶೀರ್ಷಿಕೆ ಶಿವಣ್ಣನ 125ನೇ ಸಿನಿಮಾಗೆ ‘ವೇದ’ ಎಂದು ಟೈಟಲ್​ ಇಡಲಾಗಿದೆ. ಮಾ.11ರಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಈ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ ಅನ್ನು ಶಿವಣ್ಣ ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳಿಗೆ ಈ ಪೋಸ್ಟರ್​ ಮೆಚ್ಚುಗೆ ಆಗಿದೆ. ವಿಶೇಷ ಏನೆಂದರೆ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವುದು ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಎ. ಹರ್ಷ.

ಹರ್ಷ-ಶಿವಣ್ಣ ನಾಲ್ಕನೇ ಸಿನಿಮಾ ಈ ಹಿಂದೆ ‘ಭಜರಂಗಿ’ ಸಿನಿಮಾ ಮೂಲಕ ಶಿವರಾಜ್​ಕುಮಾರ್​ ಮತ್ತು ಎ. ಹರ್ಷ ಮೊದಲ ಬಾರಿಗೆ ಜೊತೆಯಾಗಿ ಕೆಲಸ ಮಾಡಿದ್ದರು. ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ನಂತರ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ವಜ್ರಕಾಯ’ ಸಿನಿಮಾ ಮೂಡಿಬಂತು. ಈಗ ಬಿಡುಗಡೆಗೆ ಸಜ್ಜಾಗಿರುವ ‘ಭಜರಂಗಿ 2’ ಚಿತ್ರಕ್ಕೂ ಎ. ಹರ್ಷ ನಿರ್ದೇಶನ ಮಾಡಿದ್ದಾರೆ. ಈ ಮೂರು ಸಿನಿಮಾಗಳ ಬಳಿಕ ‘ವೇದ’ ಚಿತ್ರದಲ್ಲೂ ಹರ್ಷ ಮತ್ತು ಶಿವಣ್ಣ ಒಂದಾಗುತ್ತಿದ್ದಾರೆ.

ಕೌತುಕ ಮೂಡಿಸಿದ ಫಸ್ಟ್​ಲುಕ್​ ಪೋಸ್ಟರ್​ ಸಿನಿಮಾ ಹೆಸರಿನ ಜೊತೆಗೆ ಫಸ್ಟ್​ಲುಕ್​ ಪೋಸ್ಟರ್​ ಅನ್ನು ಕೂಡ ಶಿವಣ್ಣ ಅನಾವರಣಗೊಳಿಸಿದ್ದಾರೆ. ಬಿಳಿ ಕೂದಲು ಮತ್ತು ಬಿಳಿ ಗಡ್ಡದಲ್ಲಿ ಕಾಣಿಸಿಕೊಂಡಿರುವ ‘ಸೆಂಚುರಿ ಸ್ಟಾರ್​’ ಹೊಸ ಗೆಟಪ್​ ಗಮನ ಸೆಳೆಯುತ್ತಿದೆ. ಪೋಸ್ಟರ್​ ಮೇಲೆ The Brutal 1960’s ಎಂದು ಬರೆದಿರುವುದರಿಂದ ಈ ಸಿನಿಮಾದ ಕಥೆ 1960ರ ದಶಕದಲ್ಲಿ ಸಾಗಲಿದೆ ಎಂಬ ಸುಳಿವು ಸಿಕ್ಕಿದೆ. ಚಿತ್ರಕ್ಕೆ ‘ವೇದ’ ಎಂದು ಶೀರ್ಷಿಕೆ ಇಡಲು ಕಾರಣ ಏನು? ಯಾವ ಥೀಮ್ ಮೇಲೆ ಸಿನಿಮಾ ತಯಾರಾಗುತ್ತಿದೆ? ಶಿವಣ್ಣನ ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ? ಈ ಎಲ್ಲ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಹರ್ಷ ನಿರ್ದೇಶನದ ‘ಭಜರಂಗಿ 2’ ಸಿನಿಮಾದ ಕೆಲಸಗಳು ಈಗಾಗಲೇ ಮುಗಿದಿವೆ. ಮೇ 14ರಂದು ತೆರೆಕಾಣಲಿದ್ದು ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಆ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಈ ನಟ-ನಿರ್ದೇಶಕನ ಕಾಂಬಿನೇಷನ್​ನಲ್ಲಿ ‘ವೇದ’ ಅನೌನ್ಸ್​ ಆಗಿದೆ.

ಇದನ್ನೂ ಓದಿ: Shiva Rajkumar: ಚಿತ್ರರಂಗದಲ್ಲಿ 35ವರ್ಷ ಪೂರೈಸಿದ ಶಿವರಾಜ್​ಕುಮಾರ್​ಗೆ ಪ್ರೀತಿಯಿಂದ ಶುಭ ಹಾರೈಸಿದ ಕಿಚ್ಚ ಸುದೀಪ್​

ಶಿವರಾಜ್​ಕುಮಾರ್​ ಚಿತ್ರರಂಗಕ್ಕೆ ಪ್ರವೇಶಿಸಿ 35 ವರ್ಷ; 35 ಕೆಜಿ ತೂಕದ ಕೇಕ್​ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’