AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

125ನೇ ಚಿತ್ರದಲ್ಲಿ ಶಿವರಾಜ್​ಕುಮಾರ್​ ಡಿಫರೆಂಟ್​ ಲುಕ್​! ಶಿವರಾತ್ರಿ ದಿನವೇ ಸ್ಪೆಷಲ್​ ನ್ಯೂಸ್​

ಶಿವರಾತ್ರಿ ಹಬ್ಬದ ಪ್ರಯುಕ್ತ ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್​ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಅದರ ಫಸ್ಟ್​ ಲುಕ್​ ಕೂಡ ಬಹಿರಂಗ ಆಗಿದೆ.

125ನೇ ಚಿತ್ರದಲ್ಲಿ ಶಿವರಾಜ್​ಕುಮಾರ್​ ಡಿಫರೆಂಟ್​ ಲುಕ್​! ಶಿವರಾತ್ರಿ ದಿನವೇ ಸ್ಪೆಷಲ್​ ನ್ಯೂಸ್​
ಶಿವರಾಜ್​ಕುಮಾರ್​ ಹೊಸ ಸಿನಿಮಾ ವೇದ
ಮದನ್​ ಕುಮಾರ್​
| Edited By: |

Updated on: Mar 11, 2021 | 3:52 PM

Share

ಕನ್ನಡದಲ್ಲಿ ನಟ ಶಿವರಾಜ್​ಕುಮಾರ್​ ಅವರು ಅತಿ ವೇಗದಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುತ್ತಾರೆ. ಒಂದರ ಹಿಂದೊಂದು ಸಿನಿಮಾಗಳನ್ನು ಪೂರೈಸುತ್ತ ಮುನ್ನುಗ್ಗುತ್ತಿರುವ ಅವರು ಈಗ 125ನೇ ಚಿತ್ರದ ಮೈಲಿಗಲ್ಲು ತಲುಪಿದ್ದಾರೆ. ಶಿವರಾತ್ರಿ ಹಬ್ಬದ ವಿಶೇಷ ದಿನದಂದು ಅವರು ತಮ್ಮ 125ನೇ ಸಿನಿಮಾ ಬಗ್ಗೆ ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ.

125ನೇ ಚಿತ್ರಕ್ಕೆ ‘ವೇದ’ ಶೀರ್ಷಿಕೆ ಶಿವಣ್ಣನ 125ನೇ ಸಿನಿಮಾಗೆ ‘ವೇದ’ ಎಂದು ಟೈಟಲ್​ ಇಡಲಾಗಿದೆ. ಮಾ.11ರಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಈ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ ಅನ್ನು ಶಿವಣ್ಣ ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳಿಗೆ ಈ ಪೋಸ್ಟರ್​ ಮೆಚ್ಚುಗೆ ಆಗಿದೆ. ವಿಶೇಷ ಏನೆಂದರೆ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವುದು ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಎ. ಹರ್ಷ.

ಹರ್ಷ-ಶಿವಣ್ಣ ನಾಲ್ಕನೇ ಸಿನಿಮಾ ಈ ಹಿಂದೆ ‘ಭಜರಂಗಿ’ ಸಿನಿಮಾ ಮೂಲಕ ಶಿವರಾಜ್​ಕುಮಾರ್​ ಮತ್ತು ಎ. ಹರ್ಷ ಮೊದಲ ಬಾರಿಗೆ ಜೊತೆಯಾಗಿ ಕೆಲಸ ಮಾಡಿದ್ದರು. ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ನಂತರ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ವಜ್ರಕಾಯ’ ಸಿನಿಮಾ ಮೂಡಿಬಂತು. ಈಗ ಬಿಡುಗಡೆಗೆ ಸಜ್ಜಾಗಿರುವ ‘ಭಜರಂಗಿ 2’ ಚಿತ್ರಕ್ಕೂ ಎ. ಹರ್ಷ ನಿರ್ದೇಶನ ಮಾಡಿದ್ದಾರೆ. ಈ ಮೂರು ಸಿನಿಮಾಗಳ ಬಳಿಕ ‘ವೇದ’ ಚಿತ್ರದಲ್ಲೂ ಹರ್ಷ ಮತ್ತು ಶಿವಣ್ಣ ಒಂದಾಗುತ್ತಿದ್ದಾರೆ.

ಕೌತುಕ ಮೂಡಿಸಿದ ಫಸ್ಟ್​ಲುಕ್​ ಪೋಸ್ಟರ್​ ಸಿನಿಮಾ ಹೆಸರಿನ ಜೊತೆಗೆ ಫಸ್ಟ್​ಲುಕ್​ ಪೋಸ್ಟರ್​ ಅನ್ನು ಕೂಡ ಶಿವಣ್ಣ ಅನಾವರಣಗೊಳಿಸಿದ್ದಾರೆ. ಬಿಳಿ ಕೂದಲು ಮತ್ತು ಬಿಳಿ ಗಡ್ಡದಲ್ಲಿ ಕಾಣಿಸಿಕೊಂಡಿರುವ ‘ಸೆಂಚುರಿ ಸ್ಟಾರ್​’ ಹೊಸ ಗೆಟಪ್​ ಗಮನ ಸೆಳೆಯುತ್ತಿದೆ. ಪೋಸ್ಟರ್​ ಮೇಲೆ The Brutal 1960’s ಎಂದು ಬರೆದಿರುವುದರಿಂದ ಈ ಸಿನಿಮಾದ ಕಥೆ 1960ರ ದಶಕದಲ್ಲಿ ಸಾಗಲಿದೆ ಎಂಬ ಸುಳಿವು ಸಿಕ್ಕಿದೆ. ಚಿತ್ರಕ್ಕೆ ‘ವೇದ’ ಎಂದು ಶೀರ್ಷಿಕೆ ಇಡಲು ಕಾರಣ ಏನು? ಯಾವ ಥೀಮ್ ಮೇಲೆ ಸಿನಿಮಾ ತಯಾರಾಗುತ್ತಿದೆ? ಶಿವಣ್ಣನ ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ? ಈ ಎಲ್ಲ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಹರ್ಷ ನಿರ್ದೇಶನದ ‘ಭಜರಂಗಿ 2’ ಸಿನಿಮಾದ ಕೆಲಸಗಳು ಈಗಾಗಲೇ ಮುಗಿದಿವೆ. ಮೇ 14ರಂದು ತೆರೆಕಾಣಲಿದ್ದು ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಆ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಈ ನಟ-ನಿರ್ದೇಶಕನ ಕಾಂಬಿನೇಷನ್​ನಲ್ಲಿ ‘ವೇದ’ ಅನೌನ್ಸ್​ ಆಗಿದೆ.

ಇದನ್ನೂ ಓದಿ: Shiva Rajkumar: ಚಿತ್ರರಂಗದಲ್ಲಿ 35ವರ್ಷ ಪೂರೈಸಿದ ಶಿವರಾಜ್​ಕುಮಾರ್​ಗೆ ಪ್ರೀತಿಯಿಂದ ಶುಭ ಹಾರೈಸಿದ ಕಿಚ್ಚ ಸುದೀಪ್​

ಶಿವರಾಜ್​ಕುಮಾರ್​ ಚಿತ್ರರಂಗಕ್ಕೆ ಪ್ರವೇಶಿಸಿ 35 ವರ್ಷ; 35 ಕೆಜಿ ತೂಕದ ಕೇಕ್​ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ