AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಟೌಟ್​, ಹಾಲಿನ ಅಭಿಷೇಕ, ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್​​ಗೆ ಕೌಂಟ್​ಡೌನ್​

ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರ ತರೆಗೆ ಬರುತ್ತಿರುವ ಕನ್ನಡ ಮೂರನೇ ಬಿಗ್​ ಬಜೆಟ್​ ಸಿನಿಮಾ ಇದಾಗಿದೆ. ಫ್ಯಾಂಟಸಿ ಕಥೆ ಹೊಂದಿರುವ ಚಿತ್ರ ಇದಾಗಿದ್ದು, ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

ಶಿವರಾಜ್​ಕುಮಾರ್​ ಕಟೌಟ್​, ಹಾಲಿನ ಅಭಿಷೇಕ, ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್​​ಗೆ ಕೌಂಟ್​ಡೌನ್​
ಶಿವರಾಜ್​ಕುಮಾರ್
TV9 Web
| Edited By: |

Updated on:Oct 28, 2021 | 3:50 PM

Share

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಈ ಸಿನಿಮಾ ರಾಜ್ಯಾದ್ಯಂತ ಶುಕ್ರವಾರ (ಅಕ್ಟೋಬರ್​ 29) ಭರ್ಜರಿಯಾಗಿ ರಿಲೀಸ್​ ಆಗುತ್ತಿದೆ. ನಟ ಶಿವರಾಜ್​​​ಕುಮಾರ್​ ಹಾಗೂ ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಸದ್ಯದ್ದು. ಹಾಗಾದರೆ, ಈ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ರಿಲೀಸ್​ ಆಗುತ್ತಿದೆ? ಅದಕ್ಕೆ ಏನೆಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

300 ಚಿತ್ರಮಂದಿರಗಳಲ್ಲಿ ‘ಭಜರಂಗಿ 2’

ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರ ತೆರೆಗೆ ಬರುತ್ತಿರುವ ಕನ್ನಡದ ಮೂರನೇ ಬಿಗ್​ ಬಜೆಟ್​ ಸಿನಿಮಾ ಇದಾಗಿದೆ. ಫ್ಯಾಂಟಸಿ ಕಥೆ ಹೊಂದಿರುವ ಚಿತ್ರ ಇದಾಗಿದ್ದು, ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ, ಮೊದಲ ದಿನವೇ ಚಿತ್ರ ಒಳ್ಳೆಯ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ.

ಮುಂಜಾನೆ ಐದು ಗಂಟೆಗೇ ಶೋ

ಸಾಮಾನ್ಯವಾಗಿ 10 ಗಂಟೆಯಿಂದ ಸಿನಿಮಾ ಪ್ರದರ್ಶನ ಕಾಣುತ್ತದೆ. ಆದರೆ, ‘ಭಜರಂಗಿ 2’ಗಾಗಿ ವಿಶೇಷ ಫ್ಯಾನ್ಸ್​ ಶೋ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಜೆ.ಪಿ. ನಗರದ ಸಿದ್ದೇಶ್ವರ ಚಿತ್ರಮಂದಿರ ಹಾಗು ಗೌಡನ ಪಾಳ್ಯದ ಶ್ರೀನಿವಾಸ ಥಿಯೇಟರ್​​ನಲ್ಲಿ ಮುಂಜಾನೆ 5 ಘಂಟೆಗೆ ಸಿನಿಮಾ ಪ್ರದರ್ಶನ ಕಾಣಲಿದೆ. ಫ್ಯಾನ್ಸ್ ಶೋಗಾಗಿ ಭರ್ಜರಿ ಪ್ಲ್ಯಾನ್​ ನಡೆದಿದೆ. ಈ ಶೋಗೆ ಶಿವರಾಜ್​ಕುಮಾರ್ ಹಾಗೂ ವಸಿಷ್ಠ ಸಿಂಹ ಆಗಮಿಸೋ ಸಾಧ್ಯತೆ ಇದೆ. ಗಾಂಧಿನಗರದ ಅನುಪಮ ಚಿತ್ರಂಮದಿರದಲ್ಲಿ 10 ಘಂಟೆಗೆ ಶೋ ಆರಂಭ ಆಗಲಿದೆ.

ತಲೆ ಎತ್ತಿದ ಕಟೌಟ್​

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ಗೆ ಅದ್ದೂರಿಯಾಗಿ ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಿನಿಮಾದ ಕಟೌಟ್​ಗಳನ್ನು ಚಿತ್ರಮಂದಿರಗಳ ಎದುರು ನಿಲ್ಲಿಸಲಾಗಿದೆ. ಇದಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಲಿದ್ದಾರೆ.

ಹರ್ಷ-ಶಿವಣ್ಣ ಕಾಂಬಿನೇಷನ್​ನಲ್ಲಿ ಮೂರನೇ ಸಿನಿಮಾ

ಹಲವು ಕಾರಣಗಳಿಗಾಗಿ ‘ಭಜರಂಗಿ 2’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.

ಪಾತ್ರವರ್ಗ

ಶಿವರಾಜ್​ಕುಮಾರ್ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು

‘ಓವರ್​ ಆ್ಯಕ್ಟಿಂಗ್​ ಬೇಡ’; ವೇದಿಕೆ ಮೇಲೆಯೇ ಶಿವರಾಜ್​ಕುಮಾರ್​ ವಾರ್ನಿಂಗ್

Published On - 3:49 pm, Thu, 28 October 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ