AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಕಟೌಟ್​, ಹಾಲಿನ ಅಭಿಷೇಕ, ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್​​ಗೆ ಕೌಂಟ್​ಡೌನ್​

ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರ ತರೆಗೆ ಬರುತ್ತಿರುವ ಕನ್ನಡ ಮೂರನೇ ಬಿಗ್​ ಬಜೆಟ್​ ಸಿನಿಮಾ ಇದಾಗಿದೆ. ಫ್ಯಾಂಟಸಿ ಕಥೆ ಹೊಂದಿರುವ ಚಿತ್ರ ಇದಾಗಿದ್ದು, ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

ಶಿವರಾಜ್​ಕುಮಾರ್​ ಕಟೌಟ್​, ಹಾಲಿನ ಅಭಿಷೇಕ, ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್​​ಗೆ ಕೌಂಟ್​ಡೌನ್​
ಶಿವರಾಜ್​ಕುಮಾರ್
TV9 Web
| Edited By: |

Updated on:Oct 28, 2021 | 3:50 PM

Share

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಈ ಸಿನಿಮಾ ರಾಜ್ಯಾದ್ಯಂತ ಶುಕ್ರವಾರ (ಅಕ್ಟೋಬರ್​ 29) ಭರ್ಜರಿಯಾಗಿ ರಿಲೀಸ್​ ಆಗುತ್ತಿದೆ. ನಟ ಶಿವರಾಜ್​​​ಕುಮಾರ್​ ಹಾಗೂ ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ಇದಾಗಿದ್ದು, ಪ್ರೇಕ್ಷಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಸದ್ಯದ್ದು. ಹಾಗಾದರೆ, ಈ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ರಿಲೀಸ್​ ಆಗುತ್ತಿದೆ? ಅದಕ್ಕೆ ಏನೆಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

300 ಚಿತ್ರಮಂದಿರಗಳಲ್ಲಿ ‘ಭಜರಂಗಿ 2’

ಕೊವಿಡ್​ ಎರಡನೇ ಅಲೆ ಕಡಿಮೆ ಆದ ನಂತರ ತೆರೆಗೆ ಬರುತ್ತಿರುವ ಕನ್ನಡದ ಮೂರನೇ ಬಿಗ್​ ಬಜೆಟ್​ ಸಿನಿಮಾ ಇದಾಗಿದೆ. ಫ್ಯಾಂಟಸಿ ಕಥೆ ಹೊಂದಿರುವ ಚಿತ್ರ ಇದಾಗಿದ್ದು, ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ, ಮೊದಲ ದಿನವೇ ಚಿತ್ರ ಒಳ್ಳೆಯ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ.

ಮುಂಜಾನೆ ಐದು ಗಂಟೆಗೇ ಶೋ

ಸಾಮಾನ್ಯವಾಗಿ 10 ಗಂಟೆಯಿಂದ ಸಿನಿಮಾ ಪ್ರದರ್ಶನ ಕಾಣುತ್ತದೆ. ಆದರೆ, ‘ಭಜರಂಗಿ 2’ಗಾಗಿ ವಿಶೇಷ ಫ್ಯಾನ್ಸ್​ ಶೋ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಜೆ.ಪಿ. ನಗರದ ಸಿದ್ದೇಶ್ವರ ಚಿತ್ರಮಂದಿರ ಹಾಗು ಗೌಡನ ಪಾಳ್ಯದ ಶ್ರೀನಿವಾಸ ಥಿಯೇಟರ್​​ನಲ್ಲಿ ಮುಂಜಾನೆ 5 ಘಂಟೆಗೆ ಸಿನಿಮಾ ಪ್ರದರ್ಶನ ಕಾಣಲಿದೆ. ಫ್ಯಾನ್ಸ್ ಶೋಗಾಗಿ ಭರ್ಜರಿ ಪ್ಲ್ಯಾನ್​ ನಡೆದಿದೆ. ಈ ಶೋಗೆ ಶಿವರಾಜ್​ಕುಮಾರ್ ಹಾಗೂ ವಸಿಷ್ಠ ಸಿಂಹ ಆಗಮಿಸೋ ಸಾಧ್ಯತೆ ಇದೆ. ಗಾಂಧಿನಗರದ ಅನುಪಮ ಚಿತ್ರಂಮದಿರದಲ್ಲಿ 10 ಘಂಟೆಗೆ ಶೋ ಆರಂಭ ಆಗಲಿದೆ.

ತಲೆ ಎತ್ತಿದ ಕಟೌಟ್​

ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ಗೆ ಅದ್ದೂರಿಯಾಗಿ ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಿನಿಮಾದ ಕಟೌಟ್​ಗಳನ್ನು ಚಿತ್ರಮಂದಿರಗಳ ಎದುರು ನಿಲ್ಲಿಸಲಾಗಿದೆ. ಇದಕ್ಕೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಲಿದ್ದಾರೆ.

ಹರ್ಷ-ಶಿವಣ್ಣ ಕಾಂಬಿನೇಷನ್​ನಲ್ಲಿ ಮೂರನೇ ಸಿನಿಮಾ

ಹಲವು ಕಾರಣಗಳಿಗಾಗಿ ‘ಭಜರಂಗಿ 2’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿರುವ ಟ್ರೇಲರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಸೂಪರ್​ ನ್ಯಾಚುರಲ್​ ಕಥೆ, ಬೃಹತ್​ ಸೆಟ್​ಗಳು, ಕಲಾವಿದರ ಭಿನ್ನ ವಿಭಿನ್ನ ಗೆಟಪ್​ಗಳು ಗಮನ ಸೆಳೆಯುತ್ತಿವೆ. ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಮೂರನೇ ಸಿನಿಮಾ ಇದಾಗಿದ್ದು, ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ.

ಪಾತ್ರವರ್ಗ

ಶಿವರಾಜ್​ಕುಮಾರ್ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ನಟಿ ಶ್ರುತಿ, ಭಜರಂಗಿ ಲೋಕಿ, ಭಾವನಾ ಮೆನನ್​, ಶಿವರಾಜ್​ ಕೆ.ಆರ್​. ಪೇಟೆ, ಚೆಲುವ ರಾಜು ಮುಂತಾದವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಸ್ವಾಮಿ ಜೆ. ಗೌಡ ಛಾಯಾಗ್ರಹಣ, ದೀಪು ಎಸ್​. ಕುಮಾರ್​ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ ‘ಭಜರಂಗಿ 2’ಗೆ ಸಾತ್​ ನೀಡಿದ ಯಶ್​-ಪುನೀತ್​ ​; ಒಂದೇ ವೇದಿಕೆ ಮೇಲೆ ಮೂರು ಸ್ಟಾರ್​ಗಳು

‘ಓವರ್​ ಆ್ಯಕ್ಟಿಂಗ್​ ಬೇಡ’; ವೇದಿಕೆ ಮೇಲೆಯೇ ಶಿವರಾಜ್​ಕುಮಾರ್​ ವಾರ್ನಿಂಗ್

Published On - 3:49 pm, Thu, 28 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ