AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಸಿನಿಜರ್ನಿಗೆ 38 ವರ್ಷ: 135 ಸಿನಿಮಾಗಳ ಬಳಿಕವೂ ಕಮ್ಮಿಯಾಗದ ಎನರ್ಜಿ

ಶಿವರಾಜ್​ಕುಮಾರ್​ ಅವರ ಮೊದಲ ಸಿನಿಮಾ ‘ಆನಂದ್​’ ಸೆಟ್ಟೇರಿದ್ದು 1986ರ ಫೆ.19ರಂದು. ಅಂದಿನಿಂದ ಇಂದಿನ ತನಕ ಚಿತ್ರರಂಗದಲ್ಲಿ ಶಿವಣ್ಣ ಅವರು ಯಶಸ್ವಿಯಾಗಿ 38 ವರ್ಷಗಳನ್ನು ಪೂರೈಸಿದ್ದಾರೆ. ಅನೇಕರಿಗೆ ಅವರು ಸ್ಫೂರ್ತಿ ಆಗಿದ್ದಾರೆ. ಅವರು 38 ವರ್ಷ ಪೂರೈಸಿದ್ದಕ್ಕೆ ಫ್ಯಾನ್ಸ್​ ಸಂಭ್ರಮಿಸುತ್ತಿದ್ದಾರೆ. ಕಾಮನ್​ ಡಿಪಿ ಹಂಚಿಕೊಳ್ಳುವ ಮೂಲಕ ಅಭಿನಂದನೆ ತಿಳಿಸಲಾಗುತ್ತಿದೆ.

ಶಿವಣ್ಣನ ಸಿನಿಜರ್ನಿಗೆ 38 ವರ್ಷ: 135 ಸಿನಿಮಾಗಳ ಬಳಿಕವೂ ಕಮ್ಮಿಯಾಗದ ಎನರ್ಜಿ
ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Feb 19, 2024 | 1:07 PM

Share

ಅಭಿಮಾನಿಗಳು ಪ್ರೀತಿಯಿಂದ ‘ಕರುನಾಡ ಚಕ್ರವರ್ತಿ’ ಎಂದು ಕರೆಯುವ ಶಿವರಾಜ್​ಕುಮಾರ್ (Shivarajkumar)​ ಅವರಿಗೆ ಫೆಬ್ರವರಿ 19 ಎಂದರೆ ತುಂಬ ವಿಶೇಷ ದಿನ. ಯಾಕೆಂದರೆ, ಮೊದಲ ಬಾರಿ ಹೀರೋ ಆಗಿ ಶಿವರಾಜ್​ಕುಮಾರ್​ ಅವರು ಕ್ಯಾಮೆರಾ ಎದುರು ನಿಂತ ದಿನಾಂಕ ಅದು. ಹೌದು, 1986ರ ಫೆಬ್ರವರಿ 19ರಂದು ಶಿವಣ್ಣನ ಮೊದಲ ಸಿನಿಮಾ ‘ಆನಂದ್​’ (Anand Kannada Movie) ಮುಹೂರ್ತ ನೆರವೇರಿತ್ತು. ಅಂದಿನಿಂದ ಇಂದಿಗೆ ಬಣ್ಣದ ಲೋಕದ ಜರ್ನಿಯಲ್ಲಿ ಅವರು 38 ವರ್ಷಗಳನ್ನು ಪೂರೈಸಿದ್ದಾರೆ. ಇದು ಸಣ್ಣ ಪಯಣವಲ್ಲ. ಇಂದಿಗೂ ಶಿವಣ್ಣ (Shivanna) ಅದೇ ಚಾರ್ಮ್​ ಉಳಿಸಿಕೊಂಡಿದ್ದಾರೆ. ಈ ಸಾಧನೆಗಾಗಿ ಅವರಿಗೆ ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಕಾಮನ್​ ಡಿಪಿ ವೈರಲ್​ ಆಗಿದೆ.

ಮೇರುನಟ ಡಾ. ರಾಜ್​ಕುಮಾರ್​ ಅವರ ಪುತ್ರನಾಗಿದ್ದರೂ ಕೂಡ ತಮ್ಮದೇ ರೀತಿಯಲ್ಲಿ ಶಿವಣ್ಣ ಗುರುತಿಸಿಕೊಂಡರು. ಮೊದಲ ಮೂರು ಸಿನಿಮಾಗಳ ಮೂಲಕ ಗೆಲುವು ಪಡೆದು ‘ಹ್ಯಾಟ್ರಿಕ್​ ಹೀರೋ’ ಎನಿಸಿಕೊಂಡರು. ಅಂದಿನಿಂದ ಇಂದಿನತನಕ ಶಿವರಾಜ್​ಕುಮಾರ್​ ಅವರು ಹಿಂದಿರುಗಿ ನೋಡಿಲ್ಲ. ನೂರಾರು ಬಗೆಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ತಮ್ಮ ಪ್ರತಿಭೆ ಏನು ಎಂಬುದನ್ನು ಶಿವಣ್ಣ ಸಾಬೀತುಪಡಿಸಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಅವರೇ ಸಾಟಿ ಎನ್ನಬಹುದು.

ಶಿವರಾಜ್​ಕುಮಾರ್​ ಅವರು 38 ವರ್ಷಗಳ ಈ ಸಿನಿಮಾ ಜರ್ನಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ‘ಓಂ’, ‘ಜೋಗಿ’, ‘ಜನುಮದ ಜೋಡಿ’, ‘ತವರಿಗೆ ಬಾ ತಂಗಿ’, ‘ಟಗರು’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ‘ನಿಂಗೆ ನಂಬರ್​ಗಳೇ ಲೆಕ್ಕ ಇಲ್ಲಣ್ಣ..’ ಎಂದು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ಶಿವಣ್ಣನ ದಿ ಬೆಸ್ಟ್​ ಸಿನಿಮಾಗಳನ್ನು ನೆನಪಿಸಿಕೊಳ್ಳಲಾಗುತ್ತಿದೆ. ತಮ್ಮ ಇಷ್ಟದ ದೃಶ್ಯ, ಹಾಡು, ಡೈಲಾಗ್​ಗಳನ್ನು ಫ್ಯಾನ್ಸ್​ ಮೆಲುಕು ಹಾಕುತ್ತಿದ್ದಾರೆ.

ಈಗ ಶಿವರಾಜ್​ಕುಮಾರ್​ ಅವರಿಗೆ 61 ವರ್ಷ ವಯಸ್ಸು. ಈಗಲೂ ಕೂಡ ಅವರು ಹದಿಹರೆಯದ ಯುವಕನಂತೆ ಎನರ್ಜಿ ಉಳಿಸಿಕೊಂಡಿದ್ದಾರೆ. ಯಾವ ಹೊಸ ಹೀರೋಗೂ ಕಮ್ಮಿ ಇಲ್ಲದಂತೆ ಆ್ಯಕ್ಷನ್​ ದೃಶ್ಯಗಳಲ್ಲಿ ಅವರು ನಟಿಸುತ್ತಾರೆ. ಶಿವಣ್ಣನ ಎನರ್ಜಿ ಬಗ್ಗೆ ಮಾತನಾಡದವರೇ ಇಲ್ಲ. ಎಷ್ಟೋ ಹೀರೋಗಳಿಗೆ ಅವರೇ ಸ್ಫೂರ್ತಿ. ಸಿನಿಮಾ ಕೆಲಸಗಳನ್ನು ಪಟಪಟನೆ ಮುಗಿಸುವ ಮೂಲಕ ಅವರು ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಸಮಾಜಮುಖಿ ಕೆಲಸಗಳ ಮೂಲಕವೂ ಜನರ ಹೃದಯ ಗೆದ್ದಿದ್ದಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶಿವರಾಜ್​ಕುಮಾರ್​ ಬ್ಯುಸಿ ಆಗಿದ್ದಾರೆ. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ನಿರ್ಮಾಪಕರು, ನಿರ್ದೇಶಕರು ಸಾಲುಗಟ್ಟಿ ನಿಂತಿದ್ದಾರೆ. 135ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅವರು ಮುನ್ನುಗ್ಗುತ್ತಿದ್ದಾರೆ. ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಇದನ್ನೂ ಓದಿ: ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

ಕನ್ನಡ ಮಾತ್ರವಲ್ಲದೇ, ಪರಭಾಷೆಯಲ್ಲೂ ಶಿವರಾಜ್​ಕುಮಾರ್​ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. 2023ರಲ್ಲಿ ತೆರೆಕಂಡ ರಜನಿಕಾಂತ್​ ನಟನೆಯ ತಮಿಳಿನ ‘ಜೈಲರ್​’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಮಾಡಿದ ನರಸಿಂಹ ಎಂಬ ಪಾತ್ರ ಸಖತ್​ ಕ್ರೇಜ್​ ಸೃಷ್ಟಿಸಿತು. 2024ರ ಜನವರಿ 12ರಂದು ಬಿಡುಗಡೆಯಾದ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲಿ ಧನುಷ್​ ಜೊತೆ ಶಿವರಾಜ್​ಕುಮಾರ್​ ಅವರು ತೆರೆ ಹಂಚಿಕೊಂಡರು. ಪರಭಾಷೆಯಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?