AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂದಿನಿ’ ಜೊತೆ ರೀಲ್ಸ್ ಮಾಡಿದ ಶಿವಣ್ಣ; ಖಡಕ್ ಆಗಿದೆ ಗ್ಯಾಂಗ್​ಸ್ಟರ್ ಖದರ್

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದಾರೆ.

‘ನಂದಿನಿ’ ಜೊತೆ ರೀಲ್ಸ್ ಮಾಡಿದ ಶಿವಣ್ಣ; ಖಡಕ್ ಆಗಿದೆ ಗ್ಯಾಂಗ್​ಸ್ಟರ್ ಖದರ್
ಅಮಿತ್-ಶಿವಣ್ಣ-ವಿಕ್ಕಿ
ರಾಜೇಶ್ ದುಗ್ಗುಮನೆ
|

Updated on:Oct 12, 2023 | 7:04 AM

Share

‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ..’ ಮೂಲಕ ವಿಕ್ಕಿ ಸಾಕಷ್ಟು ಜನಪ್ರಿಯತೆ ಪಡೆದರು. ಎಲ್ಲಾ ಕಡೆಗಳಲ್ಲಿ ಈ ಹಾಡೇ ಕೇಳಿತು. ಸೋಶಿಯಲ್ ಮೀಡಿಯಾದಲ್ಲಿ ಈ ಹಾಡನ್ನು ಬೇರೆ ಬೇರೆ ಸಾಹಿತ್ಯದೊಂದಿಗೆ ವೈರಲ್ ಮಾಡಲಾಯಿತು. ಈಗ ವಿಕ್ಕಿ ಅವರು ಶಿವರಾಜ್​ಕುಮಾರ್ (Shivarajkumar) ಜೊತೆ ಹೊಸ ವಿಡಿಯೋ ಮಾಡಿದ್ದಾರೆ. ಹಾಗಂತ ಇದು ‘ನಾನು ನಂದಿನಿ..’ ಹಾಡಲ್ಲ. ‘ಘೋಸ್ಟ್’ ಚಿತ್ರದ ಥೀಮ್​ನಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಫ್ಯಾನ್ಸ್ ಇದನ್ನು ಸಖತ್ ಇಷ್ಟಪಡುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಶ್ರೀನಿ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದಾರೆ.

ಶಿವಣ್ಣ ಟೀ ಕಪ್ ಹಿಡಿದು ಕುಳಿತಿರುತ್ತಾರೆ. ಇವರ ಎದುರು ವಿಕ್ಕಿ ಹಾಗೂ ಅಮಿತ್ ನಿಂತಿರುತ್ತಾರೆ. ಈ ವೇಳೆ ಶ್ರೀನಿ ಬಂದು ‘ಬೆಳಗ್ಗೆ ನನಗೆ ಆವಾಜ್ ಹಾಕಿದ್ದು ಇವರೇ’ ಎಂದು ಕಂಪ್ಲೇಂಟ್ ಮಾಡುತ್ತಾರೆ. ಮುಂಜಾನೆ ಯಾವ ಯಾವ ರೀತಿಯಲ್ಲಿ ಅವರು ಬೆದರಿಕೆ ಹಾಕಿದ್ದರು ಎಂಬುದನ್ನು ಶಿವಣ್ಣನಿಗೆ ಶ್ರೀನಿ ವಿವರಿಸುತ್ತಾರೆ. ಶಿವಣ್ಣನ ನೋಡಿದ್ದೇ ವಿಕ್ಕಿ ಹಾಗೂ ಅಮಿತ್ ಅವರ ಮೀಟರ್ ಆಫ್ ಆಗಿ ಬಿಡುತ್ತದೆ! ಸಖತ್ ಭಯ ಬೀಳುತ್ತಾರೆ.

ತಾವು ಆ ರೀತಿ ಮಾಡಿಲ್ಲ ಎಂದು ಅದಕ್ಕೆ ವಿವರಣೆ ನೀಡುತ್ತಾರೆ. ಶಿವಣ್ಣ ಎಚ್ಚರಿಕೆ ಕೊಟ್ಟು ಕಳುಹಿಸುತ್ತಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಪಡೆದಿದೆ.

ಇದನ್ನೂ ಓದಿ: ‘ಘೋಸ್ಟ್​’ ಸಿನಿಮಾ ಟ್ರೇಲರ್​; ಅಚ್ಚರಿ ಮೂಡಿಸುವ ಗೆಟಪ್​ನಲ್ಲಿ ಬಂದ ಶಿವಣ್ಣ

‘ಘೋಸ್ಟ್’ ಸಿನಿಮಾ ಕನ್ನಡ ಸೇರಿ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಅನುಪಮ್ ಖೇರ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Thu, 12 October 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ