AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂದಿನಿ’ ಜೊತೆ ರೀಲ್ಸ್ ಮಾಡಿದ ಶಿವಣ್ಣ; ಖಡಕ್ ಆಗಿದೆ ಗ್ಯಾಂಗ್​ಸ್ಟರ್ ಖದರ್

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದಾರೆ.

‘ನಂದಿನಿ’ ಜೊತೆ ರೀಲ್ಸ್ ಮಾಡಿದ ಶಿವಣ್ಣ; ಖಡಕ್ ಆಗಿದೆ ಗ್ಯಾಂಗ್​ಸ್ಟರ್ ಖದರ್
ಅಮಿತ್-ಶಿವಣ್ಣ-ವಿಕ್ಕಿ
ರಾಜೇಶ್ ದುಗ್ಗುಮನೆ
|

Updated on:Oct 12, 2023 | 7:04 AM

Share

‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ..’ ಮೂಲಕ ವಿಕ್ಕಿ ಸಾಕಷ್ಟು ಜನಪ್ರಿಯತೆ ಪಡೆದರು. ಎಲ್ಲಾ ಕಡೆಗಳಲ್ಲಿ ಈ ಹಾಡೇ ಕೇಳಿತು. ಸೋಶಿಯಲ್ ಮೀಡಿಯಾದಲ್ಲಿ ಈ ಹಾಡನ್ನು ಬೇರೆ ಬೇರೆ ಸಾಹಿತ್ಯದೊಂದಿಗೆ ವೈರಲ್ ಮಾಡಲಾಯಿತು. ಈಗ ವಿಕ್ಕಿ ಅವರು ಶಿವರಾಜ್​ಕುಮಾರ್ (Shivarajkumar) ಜೊತೆ ಹೊಸ ವಿಡಿಯೋ ಮಾಡಿದ್ದಾರೆ. ಹಾಗಂತ ಇದು ‘ನಾನು ನಂದಿನಿ..’ ಹಾಡಲ್ಲ. ‘ಘೋಸ್ಟ್’ ಚಿತ್ರದ ಥೀಮ್​ನಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಫ್ಯಾನ್ಸ್ ಇದನ್ನು ಸಖತ್ ಇಷ್ಟಪಡುತ್ತಿದ್ದಾರೆ.

ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಶ್ರೀನಿ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದಾರೆ.

ಶಿವಣ್ಣ ಟೀ ಕಪ್ ಹಿಡಿದು ಕುಳಿತಿರುತ್ತಾರೆ. ಇವರ ಎದುರು ವಿಕ್ಕಿ ಹಾಗೂ ಅಮಿತ್ ನಿಂತಿರುತ್ತಾರೆ. ಈ ವೇಳೆ ಶ್ರೀನಿ ಬಂದು ‘ಬೆಳಗ್ಗೆ ನನಗೆ ಆವಾಜ್ ಹಾಕಿದ್ದು ಇವರೇ’ ಎಂದು ಕಂಪ್ಲೇಂಟ್ ಮಾಡುತ್ತಾರೆ. ಮುಂಜಾನೆ ಯಾವ ಯಾವ ರೀತಿಯಲ್ಲಿ ಅವರು ಬೆದರಿಕೆ ಹಾಕಿದ್ದರು ಎಂಬುದನ್ನು ಶಿವಣ್ಣನಿಗೆ ಶ್ರೀನಿ ವಿವರಿಸುತ್ತಾರೆ. ಶಿವಣ್ಣನ ನೋಡಿದ್ದೇ ವಿಕ್ಕಿ ಹಾಗೂ ಅಮಿತ್ ಅವರ ಮೀಟರ್ ಆಫ್ ಆಗಿ ಬಿಡುತ್ತದೆ! ಸಖತ್ ಭಯ ಬೀಳುತ್ತಾರೆ.

ತಾವು ಆ ರೀತಿ ಮಾಡಿಲ್ಲ ಎಂದು ಅದಕ್ಕೆ ವಿವರಣೆ ನೀಡುತ್ತಾರೆ. ಶಿವಣ್ಣ ಎಚ್ಚರಿಕೆ ಕೊಟ್ಟು ಕಳುಹಿಸುತ್ತಾರೆ. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಲೈಕ್ಸ್ ಪಡೆದಿದೆ.

ಇದನ್ನೂ ಓದಿ: ‘ಘೋಸ್ಟ್​’ ಸಿನಿಮಾ ಟ್ರೇಲರ್​; ಅಚ್ಚರಿ ಮೂಡಿಸುವ ಗೆಟಪ್​ನಲ್ಲಿ ಬಂದ ಶಿವಣ್ಣ

‘ಘೋಸ್ಟ್’ ಸಿನಿಮಾ ಕನ್ನಡ ಸೇರಿ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಅನುಪಮ್ ಖೇರ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Thu, 12 October 23

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ