Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೈಮ್ಯಾಕ್ಸ್ ಹಂತದಲ್ಲಿ ಶಿವಣ್ಣ-ಪ್ರಭುದೇವ ಸಿನಿಮಾ; ಕುತೂಹಲ ಮೂಡಿಸಿದ ‘ಕರಟಕ ದಮನಕ’ ಚಿತ್ರ

ಇತ್ತೀಚೆಗೆ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಸಿನಿಮಾ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾಹಿತಿ ಹಂಚಿಕೊಂಡರು. ಚಿತ್ರದ ಶೀರ್ಷಿಕೆ ‘ಕರಟಕ ದಮನಕ’ದ ಗುಟ್ಟನ್ನು ರಿವೀಲ್ ಮಾಡಿದರು. ‘ಇದು ಎರಡು ಕುತಂತ್ರಿ ನರಿಗಳ ಹೆಸರು. ಇಬ್ಬರು ಹೆಚ್ಚುಸಲ ಒಟ್ಟಾಗಿ ಕಾಣಿಸಿಕೊಂಡರೆ ‘ಕರಟಕ ದಮನಕ’ ಎಂದು ಕರೆಯಲಾಗುತ್ತದೆ’ ಎಂದರು ಯೋಗರಾಜ್ ಭಟ್.

ಕ್ಲೈಮ್ಯಾಕ್ಸ್ ಹಂತದಲ್ಲಿ ಶಿವಣ್ಣ-ಪ್ರಭುದೇವ ಸಿನಿಮಾ; ಕುತೂಹಲ ಮೂಡಿಸಿದ ‘ಕರಟಕ ದಮನಕ’ ಚಿತ್ರ
ಶಿವರಾಜ್​ಕುಮಾರ್-ಪ್ರಭುದೇವ
Follow us
ರಾಜೇಶ್ ದುಗ್ಗುಮನೆ
|

Updated on: Aug 24, 2023 | 12:07 PM

ನಟ ಶಿವರಾಜ್​ಕುಮಾರ್ ಅವರು ಸದ್ಯ ‘ಜೈಲರ್’ ಚಿತ್ರದ (Jailer Movie) ಗೆಲುವಿನ ಖುಷಿಯಲ್ಲಿದ್ದಾರೆ. ಈ ಚಿತ್ರ ದೊಡ್ಡ ಮಟ್ಟದ ಯಶಸ್ಸು ಪಡೆಯೋಕೆ ಅವರ ಪಾಲು ಕೂಡ ಇದೆ. ಈ ಬೆನ್ನಲ್ಲೇ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ನಟನೆಯ ‘ಕರಟಕ ದಮನಕ’ ಸಿನಿಮಾದ ಶೂಟಿಂಗ್ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ರಾಕ್ ಲೈನ್ ವೆಂಕಟೇಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಯೋಗರಾಜ್ ಭಟ್ (Yogaraj Bhat) ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಬೇಗ ತೆರೆಮೇಲೆ ಬರಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇತ್ತೀಚೆಗೆ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಸಿನಿಮಾ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾಹಿತಿ ಹಂಚಿಕೊಂಡರು. ಚಿತ್ರದ ಶೀರ್ಷಿಕೆ ‘ಕರಟಕ ದಮನಕ’ದ ಗುಟ್ಟನ್ನು ರಿವೀಲ್ ಮಾಡಿದರು. ‘ಇದು ಎರಡು ಕುತಂತ್ರಿ ನರಿಗಳ ಹೆಸರು. ಇಬ್ಬರು ಹೆಚ್ಚುಸಲ ಒಟ್ಟಾಗಿ ಕಾಣಿಸಿಕೊಂಡರೆ ‘ಕರಟಕ ದಮನಕ’ ಎಂದು ಕರೆಯಲಾಗುತ್ತದೆ’ ಎಂದರು ಯೋಗರಾಜ್ ಭಟ್. ಶಿವಣ್ಣ ಹಾಗೂ ಪ್ರಭುದೇವ ಅವರ ಎನರ್ಜಿ ನೋಡಿ ಅವರು ಖುಷಿಪಟ್ಟಿದ್ದಾರೆ. ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಲು ರಾಕ್​ಲೈನ್ ಅವರು ಭರ್ಜರಿ ಹಣ ಹೂಡುತ್ತಿದ್ದಾರೆ.

ವಿ. ಹರಿಕೃಷ್ಣ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಏಳು ಹಾಡುಗಳಿವೆ. ಶಿವರಾಜ್​ಕುಮಾರ್, ಪ್ರಭುದೇವ ಜೊತೆ ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಟಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು, ತನಿಕೆಲ್ಲ ಭರಣಿ ಸೇರಿ ಅನೇಕ ಹಿರಿಯ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ‘ಕರಟಕ ದಮನಕ’ ಚಿತ್ರದಲ್ಲಿ ಮತ್ತೊಂದು ವಿಶೇಷತೆ ಇದೆ. ಈ ಸಿನಿಮಾದಲ್ಲಿ ಯೋಗರಾಜ್ ಭಟ್ ಹಾಗೂ ರಾಕ್​ಲೈನ್ ವೆಂಕಟೇಶ್ ಕೂಡ ನಟಿಸಿದ್ದಾರೆ. ಈಗಾಗಲೇ ಶೇ.90ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಹಾಡಿನ ಶೂಟಿಂಗ್ ಮಾತ್ರ ಬಾಕಿ ಉಳಿದಿದೆ.

ಇದನ್ನೂ ಓದಿ: ‘ಜಾಲಿವುಡ್​’ಗೆ ಶುಭಕೋರಿದ ಶಿವರಾಜ್​ಕುಮಾರ್​, ಡಿಕೆಶಿ; ಇಲ್ಲಿದೆ ಹತ್ತು ಹಲವು ಬಗೆಯ ಮನರಂಜನೆ

ರಾಕ್​ಲೈನ್ ನಿರ್ಮಾಣ ಸಂಸ್ಥೆಯಲ್ಲಿ ಶಿವರಾಜ್​ಕುಮಾರ್ ಅವರು ಈ ಮೊದಲು ನಟಿಸಿದ್ದರು. ಆದರೆ, ಇತ್ತೀಚೆಗೆ ಇವರಿಗೆ ಒಟ್ಟಾಗಿ ಕೆಲಸ ಮಾಡೋಕೆ ಸಾಧ್ಯವಾಗಿರಲಿಲ್ಲ. ಪ್ರಭುದೇವ ಚಿತ್ರಕ್ಕೆ ಬಂಡವಾಳ ಹೂಡಬೇಕು ಎಂಬುದು ರಾಕ್​ಲೈನ್ ಅವರ ಕನಸಾಗಿತ್ತು. ‘ಕರಟಕ ದಮನಕ’ ಸಿನಿಮಾ ಮೂಲಕ ಈ ಕನಸು ನನಸಾಗಿದೆ. ಪ್ರಭುದೇವ ಜೊತೆ ತೆರೆಹಂಚಿಕೊಂಡಿದ್ದಕ್ಕೆ ಶಿವಣ್ಣ ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್