AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೈಮ್ಯಾಕ್ಸ್ ಹಂತದಲ್ಲಿ ಶಿವಣ್ಣ-ಪ್ರಭುದೇವ ಸಿನಿಮಾ; ಕುತೂಹಲ ಮೂಡಿಸಿದ ‘ಕರಟಕ ದಮನಕ’ ಚಿತ್ರ

ಇತ್ತೀಚೆಗೆ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಸಿನಿಮಾ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾಹಿತಿ ಹಂಚಿಕೊಂಡರು. ಚಿತ್ರದ ಶೀರ್ಷಿಕೆ ‘ಕರಟಕ ದಮನಕ’ದ ಗುಟ್ಟನ್ನು ರಿವೀಲ್ ಮಾಡಿದರು. ‘ಇದು ಎರಡು ಕುತಂತ್ರಿ ನರಿಗಳ ಹೆಸರು. ಇಬ್ಬರು ಹೆಚ್ಚುಸಲ ಒಟ್ಟಾಗಿ ಕಾಣಿಸಿಕೊಂಡರೆ ‘ಕರಟಕ ದಮನಕ’ ಎಂದು ಕರೆಯಲಾಗುತ್ತದೆ’ ಎಂದರು ಯೋಗರಾಜ್ ಭಟ್.

ಕ್ಲೈಮ್ಯಾಕ್ಸ್ ಹಂತದಲ್ಲಿ ಶಿವಣ್ಣ-ಪ್ರಭುದೇವ ಸಿನಿಮಾ; ಕುತೂಹಲ ಮೂಡಿಸಿದ ‘ಕರಟಕ ದಮನಕ’ ಚಿತ್ರ
ಶಿವರಾಜ್​ಕುಮಾರ್-ಪ್ರಭುದೇವ
ರಾಜೇಶ್ ದುಗ್ಗುಮನೆ
|

Updated on: Aug 24, 2023 | 12:07 PM

Share

ನಟ ಶಿವರಾಜ್​ಕುಮಾರ್ ಅವರು ಸದ್ಯ ‘ಜೈಲರ್’ ಚಿತ್ರದ (Jailer Movie) ಗೆಲುವಿನ ಖುಷಿಯಲ್ಲಿದ್ದಾರೆ. ಈ ಚಿತ್ರ ದೊಡ್ಡ ಮಟ್ಟದ ಯಶಸ್ಸು ಪಡೆಯೋಕೆ ಅವರ ಪಾಲು ಕೂಡ ಇದೆ. ಈ ಬೆನ್ನಲ್ಲೇ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿವರಾಜ್​ಕುಮಾರ್ ಹಾಗೂ ಪ್ರಭುದೇವ ನಟನೆಯ ‘ಕರಟಕ ದಮನಕ’ ಸಿನಿಮಾದ ಶೂಟಿಂಗ್ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ರಾಕ್ ಲೈನ್ ವೆಂಕಟೇಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಯೋಗರಾಜ್ ಭಟ್ (Yogaraj Bhat) ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಬೇಗ ತೆರೆಮೇಲೆ ಬರಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇತ್ತೀಚೆಗೆ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಸಿನಿಮಾ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾಹಿತಿ ಹಂಚಿಕೊಂಡರು. ಚಿತ್ರದ ಶೀರ್ಷಿಕೆ ‘ಕರಟಕ ದಮನಕ’ದ ಗುಟ್ಟನ್ನು ರಿವೀಲ್ ಮಾಡಿದರು. ‘ಇದು ಎರಡು ಕುತಂತ್ರಿ ನರಿಗಳ ಹೆಸರು. ಇಬ್ಬರು ಹೆಚ್ಚುಸಲ ಒಟ್ಟಾಗಿ ಕಾಣಿಸಿಕೊಂಡರೆ ‘ಕರಟಕ ದಮನಕ’ ಎಂದು ಕರೆಯಲಾಗುತ್ತದೆ’ ಎಂದರು ಯೋಗರಾಜ್ ಭಟ್. ಶಿವಣ್ಣ ಹಾಗೂ ಪ್ರಭುದೇವ ಅವರ ಎನರ್ಜಿ ನೋಡಿ ಅವರು ಖುಷಿಪಟ್ಟಿದ್ದಾರೆ. ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಲು ರಾಕ್​ಲೈನ್ ಅವರು ಭರ್ಜರಿ ಹಣ ಹೂಡುತ್ತಿದ್ದಾರೆ.

ವಿ. ಹರಿಕೃಷ್ಣ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಏಳು ಹಾಡುಗಳಿವೆ. ಶಿವರಾಜ್​ಕುಮಾರ್, ಪ್ರಭುದೇವ ಜೊತೆ ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಟಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು, ತನಿಕೆಲ್ಲ ಭರಣಿ ಸೇರಿ ಅನೇಕ ಹಿರಿಯ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ‘ಕರಟಕ ದಮನಕ’ ಚಿತ್ರದಲ್ಲಿ ಮತ್ತೊಂದು ವಿಶೇಷತೆ ಇದೆ. ಈ ಸಿನಿಮಾದಲ್ಲಿ ಯೋಗರಾಜ್ ಭಟ್ ಹಾಗೂ ರಾಕ್​ಲೈನ್ ವೆಂಕಟೇಶ್ ಕೂಡ ನಟಿಸಿದ್ದಾರೆ. ಈಗಾಗಲೇ ಶೇ.90ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಹಾಡಿನ ಶೂಟಿಂಗ್ ಮಾತ್ರ ಬಾಕಿ ಉಳಿದಿದೆ.

ಇದನ್ನೂ ಓದಿ: ‘ಜಾಲಿವುಡ್​’ಗೆ ಶುಭಕೋರಿದ ಶಿವರಾಜ್​ಕುಮಾರ್​, ಡಿಕೆಶಿ; ಇಲ್ಲಿದೆ ಹತ್ತು ಹಲವು ಬಗೆಯ ಮನರಂಜನೆ

ರಾಕ್​ಲೈನ್ ನಿರ್ಮಾಣ ಸಂಸ್ಥೆಯಲ್ಲಿ ಶಿವರಾಜ್​ಕುಮಾರ್ ಅವರು ಈ ಮೊದಲು ನಟಿಸಿದ್ದರು. ಆದರೆ, ಇತ್ತೀಚೆಗೆ ಇವರಿಗೆ ಒಟ್ಟಾಗಿ ಕೆಲಸ ಮಾಡೋಕೆ ಸಾಧ್ಯವಾಗಿರಲಿಲ್ಲ. ಪ್ರಭುದೇವ ಚಿತ್ರಕ್ಕೆ ಬಂಡವಾಳ ಹೂಡಬೇಕು ಎಂಬುದು ರಾಕ್​ಲೈನ್ ಅವರ ಕನಸಾಗಿತ್ತು. ‘ಕರಟಕ ದಮನಕ’ ಸಿನಿಮಾ ಮೂಲಕ ಈ ಕನಸು ನನಸಾಗಿದೆ. ಪ್ರಭುದೇವ ಜೊತೆ ತೆರೆಹಂಚಿಕೊಂಡಿದ್ದಕ್ಕೆ ಶಿವಣ್ಣ ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ