‘ಶಿವಣ್ಣ, ನಾನು ದೇಹದಾನ ಮಾಡಿದ್ದೇವೆ’: ಅಪ್ಪು ನೆನಪಲ್ಲಿ ರಾಘಣ್ಣ ಹೇಳಿದ ಮಹತ್ವದ ವಿಚಾರಗಳು ಇಲ್ಲಿವೆ

Body Donation: ಪುನೀತ್​ ರಾಜ್​ಕುಮಾರ್​ ಸ್ಮರಣಾರ್ಥ ನೇತ್ರದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೇ ದೇಹದಾನದ ಬಗ್ಗೆಯೂ ಡಾ. ರಾಜ್​ಕುಮಾರ್​ ಕುಟುಂಬ ಜಾಗೃತಿ ಮೂಡಿಸುತ್ತಿದೆ. ಆ ಕುರಿತು ರಾಘಣ್ಣ ಮಾತನಾಡಿದ್ದಾರೆ.

‘ಶಿವಣ್ಣ, ನಾನು ದೇಹದಾನ ಮಾಡಿದ್ದೇವೆ’: ಅಪ್ಪು ನೆನಪಲ್ಲಿ ರಾಘಣ್ಣ ಹೇಳಿದ ಮಹತ್ವದ ವಿಚಾರಗಳು ಇಲ್ಲಿವೆ
ರಾಘವೇಂದ್ರ ರಾಜ್​ಕುಮಾರ್​, ಶಿವರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on:Dec 29, 2021 | 12:47 PM

ನಟ ಪುನೀತ್​ ರಾಜ್​ಕುಮಾರ್​ ( Puneeth Rajkumar) ಅವರು ಅನೇಕ ವಿಚಾರಗಳಲ್ಲಿ ಮಾದರಿ ಆಗಿದ್ದರು. ಅವರನ್ನು ಕಳೆದುಕೊಂಡಿದ್ದರಿಂದ ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲದೇ ಇಡೀ ಸಮಾಜಕ್ಕೆ ನಷ್ಟ ಆಗಿದೆ. ನಿಧನದ ಬಳಿಕ ನೇತ್ರದಾನದ (Eye Donation) ಮೂಲಕ ಅಪ್ಪು ಸಾರ್ಥಕತೆ ಮೆರೆದರು. ಅವರಿಂದ ಪ್ರೇರಿತರಾಗಿ ಈಗ ಸಾವಿರಾರು ಜನರು ನೇತ್ರದಾನಕ್ಕೆ ಪ್ರತಿಜ್ಞೆ ಮಾಡುತ್ತಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಡಾ. ರಾಜ್​ಕುಮಾರ್​ ಕುಟುಂಬದವರು ದೇಹದಾನದ (Body Donation) ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar)​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಪುನೀತ್​ ನಿಧನರಾಗಿ ಇಂದಿಗೆ (ಡಿ.29) ಎರಡು ತಿಂಗಳು ಕಳೆದಿದೆ. ಆ ಪ್ರಯುಕ್ತ ಅವರ ಸಮಾಧಿಗೆ ಪೂಜೆ ಸಲ್ಲಿಸಲಾಗಿದೆ.

ನೇತ್ರದಾನದ ಬಳಿಕ ದೇಹದಾನದ ಬಗ್ಗೆಯೂ ಡಾ. ರಾಜ್​ ಕುಟುಂಬ ಜಾಗೃತಿ ಮೂಡಿಸುತ್ತಿದೆ. ಆ ಕುರಿತು ರಾಘಣ್ಣ ಮಾತನಾಡಿದ್ದಾರೆ. ‘ಅಪ್ಪಾಜಿ ಹುಟ್ಟುಹಬ್ಬದ ದಿನ ನಾನು ಮತ್ತು ಶಿವಣ್ಣ ದೇಹದಾನ ಮಾಡಿದ್ದೇವೆ. ನಮ್ಮ ದೇಹ ಬೆಂಕಿಯಲ್ಲಿ ಅಥವಾ ಮಣ್ಣಲ್ಲಿ ಅಂತ್ಯವಾಗಿ ಹೋಗುವ ಬದಲು, ನಮ್ಮಿಂದ ನಾಲ್ಕು ಜನಕ್ಕೆ ಸಹಾಯ ಆಗುತ್ತೆ ಅನ್ನೋದಾದರೆ ನಾವೇಕೆ ದೇಹದಾನ ಮಾಡಬಾರದು? ನಮ್ಮ ತಂದೆಯವರ ಪ್ರೇರಣೆಯಿಂದ ನಾವು ಇದನ್ನು ಮಾಡಿದ್ದೇವೆ. ಈ ಬಗ್ಗೆ ನೀವು ವಿಚಾರ ಮಾಡಿ. ನಿಮ್ಮ ಮನಸ್ಸಿಗೆ ಸರಿ ಎನಿಸಿ, ನೀವೇ ದೇಹದಾನ ಮಾಡುತ್ತೀರಿ. ಆ ಬಗ್ಗೆ ಯಾರಿಗೂ ನಾವು ಬಲವಂತ ಮಾಡುವುದಿಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಎಲ್ಲರೂ ನೇತ್ರದಾನ ಮಾಡಬೇಕು. ಅದರಿಂದ ಅಂಧರ ಬಾಳಿಗೆ ಬೆಳಕು ಬರುತ್ತದೆ. ಅವರ ಆಶೀರ್ವಾದ ನಮ್ಮ ಕುಟುಂಬದವರ ಮೇಲೆ ಇರುತ್ತದೆ. ಪುನೀತ್​ ನಿಧನದ ಬಳಿಕ 400ಕ್ಕೂ ಹೆಚ್ಚು ಕಣ್ಣುಗಳು ಬಂದಿವೆ. ನೇತ್ರದಾನದ ಬಗ್ಗೆ ನಾಲ್ಕು ಜನಕ್ಕೆ ಹೇಳಿ, ಸೋಶಿಯಲ್​ ಮೀಡಿಯಾದಲ್ಲಿ ಹಾಕಿ. ಅದರಿಂದ ಎಲ್ಲರಿಗೂ ಕಣ್ಣು ಸಿಗಲಿ. ಇಷ್ಟೊಂದು ಕಣ್ಣುಗಳು ಎಲ್ಲಿಂದ ಬಂತು ಎಂದು ಪ್ರಪಂಚ ಕೇಳಿದರೆ ಕರ್ನಾಟಕದಿಂದ ಬಂತು ಅಂತ ಹೆಮ್ಮೆಯಿಂದ ಹೇಳಬೇಕು. ಅದು ಪುನೀತ್​ಗೆ ಮತ್ತು ರಾಜ್​ಕುಮಾರ್​ ಅವರಿಗೆ ನಾವು ಕೊಡುವ ಗೌರವ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಇದೇ ರೀತಿ ಇಡೀ ಪ್ರಪಂಚಕ್ಕೆ ಕಣ್ಣು ಸಿಗಲಿ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಿಧನರಾಗಿ ಎರಡು ತಿಂಗಳು ಕಳೆದ ಹಿನ್ನೆಲೆಯಲ್ಲಿ ಇಡೀ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ‘ಪುನೀತ್​ ಮಾಡುತ್ತಿದ್ದ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಅಭಿಮಾನಿಗಳೇ ನಮಗೆ ಶಕ್ತಿ ನೀಡಬೇಕು. ಅವನ ಸಿನಿಮಾಗಳೆಲ್ಲ ಈಗ ಬದಿಗೆ ಸರಿದಿವೆ. ಅವನು ಮಾಡಿದ ಸಾಮಾಜಿಕ ಕೆಲಸಗಳೇ ಮುಂದೆ ಬಂದಿವೆ’ ಎಂದು ರಾಘಣ್ಣ ಹೇಳಿದ್ದಾರೆ.

ಇದನ್ನೂ ಓದಿ:

ಅಪ್ಪು ಇಲ್ಲದೇ ಕಳೆಯಿತು 2 ತಿಂಗಳು; ನೇತ್ರದಾನದ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ರಾಘಣ್ಣ

Year Ender 2021: ಚಿತ್ರರಂಗದ ಪಾಲಿಗೆ ಕಪ್ಪು ಚುಕ್ಕೆಯಾದ 2021; ಮರೆಯೋಕೆ ಆಗಲ್ಲ ಪುನೀತ್​ ನಿಧನದ ನೋವು

Published On - 12:13 pm, Wed, 29 December 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ