AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್’​ ಚಿತ್ರದಲ್ಲಿ ಪುನೀತ್​, ಶಿವಣ್ಣ, ರಾಘಣ್ಣ; ​ಫ್ಯಾನ್ಸ್​ ಕನಸು ಈಡೇರಿಸಲು ನಿರ್ದೇಶಕರ ಪ್ಲ್ಯಾನ್​

Puneeth Rajkumar: ಪುನೀತ್​ ರಾಜ್​ಕುಮಾರ್​ ಅವರ ನಿಧನದ ನಂತರ ‘ಜೇಮ್ಸ್​’ ಚಿತ್ರತಂಡ ಹೀಗೊಂದು ಪ್ಲ್ಯಾನ್​ ಮಾಡಿದೆ. ಅಣ್ಣಾವ್ರ ಮಕ್ಕಳನ್ನು ಒಟ್ಟಿಗೆ ತೋರಿಸಲು ನಿರ್ದೇಶಕರು ಮುಂದಾಗಿದ್ದಾರೆ.

‘ಜೇಮ್ಸ್’​ ಚಿತ್ರದಲ್ಲಿ ಪುನೀತ್​, ಶಿವಣ್ಣ, ರಾಘಣ್ಣ; ​ಫ್ಯಾನ್ಸ್​ ಕನಸು ಈಡೇರಿಸಲು ನಿರ್ದೇಶಕರ ಪ್ಲ್ಯಾನ್​
ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Jan 20, 2022 | 4:24 PM

Share

ಅಣ್ಣಾವ್ರ ಮಕ್ಕಳಾದ ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್​ (Shivarajkumar) ಹಾಗೂ ರಾಘವೇಂದ್ರ ರಾಜ್​ಕುಮಾರ್​ ಒಟ್ಟಿಗೆ ಅಭಿನಯಿಸಬೇಕು ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಆದರೆ ಆ ಆಸೆ ಈಡೇರುವುದಕ್ಕೂ ಮುನ್ನವೇ ಪುನೀತ್​ ರಾಜ್​ಕುಮಾರ್ (Puneeth Rajkumar) ಅವರು ಹೃದಯಾಘಾತದಿಂದ ಕಳೆದ ವರ್ಷ ಅ.29ರಂದು​ ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಡಾ. ರಾಜ್​ಕುಮಾರ್​ ಕುಟುಂಬದ ಕುಡಿಗಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎನ್ನುವ ಅಭಿಮಾನಿಗಳ ಕನಸನ್ನು ನನಸು ಮಾಡಲು ‘ಜೇಮ್ಸ್​’ (James Kannada Movie) ಚಿತ್ರತಂಡ ಪ್ರಯತ್ನಿಸುತ್ತಿದೆ. ಆ ಬಗ್ಗೆ ಈಗೊಂದು ಸ್ಪೆಷಲ್​ ನ್ಯೂಸ್​ ಸಿಕ್ಕಿದೆ. ಇದನ್ನು ಕೇಳಿ ಫ್ಯಾನ್ಸ್​ ಥ್ರಿಲ್​ ಆಗೋದು ಗ್ಯಾರಂಟಿ. ಹೌದು, ‘ಜೇಮ್ಸ್​’ ಸಿನಿಮಾ ನಿರ್ದೇಶಕ ಚೇತನ್​ ಕುಮಾರ್​ ಅವರು ಹೀಗೊಂದು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ನಟನೆಯ ಈ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಘಣ್ಣ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಚಿತ್ರತಂಡ ಈಗಾಗಲೇ ತಯಾರಿ ಮಾಡಿಕೊಂಡಿದೆ.

ಪುನೀತ್​ ರಾಜ್​ಕುಮಾರ್​ ಅವರ ನಿಧನದ ನಂತರ ‘ಜೇಮ್ಸ್​’ ಚಿತ್ರತಂಡ ಈ ಪ್ಲ್ಯಾನ್​ ಮಾಡಿದೆ. ಅಣ್ಣಾವ್ರ ಮಕ್ಕಳನ್ನು ಒಟ್ಟಿಗೆ ತೋರಿಸಲು ನಿರ್ದೇಶಕರು ಮುಂದಾಗಿದ್ದಾರೆ. ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಅವರು ‘ಜೇಮ್ಸ್​’ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಮಾಹಿತಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಜ.21ರಿಂದ ‘ಜೇಮ್ಸ್​’ ಸಿನಿಮಾದ ಶೂಟಿಂಗ್​ನಲ್ಲಿ ರಾಘವೇಂದ್ರ ರಾಜ್​ಕುಮಾರ್​ ಮತ್ತು ಶಿವರಾಜ್​ಕುಮಾರ್​ ಅವರು ಭಾಗವಹಿಸಲಿದ್ದಾರೆ. ಆದರೆ ಇಲ್ಲೊಂದು ಸಸ್ಪೆನ್ಸ್​ ಇದೆ. ಈ ಮೂವರೂ ಸಿನಿಮಾದ ಯಾವುದಾದರೊಂದು ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಾರಾ ಅಥವಾ ಬಾಕಿ ಉಳಿದಿರುವ ಒಂದು ಹಾಡಿನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರಾ ಎಂಬುದು ತಿಳಿದುಬಂದಿಲ್ಲ. ಅದೇನೇ ಇರಲಿ, ಇದು ಅಭಿಮಾನಿಗಳಿಗೆ ಸಖತ್​ ಖುಷಿ ನೀಡಲಿರುವುದಂತೂ ನಿಜ.

‘ಜೇಮ್ಸ್​’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಅನೇಕ ಕಾರಣಗಳಿವೆ. ಇದೇ ಮೊದಲ ಬಾರಿಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಚೇತನ್​ ಕುಮಾರ್​ ಆ್ಯಕ್ಷನ್​-ಕಟ್​ ಹೇಳಿದ ಚಿತ್ರವಿದು. ಪುನೀತ್​ ನಿಧನಕ್ಕೂ ಮುನ್ನ ಬಿಡುಗಡೆಯಾಗಿದ್ದ ಪೋಸ್ಟರ್​ಗಳಿಂದ ಭಾರಿ ಹೈಟ್​ ಸೃಷ್ಟಿ ಆಗಿತ್ತು. ಅದ್ದೂರಿ ಆ್ಯಕ್ಷನ್​ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ಚೇತನ್​ ಕುಮಾರ್​ ಫೇಮಸ್​. ಈಗ ಈ ಕಾಂಬಿನೇಷನ್​ಗೆ ಶಿವರಾಜ್​ಕುಮಾರ್​ ಮತ್ತು ರಾಘವೇಂದ್ರ ರಾಜ್​ಕುಮಾರ್​ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ.

ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ದೃಶ್ಯಗಳ ಶೂಟಿಂಗ್​ ಮುಕ್ತಾಯ ಆಗಿದೆ. ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್​ ರಾಜ್​ಕುಮಾರ್​ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್​’ ರಿಲೀಸ್​ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಸಂಕ್ರಾಂತಿ ಹಬ್ಬದಲ್ಲಿ ಪುನೀತ್​ ರಾಜ್​ಕುಮಾರ್​ ನೆನಪು; ಫ್ಯಾನ್ಸ್​ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ

‘ಪುನೀತ್​ ಇಲ್ಲದೇ ‘ಜೇಮ್ಸ್​’ ಶೂಟಿಂಗ್​ ಮಾಡೋದು ಕಷ್ಟ ಆಗ್ತಿದೆ’: ನಟ ಅವಿನಾಶ್​ ಭಾವುಕ ನುಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ