AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ಪ್ಯಾನ್​ ಇಂಡಿಯಾ ಚಿತ್ರದಲ್ಲಿ ಶಿವಣ್ಣ-ಉಪೇಂದ್ರ; ಬಿಗ್​ ನ್ಯೂ​ಸ್​ ನೀಡಿದ ‘45’ ಚಿತ್ರತಂಡ

Shivarajkumar | 45 Movie: ಬಹುಕೋಟಿ ವೆಚ್ಚದಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಡಿಸೆಂಬರ್​ನಲ್ಲಿ ಆರಂಭ ಆಗಲಿದೆ.

Upendra: ಪ್ಯಾನ್​ ಇಂಡಿಯಾ ಚಿತ್ರದಲ್ಲಿ ಶಿವಣ್ಣ-ಉಪೇಂದ್ರ; ಬಿಗ್​ ನ್ಯೂ​ಸ್​ ನೀಡಿದ ‘45’ ಚಿತ್ರತಂಡ
ರಮೇಶ್​ ರೆಡ್ಡಿ, ಉಪೇಂದ್ರ, ಅರ್ಜುನ್​ ಜನ್ಯ, ಶಿವರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 02, 2022 | 9:13 PM

ಕನ್ನಡ ಚಿತ್ರರಂಗದಲ್ಲಿ ಪ್ಯಾನ್​ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಉಪೇಂದ್ರ (Upendra) ಅವರು ‘ಕಬ್ಜ’ ಸಿನಿಮಾ ಮಾಡುತ್ತಿದ್ದಾರೆ. ಅತ್ತ, ಶಿವರಾಜ್​ಕುಮಾರ್​ ನಟನೆಯ ‘45’ ಚಿತ್ರ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗಲಿದೆ. ಅಚ್ಚರಿ ಎಂದರೆ, ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ (Shivarajkumar) ಜೊತೆ ‘ರಿಯಲ್​ ಸ್ಟಾರ್​’ ಉಪೇಂದ್ರ ಕೂಡ ನಟಿಸಲಿದ್ದಾರೆ. ಈ ಬಗ್ಗೆ ‘45’ ಚಿತ್ರತಂಡದಿಂದ ದೊಡ್ಡ ಸುದ್ದಿ ಸಿಕ್ಕಿದೆ. ಈ ಸಿನಿಮಾಗೆ ರಮೇಶ್​ ರೆಡ್ಡಿ ಬಂಡವಾಳ ಹೂಡುತ್ತಿದ್ದು, ಅರ್ಜುನ್​ ಜನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪಾತ್ರವರ್ಗಕ್ಕೆ ಉಪೇಂದ್ರ ಸೇರ್ಪಡೆ ಆಗಿರುವುದರಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ನಿರ್ಮಾಪಕ ರಮೇಶ್​ ರೆಡ್ಡಿ ಮತ್ತು ನಿರ್ದೇಶಕ ಅರ್ಜುನ್​ ಜನ್ಯ (Arjun Janya) ಅವರು ಉಪೇಂದ್ರ ಅವರನ್ನು ಚಿತ್ರತಂಡಕ್ಕೆ ಸ್ವಾಗತಿಸಿದ್ದಾರೆ.

ಗಣೇಶ್​, ದಿಗಂತ್​, ಪವನ್​ ಕುಮಾರ್​ ನಟನೆಯ ‘ಗಾಳಿಪಟ 2’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಇದರಿಂದ ರಮೇಶ್​ ರೆಡ್ಡಿ ಅವರಿಗೆ ಲಾಭವಾಯಿತು. ಈಗ ಅವರು ಮುಂದಿನ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ. ತಮ್ಮ ‘ಸೂರಜ್ ಪ್ರೊಡಕ್ಷನ್ಸ್​’ ಮೂಲಕ ದೊಡ್ಡ ಸಾಹಸಕ್ಕೆ ಅವರು ಕೈ ಹಾಕಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನ ಮಾಡಲಿರುವ ‘45’ ಚಿತ್ರವನ್ನು ಶಿವರಾಜ್​ಕುಮಾರ್​ ಅವರ ಜನ್ಮದಿನದ ಪ್ರಯುಕ್ತ ಅನೌನ್ಸ್​ ಮಾಡಲಾಗಿತ್ತು. ಸದ್ಯ ಆ ಚಿತ್ರಕ್ಕೆ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

ಬಹುಕೋಟಿ ವೆಚ್ಚದಲ್ಲಿ ‘45’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಡಿಸೆಂಬರ್​ನಲ್ಲಿ ಆರಂಭ ಆಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ತೆರೆಕಾಣಿಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ. ಶೂಟಿಂಗ್​ ಶುರು ಆಗುವುದಕ್ಕೂ ಮುನ್ನವೇ ಚಿತ್ರದ ಆಡಿಯೋ ಹಕ್ಕುಗಳಿಗೆ ಸಖತ್​ ಡಿಮ್ಯಾಂಡ್ ಬಂದಿದೆ ಎನ್ನಲಾಗಿದೆ.

ಇದನ್ನೂ ಓದಿ
Image
‘ಓಂ’ ಸಿನಿಮಾ ಸ್ಟೈಲ್​ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಗೆ ಶಿವರಾಜ್​ಕುಮಾರ್ ಎಂಟ್ರಿ; ಇಲ್ಲಿದೆ ವಿಡಿಯೋ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

ಶಿವರಾಜ್​ಕುಮಾರ್​ ಮತ್ತು ಉಪೇಂದ್ರ ಅವರು ಈ ಚಿತ್ರದಲ್ಲಿ ಜೊತೆಯಾಗಿ ನಟಿಸಲಿರುವುದರಿಂದ ಅವರಿಬ್ಬರ ಪಾತ್ರಗಳು ಹೇಗಿರಲಿವೆ ಎಂಬ ಕೌತುಕ ನಿರ್ಮಾಣ ಆಗಿದೆ. ಈ ಹಿಂದೆ ‘ಓಂ’ ಚಿತ್ರದಲ್ಲಿ ಉಪೇಂದ್ರ ಮತ್ತು ಶಿವಣ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಬಳಿಕ ‘ಪ್ರೀತ್ಸೆ’ ಹಾಗೂ ‘ಲವ ಕುಶ’ ಚಿತ್ರದಲ್ಲಿ ತೆರೆ ಹಂಚಿಕೊಂಡಿದ್ದರು. ಈ ಮತ್ತೆ ಅವರಿಬ್ಬರು ‘45’ ಚಿತ್ರಕ್ಕಾಗಿ ಒಂದಾಗುತ್ತಿರುವುದು ವಿಶೇಷ. ಚಿತ್ರದ ಬಗ್ಗೆ ಹೆಚ್ಚಿನ ಅಪ್​ಡೇಟ್​ ಪಡೆಯಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ