AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಬಾರಿಗೆ ಒಂದಾದ ಶಿವಣ್ಣ-ಶೆಟ್ರು: ಸ್ಯಾಂಡಲ್​ವುಡ್​ನಲ್ಲಿ ಶುರುವಾಗಿದೆ ಹೊಸ ಸಂಚಲನ

‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥ ಸಿನಿಮಾಗಳನ್ನು ನಿರ್ದೇಶನ ಮಾಡಿ ರಿಷಬ್​ ಶೆಟ್ಟಿ ಭೇಷ್​ ಎನಿಸಿಕೊಂಡಿದ್ದಾರೆ. ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಚೊಚ್ಚಲ ಬಾರಿಗೆ ಒಂದಾದ ಶಿವಣ್ಣ-ಶೆಟ್ರು: ಸ್ಯಾಂಡಲ್​ವುಡ್​ನಲ್ಲಿ ಶುರುವಾಗಿದೆ ಹೊಸ ಸಂಚಲನ
ಶಿವರಾಜ್ ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 10, 2021 | 4:01 PM

Share

ನಟ ಶಿವರಾಜ್​ಕುಮಾರ್​ ಅವರು ಜುಲೈ 12ರಂದು 59ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಜನ್ಮದಿನಕ್ಕೂ ಮೊದಲು ಅವರ ಮುಂದಿನ ಸಿನಿಮಾಗಳ ಬಗ್ಗೆ ಸಾಕಷ್ಟು ಅಪ್​ಡೇಟ್​ಗಳು ಕೇಳಿ ಬರುತ್ತಿವೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ಶಿವರಾಜ್​ಕುಮಾರ್​ 126ನೇ ಸಿನಿಮಾಗೆ ಕನ್ನಡದ ಖ್ಯಾತ ನಿರ್ದೇಶಕ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ.

‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥ ಸಿನಿಮಾಗಳನ್ನು ನಿರ್ದೇಶನ ಮಾಡಿ ರಿಷಬ್​ ಶೆಟ್ಟಿ ಭೇಷ್​ ಎನಿಸಿಕೊಂಡಿದ್ದಾರೆ. ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಮಧ್ಯೆ ಶಿವಣ್ಣ ಅವರ 126ನೇ ಚಿತ್ರಕ್ಕೆ ರಿಷಬ್​ ನಿರ್ದೇಶನ ಇರಲಿದೆಯಂತೆ. ಶಿವರಾಜ್​ಕುಮಾರ್​ ಬರ್ತ್​ಡೇ ದಿನ ಈ ವಿಚಾರ ಅಧಿಕೃತ ಆಗಲಿದೆ.

ರಿಷಬ್​-ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ಜಯಣ್ಣ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ. ಸದ್ಯ, ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಇನ್ನು, ಶಿವರಾಜ್​ಕುಮಾರ್​ 123ನೇ ಸಿನಿಮಾ ಫಸ್ಟ್​ ಪೋಸ್ಟರ್​ ಇಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್​ ಶಿವಣ್ಣ  ಬರ್ತ್​ಡೇ ದಿನ ಅನಾವರಣಗೊಳ್ಳಲಿದೆ. ಈ ಚಿತ್ರದಲ್ಲಿ ಡಾಲಿ ಧನಂಜಯ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಶಿವರಾಜ್​ಕುಮಾರ್​ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸೋಕೆ ಲಕ್ಷಾಂತರ ಅಭಿಮಾನಿಗಳು ಕಾದಿದ್ದಾರೆ. ಆದರೆ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳೋದಿಲ್ಲ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ಅವರ ಈ ಮಹತ್ವದ ನಿರ್ಧಾರಕ್ಕೆ ಕೊರೊನಾ ಕಾರಣ. ಜು.12ರಂದು ಶಿವಣ್ಣನ ಜನ್ಮದಿನ. ಆದರೆ ಅಂದು ತಾವು ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಮುಂಚಿತವಾಗಿಯೇ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ. ಎಲ್ಲರೂ ಸೇಫ್​ ಆಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಬೆಂಗಳೂರಲ್ಲಿ ಇರಲ್ಲ; ಬೇಜಾರು ಮಾಡ್ಕೋಬೇಡಿ’: ಶಿವಣ್ಣ ಮಹತ್ವದ ನಿರ್ಧಾರ

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

Published On - 3:57 pm, Sat, 10 July 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ