AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಬಾರಿಗೆ ಒಂದಾದ ಶಿವಣ್ಣ-ಶೆಟ್ರು: ಸ್ಯಾಂಡಲ್​ವುಡ್​ನಲ್ಲಿ ಶುರುವಾಗಿದೆ ಹೊಸ ಸಂಚಲನ

‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥ ಸಿನಿಮಾಗಳನ್ನು ನಿರ್ದೇಶನ ಮಾಡಿ ರಿಷಬ್​ ಶೆಟ್ಟಿ ಭೇಷ್​ ಎನಿಸಿಕೊಂಡಿದ್ದಾರೆ. ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಚೊಚ್ಚಲ ಬಾರಿಗೆ ಒಂದಾದ ಶಿವಣ್ಣ-ಶೆಟ್ರು: ಸ್ಯಾಂಡಲ್​ವುಡ್​ನಲ್ಲಿ ಶುರುವಾಗಿದೆ ಹೊಸ ಸಂಚಲನ
ಶಿವರಾಜ್ ಕುಮಾರ್
TV9 Web
| Edited By: |

Updated on:Jul 10, 2021 | 4:01 PM

Share

ನಟ ಶಿವರಾಜ್​ಕುಮಾರ್​ ಅವರು ಜುಲೈ 12ರಂದು 59ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ. ಜನ್ಮದಿನಕ್ಕೂ ಮೊದಲು ಅವರ ಮುಂದಿನ ಸಿನಿಮಾಗಳ ಬಗ್ಗೆ ಸಾಕಷ್ಟು ಅಪ್​ಡೇಟ್​ಗಳು ಕೇಳಿ ಬರುತ್ತಿವೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ಶಿವರಾಜ್​ಕುಮಾರ್​ 126ನೇ ಸಿನಿಮಾಗೆ ಕನ್ನಡದ ಖ್ಯಾತ ನಿರ್ದೇಶಕ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ.

‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಅಂಥ ಸಿನಿಮಾಗಳನ್ನು ನಿರ್ದೇಶನ ಮಾಡಿ ರಿಷಬ್​ ಶೆಟ್ಟಿ ಭೇಷ್​ ಎನಿಸಿಕೊಂಡಿದ್ದಾರೆ. ಸದ್ಯ, ರುದ್ರಪ್ರಯಾಗ್​ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಈ ಮಧ್ಯೆ ಶಿವಣ್ಣ ಅವರ 126ನೇ ಚಿತ್ರಕ್ಕೆ ರಿಷಬ್​ ನಿರ್ದೇಶನ ಇರಲಿದೆಯಂತೆ. ಶಿವರಾಜ್​ಕುಮಾರ್​ ಬರ್ತ್​ಡೇ ದಿನ ಈ ವಿಚಾರ ಅಧಿಕೃತ ಆಗಲಿದೆ.

ರಿಷಬ್​-ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ಜಯಣ್ಣ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ. ಸದ್ಯ, ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಇನ್ನು, ಶಿವರಾಜ್​ಕುಮಾರ್​ 123ನೇ ಸಿನಿಮಾ ಫಸ್ಟ್​ ಪೋಸ್ಟರ್​ ಇಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್​ ಶಿವಣ್ಣ  ಬರ್ತ್​ಡೇ ದಿನ ಅನಾವರಣಗೊಳ್ಳಲಿದೆ. ಈ ಚಿತ್ರದಲ್ಲಿ ಡಾಲಿ ಧನಂಜಯ್​ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಶಿವರಾಜ್​ಕುಮಾರ್​ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸೋಕೆ ಲಕ್ಷಾಂತರ ಅಭಿಮಾನಿಗಳು ಕಾದಿದ್ದಾರೆ. ಆದರೆ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳೋದಿಲ್ಲ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ಅವರ ಈ ಮಹತ್ವದ ನಿರ್ಧಾರಕ್ಕೆ ಕೊರೊನಾ ಕಾರಣ. ಜು.12ರಂದು ಶಿವಣ್ಣನ ಜನ್ಮದಿನ. ಆದರೆ ಅಂದು ತಾವು ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಮುಂಚಿತವಾಗಿಯೇ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ. ಎಲ್ಲರೂ ಸೇಫ್​ ಆಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಬೆಂಗಳೂರಲ್ಲಿ ಇರಲ್ಲ; ಬೇಜಾರು ಮಾಡ್ಕೋಬೇಡಿ’: ಶಿವಣ್ಣ ಮಹತ್ವದ ನಿರ್ಧಾರ

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

Published On - 3:57 pm, Sat, 10 July 21

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!