AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬೆಂಗಳೂರಲ್ಲಿ ಇರಲ್ಲ; ಬೇಜಾರು ಮಾಡ್ಕೋಬೇಡಿ’: ಶಿವಣ್ಣ ಮಹತ್ವದ ನಿರ್ಧಾರ

Shivarajkumar: ‘ನಿಮಗೆ ಎಷ್ಟು ಬೇಜಾರು ಆಗುತ್ತಿದೆಯೋ ನನಗೂ ಅಷ್ಟೇ ಬೇಜಾರಾಗುತ್ತಿದೆ. ನಿಮ್ಮ ಶುಭಾಶಯಗಳನ್ನು ಸೋಶಿಯಲ್​ ಮೀಡಿಯಾ ಮೂಲಕವೇ ತಿಳಿಸಿ’ ಎಂದು ಶಿವರಾಜ್​ಕುಮಾರ್​ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

‘ನಾನು ಬೆಂಗಳೂರಲ್ಲಿ ಇರಲ್ಲ; ಬೇಜಾರು ಮಾಡ್ಕೋಬೇಡಿ’: ಶಿವಣ್ಣ ಮಹತ್ವದ ನಿರ್ಧಾರ
ಶಿವರಾಜ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Jul 07, 2021 | 12:21 PM

Share

ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಶಿವರಾಜ್​ಕುಮಾರ್​ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸೋಕೆ ಲಕ್ಷಾಂತರ ಅಭಿಮಾನಿಗಳು ಕಾದಿದ್ದಾರೆ. ಆದರೆ ಈ ಬಾರಿ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳೋದಿಲ್ಲ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ಅವರ ಈ ಮಹತ್ವದ ನಿರ್ಧಾರಕ್ಕೆ ಕೊರೊನಾ ಕಾರಣ. ಜು.12ರಂದು ಶಿವಣ್ಣನ ಜನ್ಮದಿನ. ಆದರೆ ಅಂದು ತಾವು ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಮುಂಚಿತವಾಗಿಯೇ ಅಭಿಮಾನಿಗಳಿಗೆ ಅವರು ಮಾಹಿತಿ ನೀಡಿದ್ದಾರೆ. ಎಲ್ಲರೂ ಸೇಫ್​ ಆಗಿ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ವಿಡಿಯೋ ಪೋಸ್ಟ್​ ಮಾಡುವ ಮೂಲಕ ಶಿವಣ್ಣ ಮಾಹಿತಿ ನೀಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನನ್ನ ಹುಟ್ಟುಹಬ್ಬಕ್ಕಿಂತಲೂ ನಿಮ್ಮೆಲ್ಲರ ಆರೋಗ್ಯ ನನಗೆ ಮುಖ್ಯ. ದೇವರ ದಯೆಯಿಂದ ಕೊರೊನಾ ಕಡಿಮೆ ಆಗಿದೆ. ಹಾಗಂತ ನಾವು ಎಚ್ಚರಿಕೆಯಿಂದ ಇರಬೇಕಾದ ಸಮಯ ಇನ್ನೂ ಮುಗಿದಿಲ್ಲ. ಮುಂದೆ ಇನ್ನೂ ಎಚ್ಚರಿಕೆಯಿಂದ ಇರಬೇಕು’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

‘ಜು.12 ನಾನು ಹುಟ್ಟಿದ ದಿನ. ಕೆಲವು ಕಾರಣದಿಂದ ನಾನು ಬೆಂಗಳೂರಲ್ಲಿ ಇರುವುದಿಲ್ಲ. ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ. ನಿಮಗೆ ಎಷ್ಟು ಬೇಜಾರು ಆಗುತ್ತಿದೆಯೋ ನನಗೂ ಅಷ್ಟೇ ಬೇಜಾರಾಗುತ್ತಿದೆ. ನಿಮ್ಮ ಶುಭಾಶಯಗಳನ್ನು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿ. ಯಾಕೆಂದರೆ, ನಿಮ್ಮೆಲ್ಲರ ಹಾರೈಕೆ, ಪ್ರೀತಿ, ಪ್ರೋತ್ಸಾಹ ನನಗೆ ಯಾವಾಗಲೂ ಇರಬೇಕು. ಅದನ್ನೇ ನಾನು ಬಯಸೋದು’ ಎಂದು ‘ಹ್ಯಾಟ್ರಿಕ್​ ಹೀರೋ’ ಹೇಳಿದ್ದಾರೆ.

‘ಕೊರೊನಾ ನಿಯಂತ್ರಿಸೋಕೆ ಇರುವ ನಿಯಮಗಳನ್ನು ದಯವಿಟ್ಟು ಎಲ್ಲರೂ ಪಾಲನೆ ಮಾಡಿ. ಎಲ್ಲಿ ಹೋದರೂ ಮಾಸ್ಕ್​ ಹಾಕಿಕೊಳ್ಳಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಲಸಿಕೆ ಪಡೆದುಕೊಳ್ಳಿ. ಈ ಮಾತನ್ನು ಮರೆಯಬೇಡಿ. ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ ಎಂದು ಮತ್ತೆ ಮತ್ತೆ ಕೇಳಿಕೊಳ್ಳುತ್ತಿದ್ದೇನೆ. ಆದಷ್ಟು ಬೇಗ ಕೊರೊನಾ ಕಡಿಮೆ ಆಗಿ, ನಾವೆಲ್ಲರೂ ಸೇರುವಂತೆ ಆಗಲಿ ಎಂದು ಆ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳೋಣ. ಮನೆಯಲ್ಲಿರಿ, ಸೇಫ್​ ಆಗಿರಿ. ಎಲ್ಲರೂ ಸೇಫ್​ ಆಗಿರುವಂತೆ ನೋಡಿಕೊಳ್ಳಿ’ ಎಂದು ಶಿವಣ್ಣ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ

ಗ್ಲೆನ್​ ಮ್ಯಾಕ್ಸ್​​ವೆಲ್​​ಗೆ ಗೊತ್ತು ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್​; ಶಿವಣ್ಣನ ಬಗ್ಗೆ ಮ್ಯಾಕ್ಸಿ ಹೇಳಿದ್ದೇನು?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು