Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​

‘ಬೈರಾಗಿ’ ಚಿತ್ರದಲ್ಲಿನ ಶಿವಣ್ಣನ ಹುಲಿ ವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಆಟೋ ಹಾಗೂ ಕಾರುಗಳ ಮೇಲೆ ಈ ಪೋಸ್ಟರ್ ರಾರಾಜಿಸುತ್ತಿವೆ. ಇದು ಚಿತ್ರತಂಡಕ್ಕೆ ಸಂತಸ ತಂದಿದೆ.

ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​
ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್
Follow us
TV9 Web
| Updated By: ಮದನ್​ ಕುಮಾರ್​

Updated on: Aug 04, 2021 | 9:48 AM

ವಯಸ್ಸು 60 ಸಮೀಪಿಸುತ್ತಿದ್ದರೂ ನಟ ಶಿವರಾಜ್​ಕುಮಾರ್ (Shivarajkumar)​ ಅವರ ಎನರ್ಜಿ ಲೆವೆಲ್​ ಕಿಂಚಿತ್ತೂ ಕಡಿಮೆ ಆಗಿಲ್ಲ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತ ಅವರು ಇಂದಿನ ಯುವ ನಟರಿಗೆ ಖಡಕ್ ಪೈಪೋಟಿ ನೀಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಕೈಯಲ್ಲಿ ಈಗ ಹಲವು ಚಿತ್ರಗಳಿವೆ. ಅವುಗಳಲ್ಲಿ ‘ಬೈರಾಗಿ’ (Bairagee) ಚಿತ್ರ ಗಮನ ಸೆಳೆಯುತ್ತಿದೆ. ಇದು ಶಿವರಾಜ್​ಕುಮಾರ್​ ನಟನೆಯ 123ನೇ ಸಿನಿಮಾ ಎಂಬುದು ವಿಶೇಷ. ಈ ವರ್ಷ ಶಿವಣ್ಣನ ಜನ್ಮದಿನದ ಪ್ರಯುಕ್ತ ಈ ಚಿತ್ರದ ಟೈಟಲ್ ಮತ್ತು ಫಸ್ಟ್​ಲುಕ್​ (Bairagee First Look) ಬಿಡುಗಡೆ ಆಗಿತ್ತು. ಹುಲಿವೇಷದಲ್ಲಿ ಅವರು ಕಾಣಿಸಿಕೊಂಡಿದ್ದರು. ಅಭಿಮಾನಿಗಳಿಗೆ ಈ ಲುಕ್​ ಸಖತ್​ ಇಷ್ಟವಾಗಿದೆ. ಅಲ್ಲದೆ, ಚಿತ್ರತಂಡದ ಕಡೆಯಿಂದ ಈಗೊಂದು ಅಪ್​ಡೇಟ್​ ಸಿಕ್ಕಿದೆ. ‘ಬೈರಾಗಿ’ ಚಿತ್ರದ ಕೆಲಸಗಳು ತುಂಬ ಚುರುಕಿನಿಂದ ನಡೆಯುತ್ತಿವೆ.

ಈಗಾಗಲೇ ಮಾತಿನ ಭಾಗದ ಚಿತ್ರೀಕರಣವನ್ನು ತಂಡ ಮುಗಿಸಿಕೊಂಡಿದೆ. ಬಾಕಿ ಉಳಿದುಕೊಂಡಿರುವ ಹಾಡಿನ ಚಿತ್ರೀಕರಣಕ್ಕೆ ಸದ್ಯದಲ್ಲೇ ಮೈಸೂರಿಗೆ ತೆರಳಲಿದೆ ‘ಬೈರಾಗಿ’ ತಂಡ. ಕಾಲಿವುಡ್​ನ ಜನಪ್ರಿಯ ಛಾಯಾಗ್ರಾಹಕ ಕಮ್ ನಿರ್ದೇಶಕ ವಿಜಯ್ ಮಿಲ್ಟನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿರುವುದು ವಿಶೇಷ. ನೂರಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರು ಹಲವು ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಪೈಕಿ ಹುಲಿವೇಷದ ಲುಕ್​ ಕೂಡ ಪ್ರಮುಖವಾದದ್ದು.

ಜು.12ರಂದು ಶಿವರಾಜ್​ಕುಮಾರ್​ ಜನ್ಮದಿನವಿತ್ತು. ಆದರೆ ಕೊರೊನಾ ಕಾಟದ ಹಿನ್ನೆಲೆಯಲ್ಲಿ ಅವರು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ಆದರೂ ಬರ್ತ್​ಡೇ ಸಂಭ್ರಮವನ್ನು ಹೆಚ್ಚಿಸಲು ‘ಬೈರಾಗಿ’ ತಂಡದಿಂದ ಫಸ್ಟ್​ಲುಕ್​ ಬಿಡುಗಡೆ ಆಗಿತ್ತು. ಟೈಟಲ್ ಹಾಗೂ ಲುಕ್ ಕಂಡು ಅಭಿಮಾನಿಗಳು ಬೆರಗಾಗಿದ್ದಾರೆ. ಹುಲಿ ವೇಷ, ಹೇರ್ ಸ್ಟೈಲ್ ಹಾಗೂ ಅವರ ಡಿಫರೆಂಟ್ ಕಾಸ್ಟ್ಯೂಮ್​ಗೆ ಫ್ಯಾನ್ಸ್ ಫಿದಾ ಆಗಿರುವುದು ಚಿತ್ರತಂಡಕ್ಕೆ ಸಂತಸ ತಂದಿದೆ. ಶಿವಣ್ಣನ ಹುಲಿ ವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಆಟೋ ಹಾಗೂ ಕಾರುಗಳ ಮೇಲೆ ಈ ಪೋಸ್ಟರ್ ರಾರಾಜಿಸುತ್ತಿವೆ. ಟೀಸರ್​ನಲ್ಲಿ ಅನೂಪ್ ಸೀಳಿನ್ ಸಂಗೀತಕ್ಕೂ ಮೆಚ್ಚುಗೆ ಕೇಳಿಬಂದಿದೆ.

ಈ ಸಿನಿಮಾದಲ್ಲಿ ಡಾಲಿ ಧನಂಜಯ ಅವರು ಶಿವರಾಜ್​ಕುಮಾರ್​ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ‘ಟಗರು’ ಸಿನಿಮಾದ ಯಶಸ್ಸಿನ ಬಳಿಕ ಇವರಿಬ್ಬರು ಮತ್ತೆ ಒಂದಾಗಿ ನಟಿಸುತ್ತಿರುವುದರಿಂದ ಅಭಿಮಾನಿಗಳ ಮನದಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ. ಶಿವರಾಜ್​ಕುಮಾರ್​ ರೀತಿಯೇ ಧನಂಜಯ ಕೂಡ ಬೇರೆ ಬೇರೆ ಗೆಟಪ್​ನಲ್ಲಿ ಮೋಡಿ ಮಾಡಲಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ನಟಿ ಅಂಜಲಿ ಈ ಚಿತ್ರಕ್ಕೆ ನಾಯಕಿ. ಕಳೆದ ವರ್ಷ ಸೂಪರ್​ ಹಿಟ್​ ಆದ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬರ್ ಕೂಡ ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿಭಾಯಿಸಲ್ಲಿದ್ದಾರೆ. ಹಿರಿಯ ನಟ ಶಶಿಕುಮಾರ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ಅದ್ದೂರಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ಸಾಕಷ್ಟು ನುರಿತ ಕಲಾವಿದರಿದ್ದಾರೆ.

ಇದನ್ನೂ ಓದಿ:

ಮೈಸೂರಿನಲ್ಲಿ ಶಿವರಾಜ್​ಕುಮಾರ್​-ಕೆಎಸ್​ ಈಶ್ವರಪ್ಪ ದಿಢೀರ್ ಭೇಟಿ; ಇಲ್ಲಿದೆ ಕಾರಣ

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?