AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bairagee: ಯಾವೆಲ್ಲ ಊರಿಗೆ ಬರ್ತಾರೆ ಶಿವಣ್ಣ-ಡಾಲಿ? ಇಲ್ಲಿದೆ ‘ಬೈರಾಗಿ’ ಯಾತ್ರೆಯ ರೂಟ್​ ಮ್ಯಾಪ್​

Shivarajkumar | Bairagee: ಬೆಂಗಳೂರಿನಿಂದ ಚಾಮರಾಜನಗರಕ್ಕೆ ‘ಬೈರಾಗಿ’ ಚಿತ್ರತಂಡದ ಯಾತ್ರೆ ಹೊರಟಿದೆ. ಪ್ರೀ-ರಿಲೀಸ್​ ಇವೆಂಟ್​ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Bairagee: ಯಾವೆಲ್ಲ ಊರಿಗೆ ಬರ್ತಾರೆ ಶಿವಣ್ಣ-ಡಾಲಿ? ಇಲ್ಲಿದೆ ‘ಬೈರಾಗಿ’ ಯಾತ್ರೆಯ ರೂಟ್​ ಮ್ಯಾಪ್​
ಶಿವರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Jun 24, 2022 | 1:41 PM

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಮಾಡುತ್ತಿರುವ ನಟ ಶಿವರಾಜ್​ಕುಮಾ​ರ್​ (Shivarajkumar) ಅವರು ಸದ್ಯ ‘ಬೈರಾಗಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರತಂಡ ಬೆಂಗಳೂರಿನಿಂದ ಚಾಮರಾಜನಗರಕ್ಕೆ ಯಾತ್ರೆ ಹೊರಟಿದೆ. ಶಿವರಾಜ್​ಕುಮಾರ್​ ಅವರ ಜೊತೆಗೆ ಡಾಲಿ ಧನಂಜಯ (Daali Dhananjaya), ಪೃಥ್ವಿ ಅಂಬಾರ್​ ಸೇರಿದಂತೆ ಚಿತ್ರತಂಡದ ಹಲವರು ಈ ಯಾತ್ರೆಯಲ್ಲಿ ಭಾಗಿ ಆಗುತ್ತಿದ್ದಾರೆ. ಶಿವಣ್ಣ ಯಾವಾಗಲೂ ನಿರ್ಮಾಪಕರ ಪರವಾಗಿ ನಿಲ್ಲುತ್ತಾರೆ. ತಮ್ಮ ಸಿನಿಮಾದ ಪ್ರಚಾರಕ್ಕೆ ಸಾಕಷ್ಟು ಸಮಯ ನೀಡುತ್ತಾರೆ. ಅದೇ ರೀತಿ ಅವರು ಈಗ ‘ಬೈರಾಗಿ’ (Bairagee) ಸಿನಿಮಾದ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜುಲೈ 1ರಂದು ಈ ಚಿತ್ರ ಬಿಡುಗಡೆ ಆಗಲಿದ್ದು, ಈಗಾಗಲೇ ಸಖತ್​ ನಿರೀಕ್ಷೆ ಸೃಷ್ಟಿ ಮಾಡಿದೆ.

ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ‘ಬೈರಾಗಿ’ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್​ಕುಮಾರ್​ ಅವರು ರೂಟ್​ ಮ್ಯಾಪ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಗಮಧ್ಯದಲ್ಲಿ ಯಾವೆಲ್ಲ ಊರುಗಳಿಗೆ ತೆರಳಲಿದ್ದೇವೆ ಎಂಬುದನ್ನು ಅವರು ತಿಳಿಸಿದ್ದಾರೆ. ಅಭಿಮಾನಿಗಳನ್ನು ಭೇಟಿ ಮಾಡಲು ಇಡೀ ತಂಡ ಎಗ್ಸೈಟ್​ ಆಗಿದೆ. ಶಿವಣ್ಣನ ಜೊತೆ ಪ್ರಯಾಣ ಮಾಡುತ್ತಿರುವುದಕ್ಕೆ ಡಾಲಿ ಧನಂಜಯ, ಪೃಥ್ವಿ ಅಂಬಾರ್​ ಸಖತ್​ ಖುಷಿ ಆಗಿದ್ದಾರೆ.

‘ಬೆಂಗಳೂರಿನಿಂದ ಬಿಡದಿ, ರಾಮನಗರ, ಚೆನ್ನಪಟ್ಟಣ, ಮದ್ದೂರು ಮಂಡ್ಯ ಮೂಲಕ ಮೈಸೂರಿಗೆ ತೆರಳುತ್ತೇವೆ. ಮೈಸೂರಿನಲ್ಲಿ ಇಂದು (ಜೂನ್ 24) ಸಂಜೆ ಸುದ್ದಿಗೋಷ್ಠಿ ಇದೆ. ನಾಳೆ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಹೋಗುತ್ತೇವೆ. ನಂತರ ನಂಜನಗೂಡು ಮುಗಿಸಿಕೊಂಡು ಗಾಜನೂರಿಗೆ ಹೋಗುತ್ತೇವೆ. ಅಲ್ಲಿಯೇ ಮಧ್ಯಾಹ್ನ ಊಟ ಇದೆ. ಅದಾದ ಬಳಿಕ ಸಂಜೆ ಚಾಮರಾಜನಗರದಲ್ಲಿ ಪ್ರೀ-ರಿಲೀಸ್​ ಇವೆಂಟ್​ ಇರಲಿದೆ’ ಎಂದು ಶಿವಣ್ಣ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ
Image
ಶಿವರಾಜ್​​ಕುಮಾರ್ ಅವರನ್ನು ಬಾಯ್ತುಂಬ ಹೊಗಳಿದ ಅನುಶ್ರೀ; ಶಿವಣ್ಣನ ರಿಯಾಕ್ಷನ್ ಹೇಗಿತ್ತು ನೋಡಿ
Image
‘ನಾವು ಬೇರೆ ಭಾಷೆಯಲ್ಲಿ ಮಾತಾಡ್ತೀವಿ, ಅದು ಯಾವುದು ಅಂತ ಈಗ ಬೇಡ’: ವೇದಿಕೆಯಲ್ಲಿ ಶಿವಣ್ಣ ಮನದ ಮಾತು
Image
ರಜನಿಕಾಂತ್ ಜತೆ ಶಿವಣ್ಣ ನಟನೆ; ವಿಷಯ ಖಚಿತಪಡಿಸಿ ಹೊಸ ಅಪ್​ಡೇಟ್ ನೀಡಿದ ಶಿವರಾಜ್​ಕುಮಾರ್

ಗಾಜನೂರಿಗೆ ಭೇಟಿ ನೀಡುತ್ತಿರುವುದು ಧನಂಜಯ ಅವರಿಗೆ ಹೆಚ್ಚು ಸಂತಸ ತಂದಿದೆ. ಇದೇ ಮೊದಲ ಬಾರಿಗೆ ಅವರು ಡಾ. ರಾಜ್​ಕುಮಾರ್​ ಹುಟ್ಟೂರಿಗೆ ತೆರಳುತ್ತಿದ್ದಾರೆ. ಶಿವರಾಜ್​ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’. ಈ ಚಿತ್ರಕ್ಕೆ ವಿಜಯ್​ ಮಿಲ್ಟನ್​ ನಿರ್ದೇಶನ ಮಾಡಿದ್ದು, ಕೃಷ್ಣ ಸಾರ್ಥಕ್​ ನಿರ್ಮಾಣ ಮಾಡಿದ್ದಾರೆ. ಅನೂಪ್​​ ಸೀಳಿನ್​ ಸಂಗೀತ ನೀಡಿದ್ದಾರೆ. ಯಶಾ ಶಿವಕುಮಾರ್​, ಅಂಜಲಿ, ಶಶಿಕುಮಾರ್​ ಕೂಡ ನಟಿಸಿದ್ದಾರೆ.

ಇದನ್ನೂ ಓದಿ: ಜುಲೈ 1ಕ್ಕೆ ‘ಬೈರಾಗಿ’ ರಿಲೀಸ್​; ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ಶಿವಣ್ಣ ಸಿನಿಮಾದ ಟಿವಿ​ ರೈಟ್ಸ್​

Bairagee Movie: ಶಿವಣ್ಣ, ಶರಣ್​ ಕಂಠದಲ್ಲಿ ‘ರಿದಂ ಆಫ್​ ಶಿವಪ್ಪ’ ಹಾಡು; ಹೊಸ ಸಾಂಗ್​ ಮೂಲಕ ಹೈಪ್​ ಹೆಚ್ಚಿಸಿದ ‘ಬೈರಾಗಿ’

Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ