AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು

ಗೀತಾ ಶಿವರಾಜ್​ಕುಮಾರ್​ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವರಾಜ್​ಕುಮಾರ್​ ಅವರು ಈ ಸಹಾಯ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ. ನೀಡಲಾಗಿದೆ.

ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್​ಕುಮಾರ್​; 10 ಲಕ್ಷ ರೂ. ನೆರವು
ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 22, 2021 | 4:06 PM

Share

ಕೊರೊನಾ ವೈರಸ್​ ಹಾವಳಿಯಿಂದಾಗಿ ಎಲ್ಲ ಕ್ಷೇತ್ರಗಳೂ ತತ್ತರಿಸಿವೆ. ಪ್ರತಿದಿನದ ದುಡಿಮೆಯನ್ನು ನಂಬಿಕೊಂಡಿದ್ದ ದೊಡ್ಡ ಶ್ರಮಿಕ ವರ್ಗಕ್ಕೆ ಕಷ್ಟ ಆಗಿದೆ. ಜೀವನೋಪಾಯಕ್ಕಾಗಿ ನಿತ್ಯ ಕೆಲಸ ಮಾಡುತ್ತಿದ್ದವರು ಲಾಕ್​ಡೌನ್​ ಕಾರಣದಿಂದ ತಿಂಗಳುಗಟ್ಟಲೆ ಮನೆಯಲ್ಲೇ ಕೈ ಕಟ್ಟಿ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಸಿನಿಮಾ ಕ್ಷೇತ್ರದ ಕಾರ್ಮಿಕರು ಈ ಸಮಸ್ಯೆ ಎದುರಿಸಿದ್ದಾರೆ. ಅಂಥ ಕಾರ್ಮಿಕರ ಸಹಾಯಕ್ಕೆ ಈಗ ಶಿವರಾಜ್​ಕುಮಾರ್​ ಧಾವಿಸಿದ್ದಾರೆ. ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ‘ಹ್ಯಾಟ್ರಿಕ್​ ಹೀರೋ’ ಶಿವಣ್ಣ 10 ಲಕ್ಷ ರೂ. ನೀಡಿದ್ದಾರೆ.

ಗೀತಾ ಶಿವರಾಜ್​ಕುಮಾರ್​ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವರಾಜ್​ಕುಮಾರ್​ ಅವರು ಈ ಸಹಾಯ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ. ನೀಡಲಾಗಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್​, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮುಂತಾದವರ ಸಮ್ಮುಖದಲ್ಲಿ ಚೆಕ್​ ಹಸ್ತಾಂತರಿಸಲಾಯಿತು.

ಸ್ಯಾಂಡಲ್​ವುಡ್​ನ ಚಿರಯುವಕ ಶಿವರಾಜ್​ಕುಮಾರ್​ ಅವರ ಕೈಯಲ್ಲಿ ಈಗಲೂ ಹಲವಾರು ಸಿನಿಮಾಗಳಿಗೆ. ಬಹುಬೇಡಿಕೆಯ ನಟನಾಗಿ ಚಾರ್ಮ್​ ಉಳಿಸಿಕೊಂಡಿರುವ ಅವರು ಸದ್ಯ ಭಜರಂಗಿ 2, ವೇದ, ಶಿವಪ್ಪ ಮುಂತಾದ ಚಿತ್ರಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಲಾಕ್​ಡೌನ್​ ತೆರವುಗೊಂಡಿದ್ದು, ಹೊರಾಂಗಣ ಚಿತ್ರೀಕರಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಒಳಾಂಗಣ ಶೂಟಿಂಗ್​ಗೆ ಅನುಮತಿ ನೀಡಬೇಕು ಎಂದು ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್​ ಬಣಕಾರ್​ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ನಟ ಪುನೀತ್​ ರಾಜ್​ಕುಮಾರ್​ ಅವರು ಕೂಡ ಹತ್ತು ಲಕ್ಷ ರೂ. ಧನಸಹಾಯ ಮಾಡಿದ್ದರು. ಅದೇ ರೀತಿ ಚಿತ್ರರಂಗದ ಅನೇಕರು ಈ ಕಷ್ಟದ ಪರಿಸ್ಥಿತಿಯಲ್ಲಿ ಕಾರ್ಮಿಕರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯ ವಿಜಯ್​ ಕಿರಗಂದೂರು ಅವರು ಕನ್ನಡ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಒಕ್ಕೂಟದ ಸುಮಾರು 3200ಕ್ಕೂ ಅಧಿಕ ಮಂದಿಗೆ ಧನಸಹಾಯ ಮಾಡಿದ್ದರು. ಉಪೇಂದ್ರ, ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಸೇರಿದಂತೆ ಹಲವರು ಜನಪರ ಕಾರ್ಯ ಮಾಡುತ್ತಿದ್ದಾರೆ.  ನಟ ಯಶ್​ ಕೂಡ ಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರಿಗೆ ತಲಾ 5 ಸಾವಿರ ರೂಪಾಯಿ ನೀಡುವ ಮೂಲಕ ಸಹಾಯ ಮಾಡಿದ್ದರು.

ಇದನ್ನೂ ಓದಿ:

ಶಿವರಾಜ್​ಕುಮಾರ್​-ಸುಧಾರಾಣಿ ‘ಆನಂದ್’​ ಚಿತ್ರಕ್ಕೆ 35 ವರ್ಷ; ಅಪರೂಪದ ಫೋಟೋ ಹಂಚಿಕೊಂಡ ನಟಿ

550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್