ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಶಿವರಾಜ್​ಕುಮಾರ್ ಅವರಿಗೆ ತಮಟೆ, ವಾದ್ಯಗಳ ಬಾರಿಸಿ ಎಂಟ್ರಿ ಕೊಡಿಸಲಾಗಿದೆ. ಎಲ್ಲರೂ ಶಿವಣ್ಣ ಅವರ ಮುಖವಾಡ ಧರಿಸಿದ್ದರು. ಶಿವರಾಜ್​ಕುಮಾರ್​ಗೆ ಹಾರ ಹಾಕಿ ಸ್ವಾಗತ ಕೋರಲಾಗಿದೆ. ‘ಕೆಆರ್​ಜಿ ಕನೆಕ್ಟ್ಸ್’ ಮೂಲಕ ಈ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ವಿಡಿಯೋ ಭರ್ಜರಿ ವೀವ್ಸ್ ಪಡೆದಿದೆ.

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ
ಶಿವಣ್ಣ
Follow us
|

Updated on:May 24, 2024 | 12:15 PM

ನಟ ಶಿವರಾಜ್​ಕುಮಾರ್​ಗೆ (Shivarajkumar) ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ ಸೆಟ್​ಗೆ ಬಂದರೆ ಅದ್ದೂರಿ ಸ್ವಾಗತ ಸಿಗುತ್ತದೆ. ಈಗ ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಸಿನಿಮಾ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರನ್ನು ತಂಡದವರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ನಿರ್ಮಾಪಕರಾದ ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಹಾಗೂ ನಟ ಡಾಲಿ ಧನಂಜಯ್ ಅವರು ‘ರತ್ನನ್ ಪ್ರಪಂಚ’ ಹಾಗೂ ‘ಗುರುದೇವ ಹೊಯ್ಸಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಉತ್ತರಕಾಂಡ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗುತ್ತಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್, ಧನಂಜಯ್ ಜೊತೆಗೆ ಐಶ್ವರ್ಯಾ ರಾಜೇಶ್, ರಂಗಾಯಣ ರಘು, ಯೋಗರಾಜ್ ಭಟ್ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರದ ಸೆಟ್​ಗೆ ಶಿವಣ್ಣ ಎಂಟ್ರಿ ಕೊಟ್ಟಿದ್ದು, ಅದ್ದೂರಿ ಸ್ವಾಗತ ಸಿಕ್ಕಿದೆ.

ಶಿವರಾಜ್​ಕುಮಾರ್ ಅವರಿಗೆ ತಮಟೆ, ವಾದ್ಯಗಳ ಬಾರಿಸಿ ಎಂಟ್ರಿ ಕೊಡಿಸಲಾಗಿದೆ. ಎಲ್ಲರೂ ಶಿವಣ್ಣ ಅವರ ಮುಖವಾಡ ಧರಿಸಿದ್ದರು. ಶಿವರಾಜ್​ಕುಮಾರ್​ಗೆ ಹಾರ ಹಾಕಿ ಸ್ವಾಗತ ಕೋರಲಾಗಿದೆ. ‘ಕೆಆರ್​ಜಿ ಕನೆಕ್ಟ್ಸ್’ ಮೂಲಕ ಈ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ವಿಡಿಯೋ ಭರ್ಜರಿ ವೀವ್ಸ್ ಪಡೆದಿದೆ. ರೋಹಿತ್ ಪದಕಿ ಅವರು ‘ಉತ್ತರಕಾಂಡ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಸಂಪೂರ್ಣ ಕಥೆ ಉತ್ತರ ಕರ್ನಾಟಕದ ಭಾಗದಲ್ಲಿ ಶೂಟ್ ಆಗಲಿದೆ. ಚರಣ್ ರಾಜ್ ಅವರ ಸಂಗೀತ ಸಂಯೋಜನೆ, ಸ್ವಾಮಿ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕೆ ಇರಲಿದೆ. ‘ಉತ್ತರಕಾಂಡ’ ಚಿತ್ರದ ಶೀರ್ಷಿಕೆ ವಿನ್ಯಾಸ ಮತ್ತು ಪೋಸ್ಟರ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ‘ಒಳ್ಳೆಯ ಅಂತರದಲ್ಲಿ ಗೀತಾ ಶಿವರಾಜ್​ಕುಮಾರ್​ ಗೆಲ್ಲುತ್ತಾರೆ’: ಭವಿಷ್ಯ ನುಡಿದ ಎಸ್​. ನಾರಾಯಣ್​

ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಶಿವಣ್ಣ ಅವರು ಇಷ್ಟು ದಿನ ಅಲ್ಲಿ ಪ್ರಚಾರ ಮಾಡುತ್ತಿದ್ದರು. ಈಗ ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Fri, 24 May 24

ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?