AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಶಿವರಾಜ್​ಕುಮಾರ್ ಅವರಿಗೆ ತಮಟೆ, ವಾದ್ಯಗಳ ಬಾರಿಸಿ ಎಂಟ್ರಿ ಕೊಡಿಸಲಾಗಿದೆ. ಎಲ್ಲರೂ ಶಿವಣ್ಣ ಅವರ ಮುಖವಾಡ ಧರಿಸಿದ್ದರು. ಶಿವರಾಜ್​ಕುಮಾರ್​ಗೆ ಹಾರ ಹಾಕಿ ಸ್ವಾಗತ ಕೋರಲಾಗಿದೆ. ‘ಕೆಆರ್​ಜಿ ಕನೆಕ್ಟ್ಸ್’ ಮೂಲಕ ಈ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ವಿಡಿಯೋ ಭರ್ಜರಿ ವೀವ್ಸ್ ಪಡೆದಿದೆ.

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on:May 24, 2024 | 12:15 PM

Share

ನಟ ಶಿವರಾಜ್​ಕುಮಾರ್​ಗೆ (Shivarajkumar) ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ ಸೆಟ್​ಗೆ ಬಂದರೆ ಅದ್ದೂರಿ ಸ್ವಾಗತ ಸಿಗುತ್ತದೆ. ಈಗ ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಸಿನಿಮಾ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರನ್ನು ತಂಡದವರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ನಿರ್ಮಾಪಕರಾದ ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಹಾಗೂ ನಟ ಡಾಲಿ ಧನಂಜಯ್ ಅವರು ‘ರತ್ನನ್ ಪ್ರಪಂಚ’ ಹಾಗೂ ‘ಗುರುದೇವ ಹೊಯ್ಸಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಉತ್ತರಕಾಂಡ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗುತ್ತಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್, ಧನಂಜಯ್ ಜೊತೆಗೆ ಐಶ್ವರ್ಯಾ ರಾಜೇಶ್, ರಂಗಾಯಣ ರಘು, ಯೋಗರಾಜ್ ಭಟ್ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರದ ಸೆಟ್​ಗೆ ಶಿವಣ್ಣ ಎಂಟ್ರಿ ಕೊಟ್ಟಿದ್ದು, ಅದ್ದೂರಿ ಸ್ವಾಗತ ಸಿಕ್ಕಿದೆ.

ಶಿವರಾಜ್​ಕುಮಾರ್ ಅವರಿಗೆ ತಮಟೆ, ವಾದ್ಯಗಳ ಬಾರಿಸಿ ಎಂಟ್ರಿ ಕೊಡಿಸಲಾಗಿದೆ. ಎಲ್ಲರೂ ಶಿವಣ್ಣ ಅವರ ಮುಖವಾಡ ಧರಿಸಿದ್ದರು. ಶಿವರಾಜ್​ಕುಮಾರ್​ಗೆ ಹಾರ ಹಾಕಿ ಸ್ವಾಗತ ಕೋರಲಾಗಿದೆ. ‘ಕೆಆರ್​ಜಿ ಕನೆಕ್ಟ್ಸ್’ ಮೂಲಕ ಈ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ವಿಡಿಯೋ ಭರ್ಜರಿ ವೀವ್ಸ್ ಪಡೆದಿದೆ. ರೋಹಿತ್ ಪದಕಿ ಅವರು ‘ಉತ್ತರಕಾಂಡ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಸಂಪೂರ್ಣ ಕಥೆ ಉತ್ತರ ಕರ್ನಾಟಕದ ಭಾಗದಲ್ಲಿ ಶೂಟ್ ಆಗಲಿದೆ. ಚರಣ್ ರಾಜ್ ಅವರ ಸಂಗೀತ ಸಂಯೋಜನೆ, ಸ್ವಾಮಿ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕೆ ಇರಲಿದೆ. ‘ಉತ್ತರಕಾಂಡ’ ಚಿತ್ರದ ಶೀರ್ಷಿಕೆ ವಿನ್ಯಾಸ ಮತ್ತು ಪೋಸ್ಟರ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ‘ಒಳ್ಳೆಯ ಅಂತರದಲ್ಲಿ ಗೀತಾ ಶಿವರಾಜ್​ಕುಮಾರ್​ ಗೆಲ್ಲುತ್ತಾರೆ’: ಭವಿಷ್ಯ ನುಡಿದ ಎಸ್​. ನಾರಾಯಣ್​

ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಶಿವಣ್ಣ ಅವರು ಇಷ್ಟು ದಿನ ಅಲ್ಲಿ ಪ್ರಚಾರ ಮಾಡುತ್ತಿದ್ದರು. ಈಗ ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Fri, 24 May 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ