Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಶಿವರಾಜ್​ಕುಮಾರ್ ಅವರಿಗೆ ತಮಟೆ, ವಾದ್ಯಗಳ ಬಾರಿಸಿ ಎಂಟ್ರಿ ಕೊಡಿಸಲಾಗಿದೆ. ಎಲ್ಲರೂ ಶಿವಣ್ಣ ಅವರ ಮುಖವಾಡ ಧರಿಸಿದ್ದರು. ಶಿವರಾಜ್​ಕುಮಾರ್​ಗೆ ಹಾರ ಹಾಕಿ ಸ್ವಾಗತ ಕೋರಲಾಗಿದೆ. ‘ಕೆಆರ್​ಜಿ ಕನೆಕ್ಟ್ಸ್’ ಮೂಲಕ ಈ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ವಿಡಿಯೋ ಭರ್ಜರಿ ವೀವ್ಸ್ ಪಡೆದಿದೆ.

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ
ಶಿವಣ್ಣ
Follow us
ರಾಜೇಶ್ ದುಗ್ಗುಮನೆ
|

Updated on:May 24, 2024 | 12:15 PM

ನಟ ಶಿವರಾಜ್​ಕುಮಾರ್​ಗೆ (Shivarajkumar) ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ ಸೆಟ್​ಗೆ ಬಂದರೆ ಅದ್ದೂರಿ ಸ್ವಾಗತ ಸಿಗುತ್ತದೆ. ಈಗ ಶಿವರಾಜ್​ಕುಮಾರ್ ಅವರು ‘ಉತ್ತರಕಾಂಡ’ ಸಿನಿಮಾ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರನ್ನು ತಂಡದವರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ನಿರ್ಮಾಪಕರಾದ ಕಾರ್ತಿಕ್​ ಗೌಡ, ಯೋಗಿ ಜಿ. ರಾಜ್​ ಹಾಗೂ ನಟ ಡಾಲಿ ಧನಂಜಯ್ ಅವರು ‘ರತ್ನನ್ ಪ್ರಪಂಚ’ ಹಾಗೂ ‘ಗುರುದೇವ ಹೊಯ್ಸಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರ ಕಾಂಬಿನೇಷನ್​ನಲ್ಲಿ ‘ಉತ್ತರಕಾಂಡ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗುತ್ತಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್, ಧನಂಜಯ್ ಜೊತೆಗೆ ಐಶ್ವರ್ಯಾ ರಾಜೇಶ್, ರಂಗಾಯಣ ರಘು, ಯೋಗರಾಜ್ ಭಟ್ ಮೊದಲಾದವರು ನಟಿಸುತ್ತಿದ್ದಾರೆ. ಈ ಚಿತ್ರದ ಸೆಟ್​ಗೆ ಶಿವಣ್ಣ ಎಂಟ್ರಿ ಕೊಟ್ಟಿದ್ದು, ಅದ್ದೂರಿ ಸ್ವಾಗತ ಸಿಕ್ಕಿದೆ.

ಶಿವರಾಜ್​ಕುಮಾರ್ ಅವರಿಗೆ ತಮಟೆ, ವಾದ್ಯಗಳ ಬಾರಿಸಿ ಎಂಟ್ರಿ ಕೊಡಿಸಲಾಗಿದೆ. ಎಲ್ಲರೂ ಶಿವಣ್ಣ ಅವರ ಮುಖವಾಡ ಧರಿಸಿದ್ದರು. ಶಿವರಾಜ್​ಕುಮಾರ್​ಗೆ ಹಾರ ಹಾಕಿ ಸ್ವಾಗತ ಕೋರಲಾಗಿದೆ. ‘ಕೆಆರ್​ಜಿ ಕನೆಕ್ಟ್ಸ್’ ಮೂಲಕ ಈ ವಿಡಿಯೋ ರಿಲೀಸ್ ಮಾಡಲಾಗಿದೆ. ಈ ವಿಡಿಯೋ ಭರ್ಜರಿ ವೀವ್ಸ್ ಪಡೆದಿದೆ. ರೋಹಿತ್ ಪದಕಿ ಅವರು ‘ಉತ್ತರಕಾಂಡ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಸಂಪೂರ್ಣ ಕಥೆ ಉತ್ತರ ಕರ್ನಾಟಕದ ಭಾಗದಲ್ಲಿ ಶೂಟ್ ಆಗಲಿದೆ. ಚರಣ್ ರಾಜ್ ಅವರ ಸಂಗೀತ ಸಂಯೋಜನೆ, ಸ್ವಾಮಿ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕೆ ಇರಲಿದೆ. ‘ಉತ್ತರಕಾಂಡ’ ಚಿತ್ರದ ಶೀರ್ಷಿಕೆ ವಿನ್ಯಾಸ ಮತ್ತು ಪೋಸ್ಟರ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ‘ಒಳ್ಳೆಯ ಅಂತರದಲ್ಲಿ ಗೀತಾ ಶಿವರಾಜ್​ಕುಮಾರ್​ ಗೆಲ್ಲುತ್ತಾರೆ’: ಭವಿಷ್ಯ ನುಡಿದ ಎಸ್​. ನಾರಾಯಣ್​

ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಶಿವಣ್ಣ ಅವರು ಇಷ್ಟು ದಿನ ಅಲ್ಲಿ ಪ್ರಚಾರ ಮಾಡುತ್ತಿದ್ದರು. ಈಗ ಅವರು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Fri, 24 May 24

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್