‘ಇದನ್ನು ನೋಡೋಕೆ ಅಮ್ಮ ಇಲ್ಲ ಅಂತ ದುಃಖವಾಯ್ತು’; ‘ಘೋಸ್ಟ್​’ ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾವುಕ

ಶಿವರಾಜ್​ಕುಮಾರ್​ ಅವರ ವೃತ್ತಿಜೀವನ ತುಂಬ ಚೆನ್ನಾಗಿ ರೂಪುಗೊಳ್ಳುವಲ್ಲಿ ತಾಯಿ ಪಾರ್ವತಮ್ಮ ರಾಜ್​ಕುಮಾರ್​ ಅವರ ಕೊಡುಗೆ ಸಾಕಷ್ಟು ಇದೆ. ‘ಘೋಸ್ಟ್​’ ಸಿನಿಮಾದ ಟ್ರೇಲರ್​ ನೋಡಿದ ಬಳಿಕ ಎಲ್ಲರೂ ‘ಆನಂದ್​’ ಚಿತ್ರದ ಗೆಟಪ್​ ನೆನಪಿಸಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಮಾತನಾಡುವಾಗ ಶಿವಣ್ಣ ಕೊಂಚ ಎಮೋಷನಲ್​ ಆದರು.

‘ಇದನ್ನು ನೋಡೋಕೆ ಅಮ್ಮ ಇಲ್ಲ ಅಂತ ದುಃಖವಾಯ್ತು’; ‘ಘೋಸ್ಟ್​’ ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾವುಕ
ಶಿವರಾಜ್​ಕುಮಾರ್​, ಪಾರ್ವತಮ್ಮ ರಾಜ್​ಕುಮಾರ್​

Updated on: Oct 16, 2023 | 2:39 PM

ಅಕ್ಟೋಬರ್​ 19ಕ್ಕೆ ಶಿವರಾಜ್​ಕುಮಾರ್ಅಭಿಮಾನಿಗಳ ಪಾಲಿಗೆ ನಿಜಕ್ಕೂ ಹಬ್ಬ. ಅಂದು ‘ಘೋಸ್ಟ್​’ ಸಿನಿಮಾ (Ghost Movie) ಬಿಡುಗಡೆ ಆಗಲಿದೆ. ಈ ಬಹುನಿರೀಕ್ಷಿತ ಚಿತ್ರದ ಮೇಲೆ ಭರ್ಜರಿ ಹೈಪ್​ ಸೃಷ್ಟಿ ಆಗಿದೆ. ಅದಕ್ಕೆ ಹಲವಾರು ಕಾರಣಗಳಿವೆ. ನಿರ್ದೇಶಕ ಶ್ರೀನಿ ಅವರು ಶಿವರಾಜ್​ಕುಮಾರ್​ ಅವರನ್ನು ತುಂಬ ಸ್ಟೈಲಿಶ್​ ಆಗಿ ಈ ಚಿತ್ರದಲ್ಲಿ ತೋರಿಸಿದ್ದಾರೆ. ಅದರ ಝಲಕ್​ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಇಡೀ ಟ್ರೇಲರ್​ನಲ್ಲಿ ಹೆಚ್ಚು ಗಮನ ಸೆಳೆದಿದ್ದು ಶಿವರಾಜ್​ಕುಮಾರ್​ (Shivarajkumar) ಅವರ ಯಂಗ್​ ಗೆಟಪ್​. ಅದರ ಬಗ್ಗೆ ಫ್ಯಾನ್ಸ್​ ವಲಯದಲ್ಲಿ ಸಖತ್​ ಚರ್ಚೆ ಆಗುತ್ತಿದೆ. ದೊಡ್ಡ ಪರದೆಯಲ್ಲಿ ಆ ಲುಕ್​ ನೋಡಬೇಕು ಎಂಬ ಕಾರಣದಿಂದಲೇ ಅನೇಕರು ಕಾದಿದ್ದಾರೆ. ಅದೇ ಗೆಟಪ್​ ಬಗ್ಗೆ ಮಾತನಾಡುತ್ತ ಶಿವಣ್ಣ ಕೊಂಚ ಎಮೋಷನಲ್​ ಆಗಿದ್ದಾರೆ. ಈ ವೇಳೆ ಅವರು ಪಾರ್ವತಮ್ಮ ರಾಜ್​ಕುಮಾರ್ (Parvathamma Rajkumar)​ ಅವರನ್ನು ನೆನಪಿಸಿಕೊಂಡಿದ್ದಾರೆ.

‘ಘೋಸ್ಟ್​’ ಸಿನಿಮಾದ ಸುದ್ದಿಗೋಷ್ಠಿ ಭಾನುವಾರ (ಅ.16) ಸಂಜೆ ಶಿವರಾಜ್​ಕುಮಾರ್​ ಅವರ ನಿವಾಸದಲ್ಲಿ ​ನಡೆಯಿತು. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದರು. ಟ್ರೇಲರ್​ನಲ್ಲಿ ತಮ್ಮ ಯಂಗ್​ ಗೆಟಪ್​ಗೆ ಜನರಿಂದ ಭರ್ಜರಿ ಮೆಚ್ಚುಗೆ ಕೇಳಿಬಂದಿರುವುದರ ಬಗ್ಗೆಯೂ ಅವರು ತಮ್ಮ ಅನಿಸಿಕೆ ಹಂಚಿಕೊಂಡರು. ಈ ರೀತಿ ಕಾಣುವಂತೆ ಪ್ರಯತ್ನಿಸಿದ ನಿರ್ದೇಶಕ ಶ್ರೀನಿ ಮತ್ತು ತಂಡಕ್ಕೆ ಶಿವಣ್ಣ ಪ್ರಶಂಸೆ ವ್ಯಕ್ತಪಡಿಸಿದರು. ಇದನ್ನೆಲ್ಲ ನೋಡಲು ತಾಯಿ ಇರಬೇಕಾಗಿತ್ತು ಎಂದು ಕೂಡ ಅವರು ಹೇಳಿದ್ದಾರೆ.

ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

ಶಿವರಾಜ್​ಕುಮಾರ್​ ಅವರ ವೃತ್ತಿಜೀವನ ತುಂಬ ಚೆನ್ನಾಗಿ ರೂಪುಗೊಳ್ಳುವಲ್ಲಿ ತಾಯಿ ಪಾರ್ವತಮ್ಮ ರಾಜ್​ಕುಮಾರ್​ ಅವರ ಕೊಡುಗೆ ಸಾಕಷ್ಟು ಇದೆ. ಆರಂಭದ ದಿನಗಳಲ್ಲಿ ‘ಆನಂದ್​’, ‘ರಘ ಸಪ್ತಮಿ’, ‘ಸಂಯುಕ್ತ’, ‘ರಣರಂಗ’ ಮುಂತಾದ ಚಿತ್ರಗಳಲ್ಲಿ ಶಿವಣ್ಣ ಹೇಗೆ ಕಾಣುತ್ತಿದ್ದರೋ ಅದೇ ರೀತಿಯ ಗೆಟಪ್​ ಈಗ ‘ಘೋಸ್ಟ್​’ ಸಿನಿಮಾದಲ್ಲಿ ಕಾಣಿಸಲಿದೆ. ಹಾಗಾಗಿ ಇದನ್ನು ಪಾರ್ವತಮ್ಮ ಅವರು ನೋಡಿದ್ದರೆ ತುಂಬ ಖುಷಿಪಡುತ್ತಿದ್ದರು. ಅವರು ಭೌತಿಕವಾಗಿ ಇಲ್ಲ ಎಂಬುದನ್ನು ನೆನೆದು ಶಿವಣ್ಣ ಕೊಂಚ ಎಮೋಷನಲ್​ ಆದರು.

‘ಮೊದಲಿಗೆ ಶ್ರೀನಿ ಅವರು ಸ್ಯಾಂಪಲ್​ ಮಾತ್ರ ಕಳಿಸಿದ್ದರು. ನಂತರ ನಾನು ನೋಡಿದ್ದು ಕೂಡ ನಿಮ್ಮ ಜೊತೆ. ಈಗ ನೋಡಿದಾಗ ಚೆನ್ನಾಗಿ ಎನಿಸಿತು, ಅಚ್ಚರಿ ಆಯಿತು. ನಾನೇ 1987ರ ಕಾಲಕ್ಕೆ ತೆರಳಿದಂತೆ ಭಾಸವಾಯ್ತು. ಆದರೆ ಇದನ್ನು ನೋಡೋಕೆ ನಮ್ಮ ತಾಯಿ ಇಲ್ಲ ಅಂತ ದುಃಖ ಆಯಿತು. ಯಾಕೆಂದರೆ ‘ಆನಂದ್​’ ಸಿನಿಮಾ ಶುರು ಮಾಡಿದ್ದು ಅವರೇ ತಾನೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ವಿದೇಶದಲ್ಲಿ ವಿಶೇಷ ತಂತ್ರಜ್ಞಾನ ಬಳಸಿ ಈ ಲುಕ್​ ಮಾಡಲಾಗಿದೆ. ಕಥೆಯಲ್ಲಿ ಈ ಗೆಟಪ್​ ಎಷ್ಟು ಮುಖ್ಯವಾಗಲಿದೆ ಎಂಬುದನ್ನು ತಿಳಿಯುವ ಕಾತರ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us