AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಘೋಸ್ಟ್​’ ಸ್ವಾಗತಿಸಿದ ಕಿಚ್ಚ ಸುದೀಪ್​; ಶಿವರಾಜ್​ಕುಮಾರ್ ಲುಕ್ ನೋಡಿ ಫ್ಯಾನ್ಸ್ ಫಿದಾ

ಶ್ರೀನಿ ಅವರು ಸ್ಯಾಂಡಲ್​ವುಡ್​ನಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಶಿವರಾಜ್​​ಕುಮಾರ್ ಚಿತ್ರಕ್ಕೆ ಆ್ಯಕ್ಷನ್​​ಕಟ್​ ಹೇಳುವ ಅವಕಾಶ ಸಿಕ್ಕಿದೆ.ಈಗ ಈ ಚಿತ್ರದ ಫಸ್ಟ್​ ಲುಕ್​ ಅನಾವರಣಗೊಂಡಿದೆ.

‘ಘೋಸ್ಟ್​’ ಸ್ವಾಗತಿಸಿದ ಕಿಚ್ಚ ಸುದೀಪ್​; ಶಿವರಾಜ್​ಕುಮಾರ್ ಲುಕ್ ನೋಡಿ ಫ್ಯಾನ್ಸ್ ಫಿದಾ
ಶಿವಣ್ಣ
TV9 Web
| Edited By: |

Updated on:Jul 12, 2022 | 3:13 PM

Share

ಶಿವರಾಜ್​ಕುಮಾರ್ (Shivarajkumar) ಅವರು ಇಂದು (ಜುಲೈ 12) 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಹೋದರ ಪುನೀತ್​ ರಾಜ್​ಕುಮಾರ್ (Puneeth Rajkumar) ನಿಧನ ಹಿನ್ನೆಲೆಯಲ್ಲಿ ಅವರು ಬರ್ತ್​ಡೇಯನ್ನು ಆಚರಿಸಿಕೊಂಡಿಲ್ಲ. ಆದರೆ, ಶಿವಣ್ಣನ ಬರ್ತ್​ಡೇ ಪ್ರಯುಕ್ತ ಅವರ ನಟನೆಯ ಹೊಸ ಚಿತ್ರಗಳ ಪೋಸ್ಟರ್​ ರಿಲೀಸ್ ಆಗುತ್ತಿದೆ. ಅದರಲ್ಲಿ ಹೆಚ್ಚು ಗಮನ ಸೆಳೆದಿದ್ದು ಶ್ರೀನಿ ನಿರ್ದೇಶನ ಮಾಡುತ್ತಿರುವ ‘ಘೋಸ್ಟ್’ ಚಿತ್ರದ  (Ghost Movie) ಫಸ್ಟ್ ಲುಕ್. ಕಿಚ್ಚ ಸುದೀಪ್ ಅವರು ಈ ಚಿತ್ರದ ಪೋಸ್ಟರ್​ ರಿಲೀಸ್ ಮಾಡಿದ್ದಾರೆ.

ಶ್ರೀನಿ ಅವರು ಸ್ಯಾಂಡಲ್​ವುಡ್​ನಲ್ಲಿ ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಬೀರ್​ಬಲ್​’ ಅಂತಹ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ಓಲ್ಡ್​ ಮಾಂಕ್​’ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುವುದರ ಜತೆಗೆ ನಟಿಸಿದ್ದರು. ಈ ಚಿತ್ರ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಈಗ ಅವರಿಗೆ ಶಿವರಾಜ್​​ಕುಮಾರ್ ಚಿತ್ರಕ್ಕೆ ಆ್ಯಕ್ಷನ್​​ಕಟ್​ ಹೇಳುವ ಅವಕಾಶ ಸಿಕ್ಕಿದ್ದು, ಅವರು ಸಖತ್ ಖುಷಿಪಟ್ಟಿದ್ದಾರೆ. ಶಿವರಾಜ್​ಕುಮಾರ್ ಬರ್ತ್​ಡೇ ಪ್ರಯುಕ್ತ ಚಿತ್ರದ ಫಸ್ಟ್​ ಲುಕ್​ ಅನಾವರಣಗೊಂಡಿದೆ. ಇದನ್ನು ನೋಡಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ
Image
‘ಓಂ’ ಸಿನಿಮಾ ಸ್ಟೈಲ್​ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಗೆ ಶಿವರಾಜ್​ಕುಮಾರ್ ಎಂಟ್ರಿ; ಇಲ್ಲಿದೆ ವಿಡಿಯೋ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

ಶಿವರಾಜ್​ಕುಮಾರ್-ಶ್ರೀನಿ ಕಾಂಬಿನೇಷನ್​ ಚಿತ್ರಕ್ಕೆ ‘ಘೋಸ್ಟ್​’ ಎಂದು ಹೆಸರು ಇಟ್ಟಾಗಲೇ ಕೌತುಕ ಹೆಚ್ಚಾಗಿತ್ತು. ಈಗ ‘ಘೋಸ್ಟ್’ ಚಿತ್ರದ ಪೋಸ್ಟರ್ ಈ ಕೌತುಕವನ್ನು ದ್ವಿಗುಣ ಮಾಡಿದೆ. ಪೋಸ್ಟರ್​ನಲ್ಲಿ ಗನ್ ಹಾಗೂ ಕಾರು ಎರಡೂ ಇದೆ. ಅದರ ಹಿಂದೆ ಶಿವರಾಜ್​ಕುಮಾರ್ ನಿಂತಿದ್ದಾರೆ. ‘ಹ್ಯಾಪಿ ಬರ್ತ್​ಡೇ ಕಿಂಗ್ ಆಫ್ ಆಲ್ ಮಾಸಸ್​’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮಕ್ಕಳಿಂದ ಶಿವರಾಜ್​ಕುಮಾರ್​ಗೆ ಕ್ಯೂಟ್​ ಬರ್ತ್​ಡೇ ವಿಶ್​; ದೇವಸ್ಥಾನದಲ್ಲಿ ವಿಶೇಷ ಪೂಜೆ

ಈ ಪೋಸ್ಟರ್​ಅನ್ನು ಸುದೀಪ್ ಅವರು ಅನಾವರಣ ಮಾಡಿರುವುದು ವಿಶೇಷ.  ಟ್ವಿಟರ್​ನಲ್ಲಿ ಫಸ್ಟ್ ಪೋಸ್ಟರ್ ಹಂಚಿಕೊಂಡು ತಂಡಕ್ಕೆ ಹಾಗೂ ಶಿವಣ್ಣನಿಗೆ ಸುದೀಪ್ ವಿಶ್ ಮಾಡಿದ್ದಾರೆ. ಈ ಟ್ವೀಟ್ ಸಾವಿರಾರು ಬಾರಿ ರೀ ಟ್ವೀಟ್ ಆಗಿದೆ. ಶಿವರಾಜ್​ಕುಮಾರ್ ಜತೆ ಈ ಸಿನಿಮಾದಲ್ಲಿ ಮತ್ತೆ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಸಂದೇಶ್ ಪ್ರೊಡಕ್ಷನ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಇದಲ್ಲದೆ, ‘ಸತ್ಯಮಂಗಳ’, ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳುತ್ತಿರುವ ‘45’ ಚಿತ್ರಗಳ ಬಗ್ಗೆಯೂ ಅಪ್​ಡೇಟ್ ನೀಡಲಾಗಿದೆ.

Published On - 3:11 pm, Tue, 12 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್