AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ

ಕಳೆದ ಒಂದಷ್ಟು ದಿನಗಳಿಂದ ನಟ ಶಿವರಾಜ್​ಕುಮಾರ್​ ಅವರು ತುಂಬ ಬ್ಯುಸಿ ಆಗಿದ್ದಾರೆ. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಈ ಬಾರಿ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗುತ್ತಿದ್ದಾರೆ. ಇಂದು (ಏ.1) ಅವರು ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ
ಆಸ್ಪತ್ರೆಗೆ ದಾಖಲಾದ ಶಿವರಾಜ್​ಕುಮಾರ್​; ಆರೋಗ್ಯ ವಿಚಾರಿಸಲು ಬಂದ ಮಧು ಬಂಗಾರಪ್ಪ
ಮದನ್​ ಕುಮಾರ್​
|

Updated on:Apr 01, 2024 | 6:30 PM

Share

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ (Shivarajkumar) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಇಂದು (ಏಪ್ರಿಲ್​ 1) ಅವರನ್ನು ವಿಠಲ್​ ಮಲ್ಯ ರಸ್ತೆಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಜನರಲ್​ ಚಕಪ್​ ಸಲುವಾಗಿ ಅವರು ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ಮಂಗಳವಾರ (ಏ.2) ಬೆಳಗ್ಗೆ ಅವರನ್ನು ಡಿಸ್ಚಾರ್ಜ್​ ಮಾಡುವ ಸಾಧ್ಯತೆ ಇದೆ. ಶಿವರಾಜ್​ಕುಮಾರ್​ ಅವರನ್ನು ನೋಡಲು ಮಧು ಬಂಗಾರಪ್ಪ (Madhu Bangarappa) ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಶಿವರಾಜ್​ಕುಮಾರ್​ ಅವರು ಸಖತ್​ ಬ್ಯುಸಿ ಆಗಿದ್ದಾರೆ. ಒಂದೆಡೆ ಸಿನಿಮಾ ಕೆಲಸ. ಇನ್ನೊಂದು ಲೋಕಸಭಾ ಚುನಾವಣಾ ಪ್ರಚಾರ. ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಪತ್ನಿ ಪರವಾಗಿ ಪ್ರಚಾರ ಮಾಡಲು ಅವರು ಹಲವು ಊರುಗಳನ್ನು ಸುತ್ತಿದ್ದಾರೆ.

ಶಿವರಾಜ್​ಕುಮಾರ್​ ಅವರಿಗೆ ಈಗ 61 ವರ್ಷ ವಯಸ್ಸು. ಹದಿಹರೆಯದ ಯುವಕನಂತೆ ಅವರು ಈಗಲೂ ಫೈಟಿಂಗ್​ ದೃಶ್ಯಗಳಲ್ಲಿ ನಟಿಸುತ್ತಾರೆ. ಫಿಟ್ನೆಸ್​ ಬಗ್ಗೆ ಕಾಳಜಿ ವಹಿಸುತ್ತಾರೆ. ಅವರ ಎನರ್ಜಿ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಇತ್ತೀಚಿನ ಕೆಲವು ದಿನಗಳಿಂದ ಅವರು ಬಿಡುವಿಲ್ಲದೇ ಗೀತಾ ಶಿವರಾಜ್​ಕುಮಾರ್​ ಪರವಾಗಿ ಪ್ರಚಾರ ಮಾಡಿದ್ದಾರೆ. ಹಾಗಾಗಿ ಅವರು ಕೊಂಚ ದಣಿದಿರುವ ಸಾಧ್ಯತೆ ಇದೆ. ಜನರಲ್​ ಚಕಪ್​ ಸಲುವಾಗಿ ಅವರು ‘ವೈದೇಹಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆ’ಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಗೀತಾ ಸರಿಯಾಗಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ಕೋತೀನಿ ಎಂದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್​ ಹೊಸ ಸಿನಿಮಾ:

ಬ್ಯಾಟ್​ ಟು ಬ್ಯಾಕ್​ ಸಿನಿಮಾ ಮಾಡುವಲ್ಲಿ ಶಿವರಾಜ್​ಕುಮಾರ್​ ಫೇಮಸ್​. ಇತ್ತೀಚೆಗೆ ಅವರು ನಟಿಸಿದ ‘ಕರಟಕ ದಮನಕ’ ಸಿನಿಮಾ ಬಿಡುಗಡೆ ಆಯಿತು. ಈಗ ಅವರ ಇನ್ನೊಂದು ಸಿನಿಮಾ ಅನೌನ್ಸ್ ಆಗಿದೆ. ಆರ್​. ಚಂದ್ರು ಅವರ ‘ಆರ್​ಸಿ ಸ್ಟುಡಿಯೋ’ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ 6ನೇ ಸಿನಿಮಾ ಬಗ್ಗೆ ಮಾಹಿತಿ ನೀಡಲಾಗಿದೆ. ಆ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ನಟಿಸಲಿದ್ದಾರೆ. ಈ ಬಗ್ಗೆ ‘ಎಕ್ಸ್​’ (ಟ್ವಿಟರ್​) ಮೂಲಕ ಆರ್​. ಚಂದ್ರು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೊದಲು ‘ಮೈಲಾರಿ’, ‘ಕಬ್ಜ’ ಸಿನಿಮಾಗಳಲ್ಲಿ ಶಿವರಾಜ್​ಕುಮಾರ್​ ಅವರಿಗೆ ಆರ್​. ಚಂದ್ರು ಆ್ಯಕ್ಷನ್​-ಕಟ್​ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:28 pm, Mon, 1 April 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್